ವರ್ಷಾರಂಭಕ್ಕೂ ಮುನ್ನ ಮಂಗಳನ ಅಂಗಳದಲ್ಲಿ ಗುರುವಿನ ನೇರನಡೆ ಆರಂಭ, ಲಕ್ಷ್ಮಿ ಕೃಪೆಯಿಂದ ಈ ಜನರ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಅಪಾರ ಹೆಚ್ಚಳ!

Thu, 16 Nov 2023-1:35 pm,

Bruhaspati Margi In Mesh Rashi: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೇಷ ರಾಶಿಯಲ್ಲಿ ದೇವಗುರು ಬೃಹಸ್ಪತಿ ತನ್ನ ನೇರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ತಾಯಿ ಲಕ್ಷ್ಮಿ ಕೃಪೆಯಿಂದ ಅಪಾರ ಸಿರಿಸಂಪತ್ತು ಹರಿದು ಬರಲಿದೆ. (Spiritual News In Kannada)

ಮೇಷ ರಾಶಿ: ಗುರು ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ನೇರನಡೆ ಅನುಸರಿಸಲಿದ್ದಾನೆ. ಆತ ನಿಮ್ಮ ರಾಶಿಗೆ ಅಧಿಪತಿಯಾಗಿರುವ ಮಂಗಳನ ಸ್ನೇಹಿತ ಕೂಡ ಹೌದು, ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಕೆಲಸದ ಶೈಲಿಯಲ್ಲಿ ಹೊಸ ಹೊಳಪು ಕಾಣಲು ಸಿಗಲಿದೆ. ನಿಮ್ಮ ಘನತೆ-ಗೌರವ ಹೆಚ್ಚಾಗಲಿದೆ. ವೃತ್ತಿಜೀವನ-ನೌಕರಿಗೆ ಸಂಬಂಧಿಸಿದಂತೆ ಶುಭ ಸಮಾಚಾರ ನಿಮಗೆ ಸಿಗಲಿದೆ. ವಿವಾಹ ಹಾಗೂ ಪ್ರೇಮ ಸಂಬಂಧದಕ್ಕೆ ಸಂಬಂಧಿಸಿದಂತೆ ಗುರುವಿನ ನೇರನಡೆ ಶುಭ ಎಂದು ಭಾವಿಸಲಾಗಿದೆ. ಇನ್ನೊಂದೆಡೆ ಗುರು ನಿಮ್ಮ ಜಾತಕದ ಭಾಗ್ಯ ಹಾಗೂ ದ್ವಾದಶ ಭಾವಕ್ಕೆ ಅಧಿಪತಿಯಾಗಿರುವ ಕಾರಣ. ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ ಮತ್ತು ದೇಶ-ವಿದೇಶಗಳ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. 

ಮೀನ ರಾಶಿ: ಮೊದಲನೆಯದಾಗಿ ಗುರು ನಿಮ್ಮ ರಾಶಿಯ ರಾಷ್ಯಾಧಿಪತಿ. ಆತ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ನೇರನಡೆ ಅನುಸರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಅಪಾರ ಧನಲಾಭ ಉಂಟಾಗಲಿದೆ. ವೃತ್ತಿ-ವ್ಯಾಪಾರದಲ್ಲಿ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ವಿಶೇಷ ಯಶಸ್ಸು ಸಿಗಲಿದೆ. ವ್ಯಾಪಾರಿಗಳ ಸಿಲುಕಿಹಾಕಿಕೊಂಡ ಧನ ಅವರ ಕೈಸೇರಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಳಿದ್ದು, ಜನ ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ಗುರು ನಿಮ್ಮ ಜಾತಕದ ಕರ್ಮ ಭಾವಕ್ಕೆ ಅಧಿಪತಿ. ಹೀಗಾಗಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ಒಂದು ವೇಳೆ ನೀವು ನೌಕರರಾಗಿದ್ದಾರೆ ನಿಮಗೆ ನೌಕರಿಯಲ್ಲಿ ಪ್ರಮೋಷನ್ ಹಾಗೂ ಇಂಕ್ರಿಮೆಂಟ್ ಸಿಗಲಿದೆ. 

ಧನು ರಾಶಿ: ಗುರು ನಿಮ್ಮ ರಾಶಿಗೂ ಕೂಡ ರಾಷ್ಯಾಧಿಪನಾಗಿದ್ದು ಆತ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಮಕ್ಕಳಿಗೆ ಸಂಬಂಧಿಸಿದಂತೆ ನಿಮಗೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ನಿಮಗೆ ಒದಗಿಬರಲಿವೆ. ಕುಟುಂಬದ ಎಲ್ಲಾ ಸದಸ್ಯರು ಎಲ್ಲಾ ರೀತಿಯಲ್ಲಿ ನಿಮಗೆ ಸಹಕರಿಸಲಿದ್ದಾರೆ. ವೃತ್ತಿ ಜೀವನದಲ್ಲಿ ನಿಮ್ಮ ಶುಭ ಪ್ರಭಾವ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಪ್ರೇಮ ಸಂಬಂಧಗಳಲ್ಲಿ ನಿಮಗೆ ಯಶಸ್ಸು ಸಿಗಲಿದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link