ಭಾರತದ ರಾಜಕೀಯ ರಂಗದ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವ ಕರುಣಾನಿಧಿ: ಸಿಎಂ ಕುಮಾರಸ್ವಾಮಿ

ಎಂ.ಕರುಣಾನಿಧಿ ಅವರ ನಿಧನದಿಂದ ಭಾರತದ ರಾಜಕೀಯ ರಂಗದ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Last Updated : Aug 7, 2018, 09:30 PM IST
ಭಾರತದ ರಾಜಕೀಯ ರಂಗದ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವ ಕರುಣಾನಿಧಿ: ಸಿಎಂ ಕುಮಾರಸ್ವಾಮಿ title=

ಬೆಂಗಳೂರು: ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದಿಂದ ಭಾರತದ ರಾಜಕೀಯ ರಂಗದ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚೆನೈನ ಕಾವೇರಿ ಆಸ್ಪತ್ರೆಯಲ್ಲಿ ಇಂದು ಸಂಜೆ ಬಹುಅಂಗಾಂಗ ವೈಫಲ್ಯದಿಂದ ನಿಧನರಾದ ಎಂ.ಕರುಣಾನಿಧಿ(94) ಅವರು ಬದುಕಿರುವಾಗಲೇ ದಂತಕಥೆಯಂತಿದ್ದರು. ಅವರ ನಿಧನದಿಂದ ಆಘಾತವಾಗಿದೆ. ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಸದೃಢಗೊಳಿಸುವಲ್ಲಿ ಕರುಣಾನಿಧಿ ಅವರು ತೋರಿದ ಮುತ್ಸದ್ಧಿತನ ಬಹಳ ವಿಶಿಷ್ಟವಾದುದು ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

Trending News