ಯಾವ ಪಥ್ಯವೂ ಬೇಡ ! ದಿನಕ್ಕೊಂದು ಲೋಟ ಈ ತರಕಾರಿ ಜ್ಯೂಸ್ ಕುಡಿದರೆ ನಾರ್ಮಲ್ ಆಗುವುದು ಬ್ಲಡ್ ಶುಗರ್

Tue, 12 Mar 2024-5:03 pm,

ಸೋರೆಕಾಯಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ.  ಇದರಲ್ಲಿ 92 ಪ್ರತಿಶತ ನೀರು ಮತ್ತು 8 ಪ್ರತಿಶತ ಫೈಬರ್ ಅಡಗಿದೆ. ಸಕ್ಕರೆ ಮತ್ತು ಗ್ಲೂಕೋಸ್ ಅಂಶವು ತುಂಬಾ ಕಡಿಮೆ ಇರುವುದರಿಂದ ಇದನ್ನು ಮಧುಮೇಹಿಗಳಿಗೆ ಉತ್ತಮ. 

ದೈನಂದಿನ ಆಹಾರದಲ್ಲಿ ಸೋರೆಕಾಯಿಯನ್ನು ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಬಹುದು. ಈ ಅಂಶ ಅನೇಕ ಅಧ್ಯಯನಗಳಲ್ಲಿ ಕೂಡಾ ಸಾಬೀತಾಗಿದೆ. 

ಇನ್ಸುಲಿನ್ ಹಾರ್ಮೋನ್ ನಿಯಮಿತವಾಗಿ ಸ್ರವಿಸಲು ಸಾಧ್ಯವಾಗದೇ ಇದ್ದಾಗ, ಅಥವಾ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದಿರುವುದೇ ಮಧುಮೇಹಕ್ಕೆ ಮುಖ್ಯ ಕಾರಣ. ಸೋರೆಕಾಯಿ ಇನ್ಸುಲಿನ್ ಕೊರತೆಯನ್ನು  ನೀಗಿಸುತ್ತದೆ. ಹಾಗಾಗಿ ಬ್ಲಡ್ ಶುಗರ್ ಸದಾ ನಿಯಂತ್ರಣದಲ್ಲಿ ಇರುತ್ತದೆ. 

ಇದನ್ನು ಬೇಯಿಸಿ ತಿನ್ನುವುದಕ್ಕಿಂತ ಇದರ ಜ್ಯೂಸ್ ಸೇವನೆ ಆರೋಗ್ಯಕ್ಕೆ ಹೆಚ್ಚು ಸಹಕಾರಿ. ದಿನಕ್ಕೆ ಒಂದು ಲೋಟ ಸೋರೆಕಾಯಿ ಜ್ಯೂಸ್ ಕುಡಿಯುತ್ತಿದ್ದರೆ ರಕ್ತದಲ್ಲಿನ ಸಕ್ಕರೆ ಅಥವಾ ಬ್ಲಡ್ ಶುಗರ್ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗುತ್ತದೆ. 

ಮಧುಮೇಹವನ್ನು ನಿಯಂತ್ರಿಸುವುದರ ಜೊತೆಗೆ ಮೂತ್ರಪಿಂಡದ ಕಾಯಿಲೆಗಳನ್ನು ಕೂಡಾ  ಗುಣಪಡಿಸುತ್ತದೆ. ಈ ರಸವನ್ನು ಸ್ವಲ್ಪ ನಿಂಬೆ ರಸದೊಂದಿಗೆ ಬೆರೆಸಿ ಸೇವಿಸುವುದರಿಂದ ಮೂತ್ರನಾಳದ ಸೋಂಕು ನಿವಾರಣೆಯಾಗುತ್ತದೆ.  

ಇದರಲ್ಲಿರುವ  ಫೈಬರ್ ಆಮ್ಲೀಯತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.ಕುಂಬಳಕಾಯಿಯಲ್ಲಿ ಸಾಕಷ್ಟು ಪ್ರಮಾಣದ ಕೋಲೀನ್ ಇದ್ದು ಇದು ನಮ್ಮ ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಒಂದು ಲೋಟ  ಜ್ಯೂಸ್ ಕುಡಿಯುವುದರಿಂದ ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ ಮತ್ತು ದಟ್ಟ ಕೂದಲು ಬೆಳೆಯುತ್ತದೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link