RSS ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಸಿಎಂ ಬೊಮ್ಮಾಯಿ

CM Bommai: ಆರ್‌ಎಸ್‌ಎಸ್‌ ಸಂಘಟನೆಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್‌ಎಸ್‌ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Written by - Prashobh Devanahalli | Edited by - Chetana Devarmani | Last Updated : Jun 5, 2022, 01:25 PM IST
  • ಆರ್‌ಎಸ್‌ಎಸ್‌ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ
  • ಆದರೆ ಜನರಿಗೆ ಆರ್‌ಎಸ್‌ಎಸ್ ಬಗ್ಗೆ ಎಲ್ಲವೂ ತಿಳಿದಿದೆ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
RSS ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಸಿಎಂ ಬೊಮ್ಮಾಯಿ title=
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಸಂಘಟನೆಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್‌ಎಸ್‌ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಬಿಡುವುದಿಲ್ಲ: ಕನ್ನಡದಲ್ಲಿ ರಾಹುಲ್ ಗಾಂಧಿ ಟ್ವೀಟ್

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಆರ್‌ಎಸ್‌ಎಸ್‌ ಸಂಘಟನೆ  ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ. ಹಲವಾರು ಸಂದರ್ಭಗಳಲ್ಲಿ ಅನಾಹುತಗಳಾದಾಗ ಜನರ ಸಂಕಷ್ಟಕ್ಕೆ ಸ್ಪಂದಿಸಲು ಅವರ ಪರವಾಗಿ ನಿಂತಿದೆ ಎಂದಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಆರ್‌ಎಸ್‌ಎಸ್‌ ಉತ್ತಮವಾಗಿ ಕೆಲಸ ಮಾಡಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಆರ್‌ಎಸ್‌ಎಸ್‌ ವಿರೋಧಿಗಳು.  ಅವರ ಇಂತಹ ಧೋರಣೆಯಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕದಲ್ಲಿಯೂ ಹೀಗೆ ಆಗಲಿದೆ ಎಂದು ಹೇಳಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿಯೂ ರಾಜಕೀಯ ಮಾಡುತ್ತಿದ್ದು, ಶಿಕ್ಷಣ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ ಎಂದಿದ್ದಾರೆ. 

ಇದನ್ನೂ ಓದಿ: ದಾರಿ ತಪ್ಪಿದ ಸರ್ಕಾರದಿಂದ ಜನರನ್ನ ದಾರಿ ತಪ್ಪಿಸುವ ಹುನ್ನಾರ: ಬಿ ಕೆ ಹರಿಪ್ರಸಾದ್ ವಾಗ್ದಾಳಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News