ಮುಸ್ಲಿಂ - ಕ್ರೈಸ್ತರಿಗೆ ನೀಡಿರುವ ಮೀಸಲಾತಿ ವಾಪಸ್ ಪಡೆಯಲು ಸಿಎಂಗೆ ಅರವಿಂದ್ ಬೆಲ್ಲದ್ ಪತ್ರ

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ರಾಜ್ಯದ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.  

Written by - RACHAPPA SUTTUR | Edited by - Ranjitha R K | Last Updated : Oct 11, 2022, 12:33 PM IST
  • ಮುಖ್ಯಮಂತ್ರಿಗೆ ಅರವಿಂದ್ ಬೆಲ್ಲದ್ ಪತ್ರ
  • ಮುಸ್ಲಿಂ - ಕ್ರೈಸ್ತರ ಮೀಸಲಾತಿ ವಾಪಸ್ ಪಡೆಯಲು ಆಗ್ರಹ
  • ಲಿಂಗಾಯತರು, ಕುರುಬರು, ಮರಾಠರಿಗೆ ಮರುಹಂಚಿಕೆ ಮಾಡಲು ಒತ್ತಾಯ
ಮುಸ್ಲಿಂ - ಕ್ರೈಸ್ತರಿಗೆ ನೀಡಿರುವ ಮೀಸಲಾತಿ ವಾಪಸ್ ಪಡೆಯಲು ಸಿಎಂಗೆ ಅರವಿಂದ್ ಬೆಲ್ಲದ್ ಪತ್ರ title=
Aravind Bellad

ಬೆಂಗಳೂರು : ರಾಜ್ಯದ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಬೇಡಿಕೆಯನ್ನು ಮುಂದಿಟ್ಟು, ಅರವಿಂದ್ ಬೆಲ್ಲದ್  ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. 

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ರಾಜ್ಯದ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಮುಸ್ಲಿಮರು ಹಾಗೂ ಕ್ರೈಸ್ತರಿಗೆ ಒಬಿಸಿ ಅಡಿಯಲ್ಲಿ ನೀಡಿರುವ ಮೀಸಲಾತಿ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ. ಆ ಕೋಟಾದಲ್ಲಿ ಲಿಂಗಾಯತರು, ಕುರುಬರು ಮತ್ತು ಮರಾಠರಿಗೆ ಮರುಹಂಚಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ; ಕೇಂದ್ರದ ಮೇಲೆ ಎಚ್ಡಿಕೆ ಕಿಡಿ

ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿ ತಾರತಮ್ಯದಿಂದ ಕೂಡಿದೆ ಎಂದು ಅರವಿಂದ್ ಬೆಲ್ಲದ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಈ ಮೀಸಲಾತಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಮಾತ್ರವಲ್ಲ, ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ  ಮೀಸಲಾತಿಯನ್ನು ವಾಪಸ್ ಪಡೆದು ಬೇರೆ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಒಕ್ಕಲಿಗ ಸಮುದಾಯದಿಂದ 10% ಮೀಸಲಾತಿ ಹೆಚ್ಚಳಕ್ಕೆ ಮನವಿ: ಸಚಿವ ಆರ್. ಅಶೋಕ್ ಹೇಳಿದ್ದೇನು?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News