Diwali 2023 ಬಳಿಕ ಮಂಗಳನ ಮನೆಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣ, ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ ಈ ಜನರ ಮೇಲೆ ಅಪಾರ ಕನಕವೃಷ್ಟಿ ಯೋಗ!

Sun, 05 Nov 2023-3:33 pm,

Diwali 2023 Horoscope: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ದೀಪಾವಳಿ ಹಬ್ಬದ ಬಳಿಕ ವೃಶ್ಚಿಕ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ. ಈ ರಾಜಯೋಗ ಮೂರು ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳನ್ನು ಆರಂಭಿಸಲಿದೆ. (Spiritual News In Kannada) 

ತುಲಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಈ ಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಸಂಭವಿಸಲಿದೆ. ಈ ಸಮಯದಲ್ಲಿ ಸಿಲುಕಿಹಾಕಿಕೊಂಡ ನಿಮ್ಮ ಧನ ನಿಮ್ಮತ್ತ ಮರಳಲಿದೆ. ನೌಕರವರ್ಗದ ಜನರ ಆದಾಯ ಹೆಚ್ಚಾಗಲಿದೆ ಮತ್ತು ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ನೀವು ಯಶಸ್ವಿಯಾಗುವಿರಿ. ನಿಮ್ಮ ಕಠಿಣ ಪರಿಶ್ರಮದಿಂದ ವೃತ್ತಿ ಕ್ಷೇತ್ರದಲ್ಲಿ ಜಬರ್ದಸ್ತ್ ಯಶಸ್ಸು ನಿಮಗೆ ಸಿಗಲಿದ್ದು, ಕೌಟುಂಬಿಕ ಜೀವನದಲ್ಲಿ ಸುಖ-ಶಾಂತಿ ಇರಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಳಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಮಾರ್ಕೆಟಿಂಗ್, ಮಾಧ್ಯಮ, ಶಿಕ್ಷಣ ಹಾಗೂ ಸಂವಹನ ಕ್ಷೇತ್ರದಲ್ಲಿರುವ ಜನರಿಗೆ ಈ ಸಮಯ ಅದ್ಭುತವಾಗಿರಲಿದೆ. 

ಸಿಂಹ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವ್ಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಸುಖ-ಸಮೃದ್ಧಿಯಲ್ಲಿ ಹೆಚ್ಚಳವನ್ನು ನೀವು ಗಮನಿಸಬಹುದು. ಐಷಾರಾಮಿ ವಸ್ತುಗಳ ಖರೀದಿಗೆ ನಿಮ್ಮ ಒಲವು ಹೆಚ್ಚಾಗಲಿವೆ. ನಿಮ್ಮ ಕೆಲಸ ರಿಯಲ್ ಎಸ್ಟೇಟ್, ಭೂಮಿ ಹಾಗೂ ಆಸ್ತಿಪಾಸ್ತಿಗೆ ಸಂಬಂಧಿಸಿದ್ದರೆ, ಉತ್ತಮ ಲಾಭ ನಿಮ್ಮದಾಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. 

ಮಕರ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಆದಾಯ ಹಾಗೂ ಲಾಭದ ಸ್ಥಾನದಲ್ಲಿ ನಿರ್ಮಾಣಗೊಂಡಿದೆ. ಹೀಗಾಗಿ ಈ ಅವಧಿಯಲ್ಲಿ ಜಬರ್ದಸ್ತ್ ಹೆಚ್ಚಳವಾಗಿದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಸಂಪೂರ್ಣ ಬೆಂಬಲ ಸಿಗುವ ಕಾರಣ ನಿಂತು ಹೋದ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಸಿಲುಕಿಕೊಂಡ ಹಣ ನಿಮ್ಮ ಕೈಸೇರುವ ಸಾಧ್ಯತೆ ಇದೆ. ಇನ್ನೊಂದೆಡೆ ನಿಮ್ಮ ಆದಾಯದಲ್ಲಿ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ನೌಕರವರ್ಗದ ಜನರಿಗೆ ಕಾರ್ಯಕ್ಷೇತ್ರದಲ್ಲಿ ಪ್ರಭಾವ ಹೆಚ್ಚಾಗಲಿದೆ. ಕಾರ್ಯಸ್ಥಳದಲ್ಲಿ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ನಿಮ್ಮ ಸಂಬಂಧಗಳು ಉತ್ತಮವಾಗಿರಲಿವೆ. ದೀರ್ಘಕಾಲದಿಂದ ಸಂತಾನ ಅಪೇಕ್ಷೆ ಹೊಂದಿರುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ನಿರೀಕ್ಷೆ ಇದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link