ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಭಾರತ ಬಂದ್; ರಾಜ್ಯ ಬೆಂಬಲ

ಭಾರತ ಬಂದ್​ಗೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೆಂಬಲ ಘೋಷಿಸಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್, ಆಟೋ, ಟ್ಯಾಕ್ಸಿ ಸೇವೆ ವ್ಯತ್ಯಯವಾಗಲಿದೆ. ವೈದ್ಯಕೀಯ ಸೇವೆಗಳು ಎಂದಿನಂತೆ ಮುಂದುವರಿಯಲಿವೆ.

Last Updated : Sep 10, 2018, 07:52 AM IST
ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಭಾರತ ಬಂದ್; ರಾಜ್ಯ ಬೆಂಬಲ title=

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ಇಂದು ಕರೆ ನೀಡಿರುವ ಭಾರತ್ ಬಂದ್​ಗೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೆಂಬಲ ಘೋಷಿಸಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್, ಆಟೋ, ಟ್ಯಾಕ್ಸಿ ಸೇವೆ ವ್ಯತ್ಯಯವಾಗಲಿದೆ. ವೈದ್ಯಕೀಯ ಸೇವೆಗಳು ಎಂದಿನಂತೆ ಮುಂದುವರಿಯಲಿವೆ.

ರಾಜ್ಯದಲ್ಲಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಸಮಿತಿ ಹಾಗೂ ಕೆಎಸ್​ಆರ್​ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್, ಓಲಾ ಮತ್ತು ಊಬರ್ ಚಾಲಕರ ಸಂಘ, ಕೆಲ ಕನ್ನಡ ಪರ ಸಂಘಟನೆಗಳು, ಕನ್ನಡ ಚಳವಳಿ ವಾಟಾಳ್ ಪಕ್ಷ, ಸಿಐಟಿಯು ಸಂಯೋಜಿತ KSRTC ಹಾಗೂ ಬಿಎಂಟಿಸಿ ನೌಕರರ ಸಂಘಟನೆ, ಕರ್ನಾಟಕ ಜ್ಯೂವೆಲ್ಲರಿ ಅಸೋಸಿಯೇಷನ್ ಭಾರತ್ ಬಂದ್​ಗೆ ತಮ್ಮ ಬೆಂಬಲ ವ್ಯಕ್ತಪಡಿಸಿವೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಭಾರತ್ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯಾ ಜಿಲ್ಲಾಧಿಕಾರಿಗಳಿಗೆ ವರ್ಗಾಯಿಸಿದೆ. ಕೊಡಗಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದ್ದಾರೆ. 

ರಾಜಕೀಯ ಪಕ್ಷಗಳು ಹಾಗೂ ಬಹುತೇಕೆ ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿರುವುದರಿಂದ ರಾಜ್ಯದ ಜನತೆಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೇ. ಹೀಗಾಗಿ ರಾಜ್ಯದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಯಾವುದೆಲ್ಲಾ ಲಭ್ಯವಿಲ್ಲ?
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು, ಐಟಿ-ಬಿಟಿ ಖಾಸಗಿ ವಾಹನಗಳು, ವಿಮಾನ ನಿಲ್ದಾಣದ ಟ್ಯಾಕ್ಸಿಗಳು, ಓಲಾ ಮತ್ತು ಊಬರ್ ವಾಹನಗಳು ರಸ್ತೆಗಿಳಿಯದಿರಲು ನಿರ್ಧರಿಸಿವೆ.

ಇವೆಲ್ಲಾ ಲಭ್ಯ:
ತರಕಾರಿ, ಔಷಧಿ, ಆಸ್ಪತ್ರೆಗಳು, ತುರ್ತು ಸೇವೆಗಳು, ವಸತಿಗೃಹ, ಹೋಟೆಲ್ಗಳು, ಮೆಟ್ರೋ, ಆಟೋಗಳು, ಲಾರಿ ಸೇರಿದಂತೆ ಎಲ್ಲಾ ಬಗೆಯ ಸರಕು ಸಾಗಣೆ ವಾಹನಗಳು ಲಭ್ಯ.

ಇನ್ನು ಭಾರತ್ ಬಂದ್​ಗೆ ಕರೆ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಹಲವು ಅಂಗಡಿ ಮಾಲೀಕರು ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡಲು ನಿರ್ಧರಿಸಿದ್ದು, 'ಸೆಪ್ಟೆಂಬರ್ 10ರಂದು ಸಾಮಾನ್ಯ ದಿನಕ್ಕಿಂತ ಒಂದು ಗಂಟೆ ಹೆಚ್ಚುವರಿ ತೆರೆಯಲಿದ್ದೇವೆ' ಎಂದು ತಮ್ಮ ಅಂಗಡಿಗಳಲ್ಲಿ ಫಲಕ ಹಾಕಿಕೊಂಡಿದ್ದಾರೆ.

Trending News