ನಿತ್ಯ ರಾತ್ರಿ ಹೊಕ್ಕಳಿಗೆ ಈ ಎಣ್ಣೆ ಹಚ್ಚಿದರೆ ಮಂಡಿ ನೋವು ಶಾಶ್ವತವಾಗಿ ದೂರವಾಗುವುದು !

Wed, 28 Feb 2024-11:35 am,

ಹೊಕ್ಕುಳಕ್ಕೆ ಹರಳೆಣ್ಣೆ ಹಚ್ಚುವ ಪ್ರಕ್ರಿಯೆ ತುಂಬಾ ಪ್ರಯೋಜನಕಾರಿ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಹರಳೆಣ್ಣೆಯನ್ನು ಪ್ರತಿದಿನ ಹೊಕ್ಕುಳಕ್ಕೆ ಹಚ್ಚುವುದರಿಂದ ಗ್ಯಾಸ್, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನಂತಹ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.

ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ತೀವ್ರವಾದ ನೋವನ್ನು ಅನುಭವಿಸುತ್ತಾರೆ. ಅಂಥಹ ಪರಿಸ್ಥಿತಿಯಲ್ಲಿ, ಹರಳೆಣ್ಣೆಯನ್ನು ಹೊಕ್ಕಳಿಗೆ  ಹಚ್ಚುವುದರಿಂದ ಪಿರಿಯಡ್ಸ್ ಸಮಯದಲ್ಲಿ ಕಾಣಿಸಿಕೊಳ್ಳುವ ನೋವಿನಿಂದ ಪರಿಹಾರ ಸಿಗುತ್ತದೆ.   

ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ಕೀಲುಗಳಲ್ಲಿನ ನೋವು ಮತ್ತು ಊತವನ್ನು ನಿವಾರಿಸಬಹುದು. ಸಂಧಿವಾತದಿಂದ ಉಂಟಾಗುವ ಕೀಲು ನೋವು ಊತ ಮತ್ತು ಸೆಳೆತದಿಂದ ಪರಿಹಾರವನ್ನು ಒದಗಿಸಲು ಇದು ಸಹಾಯ ಮಾಡುತ್ತದೆ.  

ಹರಳೆಣ್ಣೆಯನ್ನು ಹೊಕ್ಕುಳಕ್ಕೆ ಹಚ್ಚುವುದರಿಂದ ಚರ್ಮ ಮತ್ತು ತುಟಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮೊಡವೆ, ಅಲರ್ಜಿ ಮತ್ತು ಕಲೆಗಳಂತಹ ಚರ್ಮದ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.ಇದಲ್ಲದೇ ಪ್ರತಿ ರಾತ್ರಿ ಮಲಗುವ ಮುನ್ನ ಹೊಕ್ಕುಳಕ್ಕೆ ಹರಳೆಣ್ಣೆ ಹಚ್ಚುವುದರಿಂದ ತುಟಿಗಳು ಬಿರುಕು ಬಿಡುವುದನ್ನು ತಡೆಯಬಹುದು.  

ಹರಳೆಣ್ಣೆಯನ್ನು  ಹೊಕ್ಕುಳಕ್ಕೆ ಹಚ್ಚುವುದರಿಂದ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸಬಹುದು. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಫಂಗಲ್ ಗುಣಗಳಿದ್ದು, ಇದು ಹಾನಿಕಾರಕ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link