70ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ; ಸಿಎಂ ಶುಭಾಶಯ

ಸಿದ್ದರಾಮಯ್ಯ ಅವರಿಗೆ 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇವರಿಗೆ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

Last Updated : Aug 12, 2018, 10:29 AM IST
70ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ; ಸಿಎಂ ಶುಭಾಶಯ title=

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇವರಿಗೆ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

"ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ ಶ್ರೀ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ದೀರ್ಘ ಆಯಸ್ಸು ಹಾಗೂ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸಮ್ಮಿಶ್ರ ಸರ್ಕಾರವನ್ನು ಮುಂದೆ ಕೊಂಡೊಯ್ಯುವಲ್ಲಿ ಅವರ ಸಲಹೆಗಳು ಅಮೂಲ್ಯವಾದದ್ದು. ರಾಜ್ಯವನ್ನು ಪ್ರಗತಿ ಹಾಗೂ ಸಮೃದ್ಧಿಯತ್ತ ಕೊಂಡೊಯ್ಯುವಲ್ಲಿ ಅವರ ಸಲಹೆಗಳು ಮುಖ್ಯ" ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ 5 ವರ್ಷಗಳ ಆಡಳಿತ ಪೂರೈಸಿದ ಜನನಾಯಕ ಸಿದ್ದರಾಮಯ್ಯ ಅವರು, ಮೈಸೂರಿನ ವರುಣಾ ಹೋಬಳಿಯ ಸಿದ್ದರಾಮನಹುಂಡಿಯಲ್ಲಿ ಆಗಸ್ಟ್ 12, 1948ರಂದು ಜನಿಸಿದವರು. 

ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಜಾರಿಗೆ ತಂದಿದ್ದ ಸಿದ್ದರಾಮಯ್ಯ ಅವರು ದಲಿತವರ್ಗದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿದ್ದರು. 2018, ಮೇ 12ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡರೂ ಬಾದಾಮಿ ಕ್ಷೇತ್ರದಲ್ಲಿ ಜಯಸಾಧಿಸಿ ಶಾಸಕರಾಗಿ ಆಯ್ಕೆಯಾದರು. ಪ್ರಸ್ತುತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿರುವ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆ ಇಟ್ಟಿದ್ದಾರೆ. 
 

Trending News