ಐವತ್ತು ವರ್ಷಗಳ ಬಳಿಕ ವಿಪರೀತ ರಾಜಯೋಗ, ಬುಧನ ಕೃಪೆಯಿಂದ ಈ ಜನರ ಬ್ಯಾಂಕ್ ಬ್ಯಾಲೆನ್ಸ್ ದುಪ್ಪಟ್ಟು!

Budh Gochar 2023 In Scorpio: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬುಧ ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದು , ಇದರಿಂದ ವೃಶ್ಚಿಕ ರಾಶಿಯಲ್ಲಿ ಮಹಾವಿಪರೀತ ರಾಜಯೋಗ ರೂಪುಗೊಂಡಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಅಪಾರ ಧನಲಾಭ ಉಂಟಾಗಲಿದೆ. (Spiritual News In Kannada)
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಶುಭ-ಅಶುಭ ಯೋಗಗಳ ನಿರ್ಮಾಣಕ್ಕೆ ಕಾರಣವಾಗುತ್ತವೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ಪ್ರಸ್ತುತ ಗ್ರಹಗಳ ರಾಜಕುಮಾರ ಎಂದೇ ಖ್ಯಾತ ಬುದ್ಧಿದಾತ ಬುಧ ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದು, ಇದರಿಂದ ಅಲ್ಲಿ ಮಹಾವಿಪರೀತ ರಾಜಯೋಗ ನಿರ್ಮಾಣಗೊಂಡಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಉಂಟಾಗಲಿದೆ. ಆದರೆ ಕೆಲ ರಾಶಿಗಳ ಜನರಿಗೆ ಮಾತ್ರ ಈ ಮಹಾವಿಪರೀತ ರಾಜಯೋಗ ವೃತ್ತಿ ವ್ಯಾಪಾರದಲ್ಲಿ ಅಪಾರ ಉನ್ನತಿಯ ಯೋಗ ರೂಪಿಸುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ -ಗ್ರಹಗಳ ಸೇನಾಪತಿ ಮಂಗಳನಿಂದ ಕೇಂದ್ರ ತ್ರಿಕೋನ ರಾಜಯೋಗ ರಚನೆ, ಈ ರಾಶಿಗಳ ಜನರ ಗೋಲ್ಡನ್ ಟೈಮ್ ಆರಂಭ!

 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಮೇಷ ರಾಶಿ: ನಿಮ್ಮ ಪಾಲಿಗೆ ಮಹಾವಿಪರೀತ ರಾಜಯೋಗ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ಅಷ್ಟಮ ಭಾವದಲ್ಲಿ ಮಂಗಳನ ಸಂಚಾರವಿದ್ದು, ಆತನ ಮೇಲೆ ಶನಿ ಹಾಗೋ ರಾಹು ಬೀರಿದ್ದಾರೆ. ಇವರಿಬ್ಬರು ಬುಧನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾರೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ ಮತ್ತು ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾದ್ಯತೆ ಇದೆ. ವ್ಯಾಪಾರದಲ್ಲಿ ಉತ್ತಮ ಆರ್ಡರ್ ಗಳು ನಿಮಗೆ ಲಭಿಸಲಿವೆ. ಇದರಿಂದ ನಿಮ್ಮ ಆದಾಯದಲ್ಲಿ ಹೆಚ್ಚಾಗಲಿದೆ. 

2 /7

ಮಿಥುನ ರಾಶಿ: ಮಹಾವಿಪರೀತ ರಾಜಯೋಗ ನಿಮ್ಮ ಪಾಲಿಗೂ ಕೂಡ ಅದ್ಭುತ ಸಾಬೀತಾಗಲಿದೆ. ಏಕೆಂದರೆ ಬುಧ ನಿಮಗೆ ನಿಮ್ಮ ರಾಷ್ಯಾಧಿಪನಾಗಿದ್ದಾನೆ. ನಿಮ್ಮ ಜಾತಕದ ಮೂರನೇ ಹಾಗೂ ಆರನೇ ಮನೆಗೆ ಅಧಿಪತಿಯಾಗಿದ್ದಾನೆ. ಜೊತೆಗೆ ಶನಿ ಹಾಗೂ ರಾಹುವಿನ ದೃಷ್ಟಿ ಕೂಡ ಬೀರಿದ್ದಾರೆ. ಇದರಿಂದ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ವಾಹನ, ಆಸ್ತಿಪಾಸ್ತಿ ಖರೀದಿ ಯೋಗದ ಎಲ್ಲಾ ಸಂಕೇತಗಳಿವೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. 

3 /7

ಕರ್ಕ ರಾಶಿ: ಬುಧ ನಿಮ್ಮ ಗೋಚರ ಜಾತಕದ ತೃತೀಯ ಹಾಗೂ ದ್ವಾದಶ ಭಾವಕ್ಕೆ ಅಧಿಪತಿ. ಶನಿ ಹಾಗೂ ರಾಹುಗಳ ದೃಷ್ಟಿ ಕೂಡ ಆತನ ಮೇಲಿರುವ ಕಾರಣ ಈ ಅವಧಿಯಲ್ಲಿ ನಿಮಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಎಲ್ಲಾದರು ನಿಮ್ಮ ಹಣ ಸಿಲುಕಿಕೊಂಡಿದ್ದರೆ, ವಿಪರೀತ ರಾಜಯೋಗದ ಕಾರಣ ನಿಮಗೆ ಆ ಹಣ ಸಿಗಲಿದೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಯಿರಲಿದೆ ಹಾಗೂ ನೀವು ಬೆಲೆ ಬಾಳುವ ವಸ್ತು ಖರೀದಿಸುವ ಸಾಧ್ಯತೆ ಇದೆ. ಬಿಸ್ನೆಸ್ ಮಾಡುವವರಿಗೆ ಅದರಲ್ಲೂ ವಿಶೇಷ ಲಾಭದ ಸಂಕೇತಗಳು ನಿರ್ಮಾಣಗೊಳ್ಳುತ್ತಿವೆ. 

4 /7

ಮಕರ ರಾಶಿ: ನಿಮ್ಮ ಜಾತಕದ ಲಾಭ ಸ್ಥಾನದಲ್ಲಿ ಈ ವಿಪರೀತ ರಾಜಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ನಿಮ್ಮ ಆದಾಯದಲ್ಲಿ ಜಬರ್ದಸ್ತ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಅದರ ಜೊತೆಗೆ ನಿಮ್ಮ ಆಸೆ ಆಕಾಂಕ್ಷೆಗಳೂ ಕೂಡ ಈಡೇರಲಿವೆ. ನಿಮಗಾಗಿ ಹೊಸ ವಾಹನ ಖರೀದಿ ಯೋಗ ರೂಪುಗೊಳ್ಳುತ್ತಿದೆ. ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ಸಿಗಲಿದ್ದು, ಘನತೆ-ಗೌರವ-ಪದೋನ್ನತಿ ಪ್ರಾಪ್ತಿಯಾಗಲಿದೆ. ಕಾರ್ಯಸ್ಥಳದಲ್ಲಿ ನೌಕರ ವರ್ಗದ ಜನರ ಪ್ರಭಾವ ಹೆಚ್ಚಾಗಲಿದೆ. ಹೊಸ ಜವಾಬ್ದಾರಿ ನಿಮಗೆ ಸಿಗುವ ಸಾಧ್ಯತೆ ಇದೆ. 

5 /7

ಕನ್ಯಾ ರಾಶಿ: ಬುಧ ನಿಮ್ಮ ರಾಶಿಗೆ ಅಧಿಪತಿಯಾಗಿದ್ದು ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಆದರೆ ಆತನ ಸ್ಥಾನ ನಿಮ್ಮ ಜಾತಕದ ಆರನೇ ಮನೆಯಾಗಿದೆ. ಇದರ ಜೊತೆಗೆ ಶನಿಯ ದಶಮ ದೃಷ್ಟಿ ಹಾಗೋ ರಾಹುವಿನ ನವಮ ದೃಷ್ಟಿ ಬೀಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಮತ್ತು ನಿಂತುಹೋದ ಹಣ ನಿಮ್ಮ ಕೈಸೇರಲಿದೆ. ವಾಹನ-ಸಂಪತ್ತು ಖರೀದಿಸುವ ನಿಮ್ಮ ಬಯಕೆ ಈಡೇರಲಿದೆ. ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ವ್ಯಾಪಾರಿಗಳಲ್ಲಿ ಅದರಲ್ಲೂ ವಿಶೇಷವಾಗಿ ಧನಲಾಭದ ಎಲ್ಲಾ ಸಾಧ್ಯತೆಗಳಿವೆ. ಆದರೆ ಆರೋಗ್ಯದ ಬಗ್ಗೆ ಸ್ವಲ್ಪ ಜಾಗರೂಕರಾಗಿರಿ. 

6 /7

ಧನು ರಾಶಿ: ಮಹಾವಿಪರೀತ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ದ್ವಾದಶ ಭಾವದಲ್ಲಿದ್ದಾನೆ. ರಾಹು ಶನಿಗಳ ದೃಷ್ಟಿ ಕೂಡ ಬೀಳುತ್ತಿದೆ. ಹೀಗಾಗಿ ಕೆಲಸ ಕಾರ್ಯಗಳಲ್ಲಿ ನಿಮಗೆ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ಸಾಲಬಾಧೆಯಿಂದ ಮುಕ್ತಿ ಸಿಗಲಿದೆ. ವಿದೇಶಕ್ಕೆ ಹೋಗುವ ಯೋಗ ನಿರ್ಮಾಣಗೊಳ್ಳುತ್ತಿದೆ. ಅಲ್ಲಿ ಯಾವುದಾದರೊಬ್ಬ ಸಂಬಂಧಿಕರ ಭೇಟಿ ನಡೆಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಾಗಿದ್ದರೆ, ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡುವ ನಿಮ್ಮ ಆಸೆ ಈಡೇರುವ ಸಾಧ್ಯತೆ ಇದೆ. 

7 /7

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)