ಹೊಸ ವರ್ಷಾರಂಭದಲ್ಲಿ ಬುಧ-ಶುಕ್ರರಿಂದ ಲಕ್ಷ್ಮಿ ನಾರಾಯಣ ರಾಜಯೋಗ, ಈ ರಾಶಿಗಳ ಜನರಿಗೆ ಲಕ್ಷ್ಮಿ ಕೃಪೆಯಿಂದ ಅಪಾರ ಧನ-ಸಂಪತ್ತು ಪ್ರಾಪ್ತಿ!

Sat, 16 Dec 2023-3:36 pm,

Budh-Shukra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಂಭದಲ್ಲಿಯೇ ಮಕರ ರಾಶಿಯಲ್ಲಿ ಬುಧ ಹಾಗೂ ಶುಕ್ರರ ಮೈತ್ರಿ ನೆರವೇರಳಿದ್ದು, ಇದರಿಂದ ಅಲ್ಲಿ ಲಕ್ಷ್ಮಿ ನಾರಾಯಣ ಯೋಗ ರೂಪುಗೂಳ್ಳುತ್ತಿದೆ. ಈ ಯೋಗ ಕೆಲ ರಾಶಿಗಳ ಜನರಿಗೆ ಅಪಾರ ಧನಲಾಭ, ಸ್ಥಾನಮಾನವನ್ನು ಕರುಣಿಸಲಿದೆ. (Spiritual News In Kannada)  

ಮೇಷ ರಾಶಿ: ಈ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಈ ರಾಜಯೋಗ ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಸಮಯ ನಿಮ್ಮ ವೃತ್ತಿ-ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕಾರ್ಯಕ್ಷೇತ್ರದಲ್ಲಿ ಇಚ್ಚೆಗೆ ತಕ್ಕಂತೆ ಪರಿಣಾಮಗಳು ಪ್ರಾಪ್ತಿಯಾಗಲಿವೆ. ವೃತ್ತಿ ಜೀವನದಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ಸನ್ನು ಕಾಣುವಿರಿ. ಆದಾಯದ  ಹೊಸ ಮೂಲಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿವೆ. ತಂದೆಯೊಂದಿಗಿನ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. 

ತುಲಾ ರಾಶಿ: ಲಕ್ಷ್ಮಿ ನಾರಾಯಣ ಯೋಗ ರೂಪುಗೊಳ್ಳುವುದರಿಂದ ನಿಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಈ ರಾಜಯೋಗ ನಿಮ್ಮ ಗೋಚರ ಜಾತಕದಏಕಾದಶ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿಯ ಎಲ್ಲಾ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಮುಂಬರುವ ವರ್ಷದಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ಹಳೆ ಹೂಡಿಕೆಯಿಂದ ನಿಮಗೆ ಲಾಭದ ಪ್ರಬಲ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸಮಾಚಾರ ನಿಮಗೆ ಪ್ರಾಪ್ತಿಯಾಗುವ ಎಲ್ಲಾ ಸಂಕೇತಗಳಿವೆ. ಇದಲ್ಲದೆ ಆಕಸ್ಮಿಕ ಧನಲಾಭ ಕೂಡ ಉಂಟಾಗುವ ಸಾಧ್ಯತೆ ಇದೆ. 

ಧನು ರಾಶಿ: ಲಕ್ಷ್ಮಿ ನಾರಾಯಣ ಯೋಗ ನಿರ್ಮಾಣ ನಿಮ್ಮ ಜೀವನದಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ. ಈ ರಾಜಯೋಗ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಪ್ರಬಲ ಯೋಗವಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಿಸಲಿದೆ. ಪ್ರೊಫೆಶನಲ್ ಲೈಫ್ ನಲ್ಲಿ ನಿಮಗೆ ಸಾಕಷ್ಟು ಉನ್ನತಿ ಸಿಗಲಿದೆ. ಹಣ ಗಳಿಕೆಯ ಉತ್ತಮ ಅವಕಾಶಗಳು ನಿಮಗೆ ಪ್ರಾಪ್ತಿಯಾಗಲಿವೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ ಮತ್ತು ಧನ-ಸಂಪತ್ತು ವೃದ್ಧಿಯಾಗಲಿದೆ. ದೀರ್ಘಕಾಲದಿಂದ ಸಿಲುಕಿಕೊಂಡ ಹಣ ನಿಮ್ಮತ್ತ ಮರಳಲಿದೆ. ಈ ಅವಧಿಯಲ್ಲಿ ನೌಕರ ವರ್ಗದ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link