ಯಾರದ್ದೋ ಲವ್ ಸ್ಟೋರಿ, ಇನ್ಯಾರದ್ದೋ ಮೇಲಿನ ದ್ವೇಷ : ಬಲಿಯಾಗಿದ್ದು ಅಮಾಯಕ..!

ಯಾರದ್ದೋ ಲವ್ ಸ್ಟೋರಿ, ಇನ್ಯಾರ ಮೇಲಿನ ದ್ವೇಷಕ್ಕೆ ರಸ್ತೆಯಲ್ಲಿ ನಿಂತಿದ್ದ ಅಪರಿಚಿತನ ಮೇಲೆ ಮಾರಾಕಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಮಂಜೇಶ್ ಅಂಡ್ ಗ್ಯಾಂಗ್ ಹುಚ್ಚಾಟಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಈಗ ಆಸ್ಪತ್ರೆ ಸೇರಿದ್ದಾನೆ. ದಸಾರ ಮೆರವಣಿಗೆ ವೇಳೆ‌ ನಡೆದಿದ್ದ ಘಟನೆಯ ಅಸಲಿ ಸತ್ಯವನ್ನು ಮಾಗಡಿ ರಸ್ತೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

Written by - VISHWANATH HARIHARA | Edited by - Krishna N K | Last Updated : Oct 8, 2022, 07:57 PM IST
ಯಾರದ್ದೋ ಲವ್ ಸ್ಟೋರಿ, ಇನ್ಯಾರದ್ದೋ ಮೇಲಿನ ದ್ವೇಷ : ಬಲಿಯಾಗಿದ್ದು ಅಮಾಯಕ..! title=

ಬೆಂಗಳೂರು: ಯಾರದ್ದೋ ಲವ್ ಸ್ಟೋರಿ, ಇನ್ಯಾರ ಮೇಲಿನ ದ್ವೇಷಕ್ಕೆ ರಸ್ತೆಯಲ್ಲಿ ನಿಂತಿದ್ದ ಅಪರಿಚಿತನ ಮೇಲೆ ಮಾರಾಕಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಮಂಜೇಶ್ ಅಂಡ್ ಗ್ಯಾಂಗ್ ಹುಚ್ಚಾಟಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಈಗ ಆಸ್ಪತ್ರೆ ಸೇರಿದ್ದಾನೆ. ದಸಾರ ಮೆರವಣಿಗೆ ವೇಳೆ‌ ನಡೆದಿದ್ದ ಘಟನೆಯ ಅಸಲಿ ಸತ್ಯವನ್ನು ಮಾಗಡಿ ರಸ್ತೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

 ಹಲ್ಲೆ ಮಾಡಿದ ಮಂಜೇಶ್‌ಗೆ ಯುವತಿಯೊಬ್ಬಳ ಮೇಲೆ ಪ್ರೀತಿ ಇತ್ತು. ಆದರೆ ಆ ಯುವತಿ ನಿತೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ ತಾನು ಇಷ್ಟಪಟ್ಟ ಯುವತಿ ಪ್ರಿಯಕರನ ಮೇಲೆ ಕೋಪಗೊಂಡಿದ್ದ ಮಂಜೇಶ್ ನಿತೀನ್‌ನನ್ನು ಮಾತಾನಾಡಿಸುವ ನೆಪದಲ್ಲಿ ಕರೆದು ಹಲ್ಲೆ ಮಾಡಲು ತಂತ್ರ ರೂಪಸಿದ್ದ.
ಈ ವೇಳೆ ನಿತೀನ್ ತನ್ನ ಸಹೋದರನ ಜೊತೆ ಬರೋದಾಗಿ ಹೇಳಿದ್ದ. ನಿತೀನ್ ಸಿಗುವುದಾಗಿ ಹೇಳಿದಾಗ ಟೂಲ್ಸ್ ಸಮೇತ ಮಂಜೇಶ್ ಎಂಟ್ರಿ ಕೊಟ್ಟಿದ್ದ. 

ಇದನ್ನೂ ಓದಿ: ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ ʼರೇಮೊʼ ನ. 25ರಂದು ಬಿಡುಗಡೆ

ಈ ವೇಳೆ ತನ್ನ ಗೆಳೆಯನ ಜೊತೆ ನಿಂತಿದ್ದ ದೀಪುವನ್ನ ನೋಡಿ ನಿತೀನ್‌ ಎಂದು ಭಾವಿಸಿ ದೀಪು ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದ್ದಾರೆ. ದಾಳಿಗೂ ಮುನ್ನ ದೀಪುವನ್ನು ಎಲ್ಲೋ ಪ್ರತಾಪ್ ಎಂದು ಕೇಳಿದ್ರು. ಇದಕ್ಕೆ ದೀಪು ಸಹ ನನಗೆ ಗೊತ್ತಿಲ್ಲ ಯಾರೂ ನೀವು ಅಂತಾ ಪ್ರಶ್ನಿಸಿದ್ದ. ಆದರೆ ಮಂಜೇಶ್‌ ಗ್ಯಾಂಗ್‌ ಆತನ ಮಾತು ಕೇಳದೇ ಮನಬಂದಂತೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಮಾಗಡಿ ರಸ್ತೆ ಪೊಲೀಸರು ಮಂಜೇಶನನ್ನು ಬಂಧಿಸಿ ಉಳಿದವರಿಗೆ ಬಲೆ ಬೀಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News