`ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಬ್ರೇಕ್ ಅಪ್ ಆಗಲು ನಾನೇ ಕಾರಣ`

Sun, 24 Jul 2022-2:06 pm,

ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಭವಿಷ್ಯ ನುಡಿದಿರುವ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ, ನಾಯಕ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಬ್ರೇಕ್ ಅಪ್ ಆಗಲು ನಾನೇ ಕಾರಣ ಎಂದಿದ್ದಾರೆ. 

ನಿಮ್ಮ ಜಾತಕಕ್ಕೆ ತಕ್ಕಂತೆ ಸೆಟ್ ಆಗದ ಕಾರಣ ಅವರ ಜೊತೆ ಬ್ರೇಕ್ ಅಪ್ ಆಗುವುದು ಒಳ್ಳೆಯದು ಎಂದು ಸಲಹೆ ನೀಡಿದ್ದೆ. ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ನನ್ನ ಸಲಹೆಯಂತೆ ಅವರ ಜೊತೆ ಬ್ರೇಕ್ ಅಪ್ ಮಾಡಿಕೊಂಡಿದ್ದಾರೆ ಎಂದು ವೇಣು ಸ್ವಾಮಿ ಹೇಳಿದ್ದಾರೆ. 

ನಟಿ ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಪಕ್ಷ, ಸ್ಥಾನ ಸೇರಿದಂತೆ ರಶ್ಮಿಕಾ ಶೀಘ್ರದಲ್ಲೇ ಸಂಸದೆಯಾಗುತ್ತಾರೆ ಎಂದು ಹೇಳಿದ್ದಾರೆ.  ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರ ಇತ್ತೀಚಿನ ಮಾತುಗಳು ವೈರಲ್ ಆಗಿವೆ. 

ಸೆಲೆಬ್ರಿಟಿಗಳ ಪರ್ಸನಲ್ ವಿಚಾರಗಳ ಬಗ್ಗೆ ವೇಣು ಸ್ವಾಮಿ ಅವರ ಇತ್ತೀಚಿನ ವಿಡಿಯೋ ವೈರಲ್ ಆಗುತ್ತಿದೆ. ಇಂಡಸ್ಟ್ರಿಯಲ್ಲಿಯೂ ಅವರಿಗೆ ಒಂದಷ್ಟು ವಿಶ್ವಾಸಾರ್ಹತೆ ಇದೆ. ಸೆಲೆಬ್ರಿಟಿಗಳು ಅವರ ಮಾತನ್ನು ನಂಬುತ್ತಾರೆ. 

ಇತ್ತೀಚಿನ ಸಂದರ್ಶನದಲ್ಲಿ, ವೇಣು ಸ್ವಾಮಿ ರಶ್ಮಿಕಾ ಮಂದಣ್ಣ ಅವರ ವೃತ್ತಿಜೀವನ ಮತ್ತು ರಾಜಕೀಯ ಪ್ರವೇಶದ ಬಗ್ಗೆ ಆಸಕ್ತಿದಾಯಕ ಮಾತುಗಳನ್ನು ಆಡಿದ್ದಾರೆ. ಅವರು ನಿರ್ದಿಷ್ಟ ಪಕ್ಷದಿಂದ ಸಂಸದರಾಗುತ್ತಾರೆ ಎಂದು ಹೇಳಿದ್ದಾರೆ. 

ಅದೇ ಸಮಯದಲ್ಲಿ ಪಕ್ಷ ಮತ್ತು ಸ್ಥಳವನ್ನು ಉಲ್ಲೇಖಿಸಿದ ವೇಣು ಸ್ವಾಮಿ ಅವರ ಈ ಮಾತುಗಳು ಫುಲ್‌ ವೈರಲ್ ಆಗಿವೆ. ಸ್ಟಾರ್ ಹೀರೋಯಿನ್ ಆಗಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ರಾಜಕೀಯದ ಕಡೆಗೇಕೆ ಹೋಗುತ್ತಿದ್ದಾರೆ ಎಂಬ ಕುತೂಹಲ ಜನರಲ್ಲಿ ಮೂಡಿದೆ. ವೇಣು ಸ್ವಾಮಿ ರಶ್ಮಿಕಾ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಕೆಲವು ಮಾತುಗಳನ್ನು ಹೇಳಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link