Chanakya Niti: ಪತಿ-ಪತ್ನಿಯರು ನಿತ್ಯ ಈ 4 ಕೆಲಸಗಳನ್ನು ತಪ್ಪದೆ ಮಾಡ್ಬೇಕು

Chanakya Niti For Husband-Wife: ವೈವಾಹಿಕ ಜೀವನ ಮತ್ತು ಗಂಡ - ಹೆಂಡತಿಯ ನಡುವಿನ ಸಂಬಂಧವು ಯಾವಾಗಲೂ ಪರಸ್ಪರರ ಹೊಂದಾಣಿಕೆಯ ಮೇಲೆ ಅವಲಂಭಿಸಿರುತ್ತದೆ. ವೈವಾಹಿಕ ಜೀವನವನ್ನು ಸುಖಮಯವಾಗಿಸಲು ಚಾಣಕ್ಯ ನೀತಿಯಲ್ಲಿ ಅನೇಕ ಸಂಗತಿಗಳನ್ನು ಉಲ್ಲೇಖಿಸಲಾಗಿದೆ.  

Husband-Wife Chanakya Niti: ವಿವಾಹ ನಂತರದ ಜೀವನವನ್ನು ಸುಖಮಯವಾಗಿಸಲು ಆಚಾರ್ಯ ಚಾಣಕ್ಯರು ಕೆಲ ವಿಶೇಷ ಸಂಗತಿಗಳನ್ನು ಹೇಳಿದ್ದಾರೆ ಮತ್ತು ಇದಕ್ಕಾಗಿ ಪತಿ ಪತ್ನಿಯರು ನಿತ್ಯ ಮಾಡಲೇಬೇಕಾದ 4 ಕೆಲಸಗಳನ್ನು ಹೇಳಿದ್ದಾರೆ.

 

ಇದನ್ನೂ ಓದಿ-Garuda Purana: ಯೋಗ್ಯ ಸಂತಾನ ಪಡೆಯುವ ಮಾರ್ಗವೇನು? ಯಾವ ದಿನಗಳು ಗರ್ಭಧಾರಣೆಗೆ ಉತ್ತಮ?

 

(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈವಾಹಿಕ ಜೀವನ ಮತ್ತು ಗಂಡ - ಹೆಂಡತಿಯ ನಡುವಿನ ಸಂಬಂಧವು ಯಾವಾಗಲೂ ಪರಸ್ಪರರ ಹೊಂದಾಣಿಕೆಯ ಮೇಲೆ ಅವಲಂಭಿಸಿರುತ್ತದೆ. ವೈವಾಹಿಕ ಜೀವನವನ್ನು ಸುಖಮಯವಾಗಿಸಲು ಚಾಣಕ್ಯ ನೀತಿಯಲ್ಲಿ ಅನೇಕ ಸಂಗತಿಗಳನ್ನು ಉಲ್ಲೇಖಿಸಲಾಗಿದೆ.  ಪತಿ-ಪತ್ನಿಯರ ನಡುವೆ ಸಮನ್ವಯತೆಯ ಕೊರತೆ ಇದ್ದಾಗ, ಪರಸ್ಪರ ಕಲಹ ಉಂಟಾಗಿ ಸಂಬಂಧದಲ್ಲಿ ಬಿರುಕು ಕಾಣಿಸಿಕೊಳ್ಳಲು ಆರಂಭಿಸುತ್ತದೆ ಎಂದು ಶ್ರೇಷ್ಠ ವಿದ್ವಾಂಸ, ಅರ್ಥಶಾಸ್ತ್ರಜ್ಞ, ಮುತ್ಸದ್ದಿ ಆಚಾರ್ಯ ಚಾಣಕ್ಯ ಹೇಳಿದ್ದಾರೆ. ಚಾಣಕ್ಯರು ತನ್ನ ನೀತಿಯಲ್ಲಿ 4 ವಿಶೇಷ ಸಂಗತಿಗಳ ಕುರಿತು ಉಲ್ಲೇಖಿಸಿದ್ದು, ಸಂಬಂಧವನ್ನು ಸುಧಾರಿಸಲು ಪತಿ ಪತ್ನಿಯರು ಪತಿಯರು ಅವುಗಳನ್ನು ಚಾಚುತಪ್ಪದೆ ಅನುಸರಿಸಬೇಕು ಎಂದಿದ್ದಾರೆ.

2 /5

ಆಚಾರ್ಯ ಚಾಣಕ್ಯರ ಪ್ರಕಾರ ಪತಿ ಪತ್ನಿಯರು ತಮ್ಮ ಖಾಸಗಿ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಹೇಳಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ತಮ್ಮ ನಡುವಿನ ವಿಷಯಗಳನ್ನು ಉಭಯರ ಮಟ್ಟಕ್ಕೆ ಸೀಮಿತವಾಗಿರಿಸಿಕೊಳ್ಳುವ ಪತಿ-ಪತ್ನಿಯರು  ಯಾವಾಗಲೂ ಸಂತೋಷವಾಗಿರುತ್ತಾರೆ, ಆದ್ದರಿಂದ ಪತಿ-ಪತ್ನಿ ಕೂಡ ಈ ಬಗ್ಗೆ ಕಾಳಜಿ ವಹಿಸಬೇಕು ಮತ್ತು ಯಾವುದೇ ಮೂರನೇ ವ್ಯಕ್ತಿಗೆ ವೈಯಕ್ತಿಕ ವಿಷಯಗಳನ್ನು ಹೇಳಬಾರದು. ಯಾವುದೇ ಮೂರನೇ ವ್ಯಕ್ತಿಯೊಂದಿಗೆ ತಮ್ಮ ಮಾತುಗಳನ್ನು ಹಂಚಿಕೊಂಡರೆ ಪತಿ-ಪತ್ನಿಯರ ನಡುವಿನ ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ.  

3 /5

ದಾಂಪತ್ಯ ಜೀವನ ಸುಖಮಯವಾಗಿರಲು ಪತಿ-ಪತ್ನಿಯರು ಯಾವತ್ತೂ ಒಬ್ಬರಿಗೊಬ್ಬರು ಅಹಂಕಾರ ತೋರಬಾರದು ಎಂದು ಚಾಣಕ್ಯ ನೀತಿಯಲ್ಲಿ ಹೇಳಲಾಗಿದೆ. ಆಚಾರ್ಯ ಚಾಣಕ್ಯರ ಪ್ರಕಾರ ವೈವಾಹಿಕ ಜೀವನದಲ್ಲಿ ಪತಿ-ಪತಿ ಇಬ್ಬರೂ ಕೂಡ ಬಂಡಿಯ ಎರಡು ಚಕ್ರಗಳಿದ್ದಂತೆ, ಎರಡೂ ಚಕ್ರಗಳಲ್ಲಿ ಹೊಂದಾಣಿಕೆ ಇದ್ದಾಗ ಮಾತ್ರ ಗಾಡಿ ಸರಾಗವಾಗಿ ಮುಂದಕ್ಕೆ ಸಾಗುತ್ತದೆ. ಇವೆರಡರಲ್ಲಿ ಯಾವುದಾದರೊಂದು ಗಾಲಿಗೆ ಅಹಂಕಾರವಿದ್ದರೆ ಸಂಬಂಧದಲ್ಲಿ ಬಿರುಕು ಮೂಡಬಹುದು.  

4 /5

ಆಚಾರ್ಯ ಚಾಣಕ್ಯರ ಪ್ರಕಾರ, ಯಾವುದೇ ಸಂಬಂಧದ ಗಟ್ಟಿತನಕ್ಕೆ ಪರಸ್ಪರರನ್ನು ಗೌರವಿಸುವುದು ತುಂಬಾ ಮುಖ್ಯ ಮತ್ತು ಇಬ್ಬರ ನಡುವೆ ಪ್ರೀತಿ ಮತ್ತು ಗೌರವ ಇದ್ದಾಗ ಮಾತ್ರ ಪತಿ-ಪತ್ನಿಯರ ನಡುವಿನ ಸಂಬಂಧವೂ ಗಟ್ಟಿಯಾಗುತ್ತದೆ. ಆದ್ದರಿಂದಲೇ ಚಾಣಕ್ಯನೀತಿಯಲ್ಲಿ ಪತಿ-ಪತ್ನಿ ಸದಾ ಪರಸ್ಪರ ಗೌರವವನ್ನು ನೀಡಬೇಕು ಎಂದು ಹೇಳಲಾಗಿದೆ. ಹೀಗೆ ಮಾಡುವುದರಿಂದ ಪತಿ-ಪತ್ನಿಯರ ಸಂಬಂಧದಲ್ಲಿ ಯಾವತ್ತೂ ಬಿರುಕು ಉಂಟಾಗುವುದಿಲ್ಲ.  

5 /5

ಚಾಣಕ್ಯ ನೀತಿಯ ಪ್ರಕಾರ, ಜನರು ಜೀವನದಲ್ಲಿ ಅನೇಕ ಸಂದರ್ಭಗಳು ಎದುರಾಗುತ್ತವೆ, ಆದರೆ ಎಲ್ಲಾ ಸಂದರ್ಭಗಳಲ್ಲಿ ತಾಳ್ಮೆಯಿಂದ ಕೆಲಸ ಮಾಡುವವರ ಜೀವನವು ಯಶಸ್ವಿಯಾಗುತ್ತದೆ. ಆಚಾರ್ಯ ಚಾಣಕ್ಯರು ಪತಿ-ಪತ್ನಿಯರು ನೆಮ್ಮದಿಯಿಂದ ಜೀವನ ನಡೆಸಲು ತಾಳ್ಮೆಯನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಇದು ಪ್ರತಿಕೂಲ ಸಂದರ್ಭಗಳಲ್ಲಿಯೂ ಜೀವನವನ್ನು ಮುನ್ನಡೆಸುವಲ್ಲಿ ಯಶಸ್ಸನ್ನು ನೀಡುತ್ತದೆ.