/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ಇಂದು ಬೆಂಗಳೂರಿಗೆ ಪ್ರಕಾಶ್ ಜಾವಡೇಕರ್ ಆಗಮನ

ಬಿಜೆಪಿ ಪರಿವರ್ತನಾ ಯಾತ್ರೆ ವಿಫಲತೆಗೆ ಸಂಪೂರ್ಣ ಜವಾಬ್ದಾರಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್.

Last Updated : Nov 8, 2017, 11:00 AM IST
ಇಂದು ಬೆಂಗಳೂರಿಗೆ ಪ್ರಕಾಶ್ ಜಾವಡೇಕರ್ ಆಗಮನ title=

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ವಿಫಲತೆ ಕುರಿತು ಬಿಬಿಎಂಪಿ ಸದಸ್ಯರ ಜೊತೆ ಸಭೆ, ಮಂಗಳೂರಿನಲ್ಲಿ ಕೋರ್ ಕಮಿಟಿ ಮೀಟಿಂಗ್ ಮತ್ತಿತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಕಾಶ್ ಜಾವಡೇಕರ್ ಇಂದು ಬೆಳಿಗ್ಗೆ 12 ಗಂಟೆಗೆ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದು, ಬಿಜೆಪಿ ಪರಿವರ್ತನಾ ಯಾತ್ರೆ ವಿಫಲತೆಗೆ ಸಂಪೂರ್ಣ ಜವಾಬ್ದಾರಿರಾದ ಮಾಜಿ ಡಿಸಿಎಂ ಆರ್. ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಂತರ ಬಿಬಿಎಂಪಿ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ಬಿಬಿಎಂಪಿ ಚುನಾವಣೆಯಲ್ಲಿ ಹಿನ್ನೆಡೆ ಹೊಂದಲು ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಿದ್ದಾರೆ. ಆನಂತರದಲ್ಲಿ ಈ ಎಲ್ಲಾ ಮಾಹಿತಿಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾಗೆ ನೀಡಲಿದ್ದಾರೆ.

ಸಭೆ ಮುಕ್ತಾಯಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಂಟಾದ ಗೊಂದಲಗಳಿಗೆ ಸ್ಪಷ್ಟೀಕರಣ ನೀಡುವ ಸಾಧ್ಯತೆ ಇದೆ.