ಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿ

Wed, 26 Jun 2024-10:37 am,

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುತ್ತಿದ್ದರೆ ಅದು ಕೀಲುಗಳಲ್ಲಿ ಸಂಗ್ರಹಗೊಳ್ಳಲು ಆರಂಭವಾಗುತ್ತದೆ.ಆಗ ಕೀಲುಗಳಲ್ಲಿ ಅಲ್ಲಲ್ಲಿ ಊತ ಕಾಣಿಸಿಕೊಳ್ಳುತ್ತದೆ.ಅಸಹನೀಯ ನೋವು ಕೂಡಾ ಇರುತ್ತದೆ. 

ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ನಿತ್ಯ  ಓಮಕಾಳನ್ನು ಸೇವಿಸುವುದರಿಂದ ಸುಲಭವಾಗಿ ಯೂರಿಕ್ ಆಸಿಡ್ ಅನ್ನು ನಿಯಂತ್ರಣಕ್ಕೆ ತರಬಹುದು.

ಓಮಕಾಳು ಅಥವಾ ಅಜ್ವಾಯಿನ್ ಉರಿಯೂತದ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿರುವ ಮಸಾಲೆ. ಇದು ಯೂರಿಕ್ ಆಸಿಡ್ ಅನ್ನು ತ್ವರಿತ ಮಟ್ಟದಲ್ಲಿ ನಿಯಂತ್ರಣಕ್ಕೆ ತರುತ್ತದೆ. 

ಇದು ಕೀಲುಗಳಲ್ಲಿ ಸಂಗ್ರಹವಾಗಿರುವ ಪ್ಯೂರಿನ್ ಹರಳುಗಳು ಒಡೆಯಲು ಪ್ರಾರಂಭಿಸುತ್ತವೆ. ಈ ಮೂಲಕ ಯೂರಿಕ್ ಆಸಿಡ್ ನಿಯಂತ್ರಣಕ್ಕೆ  ಬರುತ್ತದೆ.   

ಅಜ್ವಾಯಿನ್ ಅಥವಾ ಓಮಕಾಳನ್ನು ರಾತ್ರಿಯಿಡೀ ಒಂದು ಪಾತ್ರೆಯಲ್ಲಿ ನೆನೆಸಿಡಿ. ಬೆಳಿಗ್ಗೆ ಇದನ್ನು ಫಿಲ್ಟರ್ ಮಾಡಿ ನೀರನ್ನು ಕುಡಿಯಿರಿ. ಇದು ಯೂರಿಕ್ ಆಸಿಡ್ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.  

ಇನ್ನು ಒಂದು ಲೋಟ ನೀರಿಗೆ ಅರ್ಧ ಚಮಚ ಒಮಕಾಳು ಹಾಕಿ ಸ್ವಲ್ಪ ತುರಿದ ಶುಂಠಿಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಚಹಾದಂತೆ ಕುಡಿಯಿರಿ.ಇದು ಶೀಘ್ರದಲ್ಲೇ ಯೂರಿಕ್ ಆಸಿಡ್ ಅನ್ನು ನಿಯಂತ್ರಣಕ್ಕೆ ತರುತ್ತದೆ.

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link