ಮಧುಮೇಹ ರೋಗಿಗಳು ಶುಗರ್ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಪಥ್ಯವೇ ಮಾಡಬೇಕೆಂದಿಲ್ಲ. ಬೆಳಗ್ಗಿನ ಉಪಹಾರಕ್ಕೆ ಮುನ್ನ ಒಂದು ಚಮಚ ಈ ಎಣ್ಣೆಯನ್ನು ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣದಲ್ಲಿರುವುದು.
ಬೆಂಗಳೂರು : ಮಧುಮೇಹವು ಅಪಾಯಕಾರಿ ಕಾಯಿಲೆಯಾಗಿದೆ. ಮಧುಮೇಹದಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಬೇಕಾದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಮುಖ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
ಮಧುಮೇಹವಿದ್ದಾಗ ವ್ಯಕ್ತಿಯು ಏನನ್ನೇ ತಿಂದರೂ ಅಥವಾ ಕುಡಿದರೂ ಅದು ತಕ್ಷಣವೇ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ.
ಮಧುಮೇಹವಿದ್ದವರು ಬೆಳಿಗ್ಗೆ ಏನನ್ನು ತಿನ್ನುತ್ತಾರೆ ಎನ್ನುವುದರ ಮೇಲೆ ಅವರ ಇಡೀ ದಿಂದ ಬ್ಲಡ್ ಶುಗರ್ ನಿರ್ಧಾರವಾಗುತ್ತದೆ.ಸರಿಯಾದ ಆಹಾರದೊಂದಿಗೆ ದಿನ ಆರಂಭವಾದರೆ ದಿನವಿಡೀ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಇವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಯಾವುದೇ ಕಾರಣಕ್ಕೂ ಬ್ಲಡ್ ಶುಗರ್ ಏರಿಕೆಯಾಗುವುದಿಲ್ಲ.
ನೆನೆಸಿದ ಚಿಯಾ ಬೀಜಗಳು : ಮಧುಮೇಹ ಇರುವವರು ಚಿಯಾ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಬೇಕು. ಚಿಯಾ ಬೀಜಗಳಲ್ಲಿ ಕರಗುವ ನಾರು ಇದ್ದು, ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಗ್ಲೂಕೋಸ್ ನಿಧಾನವಾಗಿ ಬಿಡುಗಡೆಯಾಗುತ್ತದೆ.
ಒಣಗಿದ ತೆಂಗಿನಕಾಯಿ :ತೆಂಗಿನಕಾಯಿಯಲ್ಲಿ ರಕ್ತದಲ್ಲಿನ ಸಕ್ಕರೆ ಹೆಚ್ಚಾಗುವುದನ್ನು ತಡೆಯುವ ಅಂಶಗಳಿವೆ. ಮಧುಮೇಹ ರೋಗಿಯು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣ ತೆಂಗಿನಕಾಯಿ ತುಂಡುಗಳನ್ನು ತಿಂದರೆ ಪ್ರಯೋಜನವಾಗುವುದು. ಅಥವಾ ಒಂದು ಚಮಚ ವರ್ಜಿನ್ ತೆಂಗಿನ ಎಣ್ಣೆಯನ್ನು ಕುಡಿಯುವುದರಿಂದಲೂ ಶುಗರ್ ಕಂಟ್ರೋಲ್ ಮಾಡಬಹುದು.
ನೆನೆಸಿದ ಬಾದಾಮಿ :ಬಾದಾಮಿಯಲ್ಲಿ ಪ್ರೋಟೀನ್, ಆರೋಗ್ಯಕರ ಕೊಬ್ಬು, ಫೈಬರ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿವೆ. ನೆನೆಸಿದ ಬಾದಾಮಿ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಬಾದಾಮಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.
ಕಪ್ಪು ಒಣದ್ರಾಕ್ಷಿ ಅಥವಾ ಒಣಗಿದ ಪ್ಲಮ್ : ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಕಪ್ಪು ಒಣದ್ರಾಕ್ಷಿ ಅಥವಾ ಒಣಗಿದ ಪ್ಲಮ್ಗಳನ್ನು ಸಹಾಯ ಮಾಡುತ್ತದೆ. ಅವುಗಳಲ್ಲಿ ಫೈಬರ್ ಸಮೃದ್ಧವಾಗಿದ್ದು ಅದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅವುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ZEE NEWS KANNADA ಇದನ್ನು ಅನುಮೋದಿಸುವುದಿಲ್ಲ.