Bakrid 2022 Guidelines : ಬಕ್ರೀದ್‌ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗ ಸೂಚಿ ಬಿಡುಗಡೆ!

ರಾಜ್ಯ ಸರ್ಕಾರ ಬಕ್ರೀದ್ ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ,  ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ (ಪ್ರಾಣಿ ಬಲಿ) ನೀಡಬೇಕು.

Written by - Zee Kannada News Desk | Last Updated : Jul 8, 2022, 06:36 PM IST
  • ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಪೊಲೀಸರು ಜಾಗೃತಿ
  • ಕ್ರಮಗಳ ಬಗ್ಗೆ ಮೈಕ್ ಮೂಲಕ ಸಾರ್ವಜನಿ ಸ್ಥಳಗಳಲ್ಲಿ ಅನೌನ್ಸ್
  • ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ ಪಾಲಿಸುವಂತೆ ಸೂಚನೆ
Bakrid 2022 Guidelines : ಬಕ್ರೀದ್‌ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗ ಸೂಚಿ ಬಿಡುಗಡೆ! title=

ಬೆಂಗಳೂರು : ರಾಜಧಾನಿಯಲ್ಲಿ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಕ್ರೀದ್ ಹಬ್ಬ ಆಚರಣೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮೈಕ್ ಮೂಲಕ ಸಾರ್ವಜನಿ ಸ್ಥಳಗಳಲ್ಲಿ ಅನೌನ್ಸ್ ಮಾಡುವ ಮೂಲಕ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. 

ಈಗಾಗಲೇ ರಾಜ್ಯ ಸರ್ಕಾರ ಬಕ್ರೀದ್ ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ,  ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ (ಪ್ರಾಣಿ ಬಲಿ) ನೀಡಬೇಕು.

ಇದನ್ನೂ ಓದಿ : Heavy Rain in Karnataka : ಕರಾವಳಿ ಭಾಗದಲ್ಲಿ ಐದು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' 

ಸಾರ್ವಜನಿಕ ಪ್ರದೇಶ,ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನ ಪ್ರಾಣಿ ಬಲಿ ನಿಷೇಧ ಹೇರಲಾಗಿದೆ. ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಂಸ್ಥೆಯ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಮುಸ್ಲಿಂ ಬಾಂದವರು ಖುರ್ಬಾನಿ ಮಾಡಬೇಕು. ಪೊಲೀಸ್ ಇಲಾಖೆ, ಪಶು ಪಾಲನಾ, ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ಪಾಲಿಸುವುದು ಕಡ್ಡಾಯ ಎಂದು ಆದೇಶದಲ್ಲಿ ತಿಳಿಸಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News