ವರ್ಷದ ಬಳಿಕ ತುಲಾ ರಾಶಿಯಲ್ಲಿ ಸೂರ್ಯ-ಮಂಗಳರ ಮೈತ್ರಿ, ಈ ರಾಶಿಗಳ ಜನರಿಗೆ ಧನ ಕುಬೇರ-ಲಕ್ಷ್ಮಿ ಕೃಪಾಯೋಗ!

Tue, 12 Sep 2023-5:31 pm,

ವೈದಿಕ ಪಂಚಾಂಗದ ಪ್ರಕಾರ ಶೀಘ್ರದಲ್ಲಿಯೇ ತುಲಾ ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ ಹಾಗೂ ಭೂಮಿಪುತ್ರ ಮಂಗಳರ ಯುತಿ ನೆರವೇರಲಿದೆ. ಸೂರ್ಯ-ಮಂಗಳರ ಈ  ಯುತಿಯಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಧನಕುಬೇರ-ಲಕ್ಷ್ಮಿಯ ಅಪಾರ ಕೃಪೆ ಪ್ರಾಪ್ತಿಯಾಗಲಿದ್ದು, ಅವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.   

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿ ಪರಿವರ್ತನೆಯನ್ನು ಮಾಡಿಕೊಳ್ಳುವ ಮೂಲಕ ಇತರ ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಅವುಗಳ ಈ ಯುತಿಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳು ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಕಂಡುಬರುತ್ತದೆ. ಪ್ರಸ್ತುತ ತುಲಾ ರಾಶಿಯಲ್ಲಿ ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ಹಾಗೂ ಭೂಮಿಪುತ್ರ ಅಥವಾ ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳರ ಯುತಿ ನೆರವೇರಲಿದೆ. ಸುದೀರ್ಘ ಒಂದು ವರ್ಷದ ಅವಧಿಯ ಬಳಿಕ ಈ ಯುತಿ ರೂಪುಗೊಳ್ಳುತ್ತಿದೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ತನ್ನ ಪ್ರಭಾವವನ್ನು ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜಾತಕದವರಿಗೆ ಈ ಯುತಿಯಿಂದ ಧನ ಕುಬೇರ-ಲಕ್ಷ್ಮಿಯ ಅಪಾರ ಕೃಪೆ ಪ್ರಾಪ್ತಿಯಾಗಿ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಅವರ ಜೀವನದಲ್ಲಿ ಈ ಯುತಿ ಭಾಗ್ಯೋದಯಕ್ಕೆ ಕಾರಣವಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,   

ಮಕರ ರಾಶಿ- ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ಈ ಯುತಿ ನೆರವೇರುತ್ತಿದೆ. ಹೀಗಾಗಿ ಇದು ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದ ಮೂಲಗಳು ವೃದ್ಧಿಯಾಗಲಿವೆ. ವ್ಯಾಪಾರಿಗಳಿಗೆ ವ್ಯವಸಾಯದಲ್ಲಿ ಹೂಡಿಕೆಯಿಂದ ಲಾಭವಾಗಲಿದೆ ಮತ್ತು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಲಾಭ ಕೂಡ ಹೆಚ್ಚಾಗಲಿದೆ. ಬಿಸ್ನೆಸ್ ನಲ್ಲಿ ಹೊಸ ಐಡಿಯಾಗಳ ಮೇಲೆ ನೀವು ಕಾರ್ಯ ನಿರ್ವಹಿಸುವಿರಿ. ನೌಕರವರ್ಗದ ಜನರಿಗೆ ಹೊಸ ನೌಕರಿಯ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಕೂಡ ಸಿಗುವ ಸಾಧ್ಯತೆ ಕೂಡ ಇದೆ. ತಂದೆಯ ವಿಶೇಷ ಬೆಂಬಲ ನಿಮಗೆ ಪ್ರಾಪ್ತಿಯಾಗಲಿದೆ.  

ಕುಂಭ ರಾಶಿ: ಮಂಗಳ ಹಾಗೂ ಸೂರ್ಯ ಯುತಿ ನಿಮ್ಮ ಪಾಲಿಗೆ ಮಂಗಳಕರ ಸಾಬೀತಾಗಲಿದೆ. ಏಕೆಂದರೆ ಈ ಯುತಿ ನಿಮ್ಮ ಗೋಚರ ಜಾತಕದ ಭಾಗ್ಯ ಸ್ಥಾನದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಾತ್ರೆ ಜರುಗುವ ಸಾಧ್ಯತೆ ಇದೆ ಮತ್ತು ಈ ಯಾತ್ರೆಗಳು ನಿಮಗೆ ಸಾಕಷ್ಟು ಲಾಭವನ್ನು ತಂದು ಕೊಡಲಿವೆ. ಹಣಗಳಿಕೆಯ ಅವಕಾಶಗಳು ಕೂಡ ಒದಗಿಬರಲಿವೆ. ಸ್ವಂತ ವ್ಯಾಪಾರ ಹೊಂದಿದ್ದಾರೆ ನಿಮ್ಮ ಆದಾಯ ಹೆಚ್ಚಾಗಲಿದೆ. ಮನೆ ಅಥವಾ ಕುಟುಂಬದಲ್ಲಿ ಧಾರ್ಮಿಕ ಅಥವಾ ಮಂಗಳ ಕಾರ್ಯಗಳು ನೆರವೇರುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡಲು ಬಯಸುವವರ ಇಚ್ಛೆ ಈಡೇರಲಿದೆ.   

ಮಿಥುನ ರಾಶಿ: ಸೂರ್ಯ ಮಂಗಳರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇದಲ್ಲದೆ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸಮಾಚಾರ ನಿಮಗೆ ಪ್ರಾಪ್ತಿಯಾಗಲಿದೆ. ನಿಂತು ಹೋದ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಂಗಾತಿಯ ಜೊತೆಗೆ ನಿಮ್ಮ ಸಂಬಂಧ ಮೊದಲಿಗಿಂತ ಉತ್ತಮವಾಗಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link