12 ವರ್ಷಗಳ ಬಳಿಕ ಮಂಗಳನ ಅಂಗಳದಲ್ಲಿ ದೇವಗುರು ಬೃಹಸ್ಪತಿಯ ವಕ್ರ ನಡೆ, ಈ ರಾಶಿಗಳ ಜನರಿಗೆ ಧನಲಾಭದ ಪ್ರಬಲ ಯೋಗ!

Guru Retrograde 2023: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಂಗಳನ ರಾಶಿಯಾಗಿರುವ ಮೇಷ ರಾಶಿಯಲ್ಲಿ ದೇವ ಗುರು ಬೃಹಸ್ಪತಿಯ ವಕ್ರ ನಡೆ (Spiritual News In Kannada) ಆರಂಭಗೊಳ್ಳಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. 
 

ಬೆಂಗಳೂರು: ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿಗಳನ್ನು ಹಾಗೂ ತನ್ನ ನಡೆಯನ್ನು ಪರಿವರ್ತಿಸುತ್ತವೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರುತ್ತದೆ. ಕೆಲವೊಮ್ಮೆ ಈ ಗ್ರಹಗಳು ತನ್ನ ಸ್ನೇಹಿತನ ರಾಶಿಗೆ ಪ್ರವೇಶಿಸಿದರೆ, ಮತ್ತೊಮ್ಮೆ ಶತ್ರುವಿನ ರಾಶಿ ಪ್ರವೇಶಿಸುತ್ತವೆ. ಪ್ರಸ್ತುತ ದೇವಗುರು ಎಂದೇ ಕರೆಯಲಾಗುವ ಬೃಹಸ್ಪತಿ ಮಂಗಳನ ರಾಶಿಯಾಗಿರುವ ಮೇಷ ರಾಶಿಯನ್ನು ಪ್ರವೇಶಿಸಿದ್ದು, ಇದೀಗ ವಕ್ರ ನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಉಂಟಾಗಳಿದ್ದು, ವ್ಯಾಪಾರ-ವೃತ್ತಿಜೀವನದಲ್ಲಿ ಅವರಿಗೆ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ (Spiritual News In Kannada).

 

ಇದನ್ನೂ ಓದಿ-ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣ, 3 ರಾಶಿಗಳ ಜನರ ಜೀವನಲ್ಲಿ ಹಣದ ಹೊಳೆಯೇ ಹರಿಯಲಿದೆ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /5

Guru Retrograde 2023: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಂಗಳನ ರಾಶಿಯಾಗಿರುವ ಮೇಷ ರಾಶಿಯಲ್ಲಿ ದೇವ ಗುರು ಬೃಹಸ್ಪತಿಯ ವಕ್ರ ನಡೆ (Spiritual News In Kannada) ಆರಂಭಗೊಳ್ಳಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ.   

2 /5

ಕರ್ಕ ರಾಶಿ: ಗುರು ನಿಮ್ಮ ಜಾತಕದ ಕರ್ಮ ಭಾವದಲ್ಲಿ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಇದಲ್ಲದೆ ಗುರು ನಿಮ್ಮ ಜಾತಕದ ಆರನೇ ಹಾಗೂ ಒಂಬತ್ತನೇ ಭಾವದ ಅಧಿಪತಿ ಕೂಡ ಹೌದು. ಇದರಿಂದ ನಿಮಗೆ ವೃತ್ತಿ-ವ್ಯಾಪಾರದಲ್ಲಿ ಅಧಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ನೌಕರವರ್ಗದ ಜನರಿಗೆ ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗಲಿದೆ. ವಿದೇಶ ಮತ್ತು ತೀರ್ಥಯಾತ್ರೆಯ ಯೋಗ ನಿರ್ಮಾಣಗೊಳ್ಳುತ್ತಿದೆ . ಕೋರ್ಟ್-ಕಚೇರಿ ವ್ಯವಹಾರಗಳಲ್ಲಿ ಗೆಲುವು ನಿಮ್ಮದಾಗಲಿದೆ. ಧರ್ಮ ಕಾರ್ಯಗಳಲ್ಲಿ ಅಭಿರುಚಿ ಹೆಚ್ಚಾಗಲಿದೆ.  

3 /5

ಸಿಂಹ ರಾಶಿ: ಗುರು ನಿಮ್ಮ ಗೋಚರ ಜಾತಕದ ಅದೃಷ್ಟದ ಸ್ಥಾನದಲ್ಲಿ ವಕ್ರನಡೆ ಅನುಸರಿಸಲಿದ್ದಾನೆ. ನಿಮ್ಮ ಜಾತಕದ ಐದನೇ ಹಾಗೂ ಎಂಟನೇ ಮನೆಯ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆದಾಯದಲ್ಲಿ ಹೆಚ್ಚಳ ಸಾಧ್ಯತೆ ಇದೆ. ಕೌಟುಂಬಿಕ ಜೀವನದಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳಿವೆ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ.   

4 /5

ಧನು ರಾಶಿ: ಗುರು ನಿಮ್ಮ ಜಾತಕದ ಪಂಚಮ ಭಾವದಲ್ಲಿ ತನ್ನ ಹಿಮ್ಮುಖ ನಡೆಯನ್ನು ಅನುಸರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಪ್ರೇಮ ಸಂಬಂಧದಲ್ಲಿ ಯಶಸ್ಸು ಸಿಗಲಿದೆ. ಸಂತಾನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಗುರು ನಿಮ್ಮ ಜಾತಕದ ಲಗ್ನ ಹಾಗೂ ಚತುರ್ಥ ಭಾವಕ್ಕೆ ಅಧಿಪತಿ ಕೂಡ ಹೌದು. ಹೀಗಾಗಿ ಈ ಅವಧಿಯಲ್ಲಿ ನೀವು ಆಸ್ತಿಪಾಸ್ತಿ-ವಾಹನ ಖರೀದಿಸುವ ಸಾಧ್ಯತೆ ಇದೆ. ಗುರು ನಿಮ್ಮ ರಾಶಿಯ ರಾಷ್ಯಾಧಿಪನಾಗಿರುವ ಕಾರಣ ಆತನ ವಕ್ರ ನಡೆ ಆರ್ಥಿಕವಾಗಿ ನಿಮಗೆ ಅತ್ಯಂತ ಲಾಭದಾಯದ ಸಾಬೀತಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)