ಚಂದನ್ ಶೆಟ್ಟಿ - ನಿವೇದಿತಾ ಗೌಡ ಮಧ್ಯೆ ಹುಳಿ ಹಿಂಡಿದ್ದು ಯಾರು? ಡಿವೋರ್ಸ್‌ಗೆ ಕಾರಣವಾಗದ್ದೇ ಈ ವ್ಯಕ್ತಿ! ಸ್ಯಾಂಡಲ್‌ವುಡ್ ಖ್ಯಾತ ನಟನಿಂದ ಗುಟ್ಟು ರಟ್ಟು !

Sat, 08 Jun 2024-7:43 am,

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಾಸ್‌ ಸ್ಪರ್ಧಿಗಳಾಗಿದ್ದರು. ಆ ಬಳಿಕ ಇಬ್ಬರ ನಡುವಿದ್ದ ಸ್ನೇಹ ಪ್ರೇಮವಾಗಿ ಬದಲಾಯಿತು. 

ಕೊರೊನಾ ಸಂದರ್ಭದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸಿಂಪಲ್ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಒಟ್ಟಾಗಿ ರೀಲ್ಸ್‌ ಮಾಡೋದು, ರಿಯಾಲಿಟಿ ಶೋಗಳಲ್ಲಿ ಭಾಗಿಯಾಗುತ್ತಿದ್ದರು. 

ಅನ್ಯೋನ್ಯವಾಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಕೆಲವೇ ವರ್ಷಗಳಲ್ಲಿ ಡಿವೋರ್ಸ್‌ ಪಡೆದಿದ್ದಾರೆ. ಕೋರ್ಟ್‌ಗೆ ಒಟ್ಟಾಗಿ ಕೈ ಕೈ ಹಿಡಿದು ಬಂದ ಈ ದಂಪತಿ ವಿಚ್ಛೇದನ ಪಡೆದಿದ್ದಾರೆ.  

ಚಂದನ್ ಹಾಗೂ ನಿವೇದಿತಾ ಡಿವೋರ್ಸ್‌ ಬಗ್ಗೆ ಸ್ಯಾಂಡಲ್‌ವುಡ್‌ ನಟ ಪ್ರಥಮ್‌ ಮಾತನಾಡಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮಧ್ಯೆ ಯಾರೋ ಹುಳಿ ಹಿಂಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. 

ಈ ಕೆಲಸ ಮಾಡಿದವರಿಗೆ ಒಳ್ಳೆಯದಾಗಲ್ಲ. ಅವರು ಉದ್ಧಾರ ಆಗಲ್ಲ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮತ್ತೆ ಒಂದಾಗಬೇಕು. ನಾನು ಧ್ರುವ ಸರ್ಜಾ ಅವರಿಂದ ಫೋನ್ ಮಾಡಿಸಿ ಒಂದು ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ನಟ ಪ್ರಥಮ್‌ ಹೇಳಿದ್ದಾರೆ. 

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಕೆಲವರ ಸಂಭ್ರಮಕ್ಕೆ ಕಾರಣವಾಗಿದೆ ಎಂದಿದ್ದಾರೆ. ನಟ ಪ್ರಥಮ್‌  ಅವರ ಈ ಮಾತು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link