ಫೋನ್ ಕದ್ದಾಲಿಕೆ ಆರೋಪ ನಿರಾಧಾರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ನಾನು ಯಾರ ಫೋನನ್ನೂ ಕದ್ದಾಲಿಕೆ ಮಾಡಿಲ್ಲ. ನಾನು ಅಂತಹ ಸಂಸ್ಕೃತಿಯಿಂದ ಬಂದವನಲ್ಲ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Last Updated : Aug 29, 2018, 06:29 PM IST
ಫೋನ್ ಕದ್ದಾಲಿಕೆ ಆರೋಪ ನಿರಾಧಾರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ title=

ರಾಮನಗರ: ದೂರವಾಣಿ ಕದ್ದಾಲಿಕೆ ಮಾಡುತ್ತಿರುವ ಅಂಶ ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು ಆರೋಪ ನಿರಾಧಾರ ಎಂದಿದ್ದಾರೆ. 

ಬುಧವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ನಾನು ಯಾರ ಫೋನನ್ನೂ ಕದ್ದಾಲಿಕೆ ಮಾಡಿಲ್ಲ. ನಾನು ಅಂತಹ ಸಂಸ್ಕೃತಿಯಿಂದ ಬಂದವನಲ್ಲ. ಅಷ್ಟಕ್ಕೂ ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ. ಬೇಕಿದ್ದರೆ ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸಲಿ ಎಂದಿದ್ದಾರೆ. 

ಮತ್ತೊಂದೆಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಉಪಮುಖ್ಯಮಂತ್ರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು 'ನಾವು ಯಡಿಯೂರಪ್ಪ ಅವರದ್ದಾಗಲಿ, ಬೇರೆಯವರದ್ದಾಗಲೀ ಫೋನ್‌ ಕದ್ದಾಲಿಸಿಲ್ಲ. ಅನಧಿಕೃತ ಚಟುವಟಿಕೆ ಮಾಡುವವರ ಫೋನನ್ನು ಮಾತ್ರ ಪೊಲೀಸ್‌ ಇಲಾಖೆ ಟ್ಯಾಪಿಂಗ್‌ ಮಾಡುತ್ತದೆ' ಎಂದಿದ್ದಾರೆ.

Trending News