ಮಳೆಗಾಲದಲ್ಲಿ ಈ ತರಕಾರಿಗಳನ್ನು ಸೇವಿಸಿದರೆ ಹತ್ತಿರವೂ ಸುಳಿಯುವುದಿಲ್ಲ ರೋಗಗಳು

Mon, 08 Aug 2022-1:23 pm,

ಮಳೆಗಾಲದಲ್ಲಿ ಸೋರೆಕಾಯಿ ತಿನ್ನುವುದು ಒಳ್ಳೆಯದು. ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುತ್ತದೆ. ಸೋರೆಕಾಯಿಯಲ್ಲಿ ಕಬ್ಬಿಣ, ವಿಟಮಿನ್ ಬಿ ಮತ್ತು ಸಿ ಸಮೃದ್ಧವಾಗಿದೆ. ಇದು ಮಳೆಗಾಲದಲ್ಲಿ ದೇಹವನ್ನು ಸೋಂಕಿನಿಂದ ರಕ್ಷಿಸುತ್ತದೆ.  

ಹಾಗಲಕಾಯಿ ತಿನ್ನುವುದು ಮಳೆಗಾಲದಲ್ಲಿ ಹೆಚ್ಚು ಪ್ರಯೋಜನಕಾರಿ. ವಿಟಮಿನ್ ಸಿ ಸಮೃದ್ಧವಾಗಿರುವ ಹಾಗಲಕಾಯಿಯು ಪ್ರತಿ ಋತುವಿನಲ್ಲಿ ದೇಹವನ್ನು ಫಿಟ್ ಆಗಿ ಇಡುತ್ತದೆ. ಇದರಲ್ಲಿರುವ ಆಂಟಿವೈರಲ್ ಗುಣಲಕ್ಷಣಗಳು ಮಳೆಯಿಂದ ಉಂಟಾಗುವ ಸೋಂಕುಗಳಿಂದ ರಕ್ಷಿಸುತ್ತದೆ.

ಆಲೂಗಡ್ಡೆ, ಸಿಹಿ ಗೆಣಸುಗಳಂತಹ ಗೆಡ್ಡೆಗಳನ್ನು ಮಳೆಗಾಲದಲ್ಲಿ ತಿನುವುದು ಉತ್ತಮ ಎಂದು ಹೇಳಲಾಗುತ್ತದೆ. ಇದು ಆರೋಗ್ಯಕ್ಕೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ. ಮಳೆಗಾಲದಲ್ಲಿ ಗಡ್ಡೆಯು ದೇಹದಲ್ಲಿ ಬೆಳೆಯುವ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ. ಈ ಋತುವಿನಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಗೆಡ್ಡೆಗಳನ್ನು ಸೇವಿಸಬಹುದು.

ಮಳೆಗಾಲದಲ್ಲಿ ಬೆಂಡೆಕಾಯಿ ತಿನ್ನುವುದು ತುಂಬಾ ಪ್ರಯೋಜನಕಾರಿ. ಈ ಕಾರಣದಿಂದಾಗಿ, ದೇಹದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಉಳಿಯುತ್ತದೆ. ಇದಲ್ಲದೆ, ಬೆಂಡೆಕಾಯಿ ಸೇವನೆಯಿಂದ ಕಣ್ಣುಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತದೆ.  ಇದರಿಂದ ಮೂಳೆಗಳು ಗಟ್ಟಿಯಾಗಿರುತ್ತವೆ.   

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link