ಐತಿಹಾಸಿಕ ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ: ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ

Sat, 23 Dec 2023-10:54 pm,

 

ನೋಡಲ್ ಅಧಿಕಾರಿಗಳು ಭೇಟಿ: ಹನುಮಮಾಲಾ ಕಾರ್ಯಕ್ರಮದ ನೋಡಲ್ ಅಧಿಕಾರಿಗಳಾದ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಡಿಸೆಂಬರ್ 23ರಂದು ಅಂಜನಾದ್ರಿಗೆ ಭೇಟಿ ನೀಡಿ ನಾನಾ ಕಾರ್ಯದ ಮೇಲ್ವಿಚಾರಣೆ ನಡೆಸಿದರು.

ಸ್ವಾಗತ ಕಮಾನುಗಳು: ಹನುಮ ಮಾಲಾಧಿಕಾರಿಗಳಿಗೆ ಅಂಜನಾದ್ರಿಗೆ ಸ್ವಾಗತಿಸಲು ಅಂಜನಾದ್ರಿ ಬೆಟ್ಟದ ಕೆಳಗೆ ಮತ್ತು ಸುತ್ತಲು ಮತ್ತು ಇನ್ನೀತರ ಕಡೆಗಳಲ್ಲಿ ಹಾಕಿರುವ ಬೃಹಧಾಕಾರದ ಸ್ವಾಗತ ಕಮಾನುಗಳು ರಾರಾಜಿಸುತ್ತಿವೆ. ಕೊಪ್ಪಳ, ಗಂಗಾವತಿ, ಕಾರಟಗಿ, ಕನಕಗಿರಿ, ಕುಷ್ಟಗಿ, ಯಲಬುರ್ಗಾ, ಕುಕನೂರ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಹನುಮ ಮಾಲಾಧಿಕಾರಿಗಳನ್ನು ಸ್ವಾಗತಿಸುವ ಕಮಾನುಗಳು ಕಂಡು ಬಂದವು.

ತಂಡವಾಗಿ ಕಾರ್ಯನಿರ್ವಹಣೆ: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ವಿವಿಧ ಕಾರ್ಯಕ್ಕೆ ನಿಯೋಜನೆಗೊಂಡಿರುವ ಆಯಾ ಇಲಾಖೆಗಳ ಸಿಬ್ಬಂದಿಯು ತಂಡವಾಗಿ ಅಧಿಕಾರಿಗಳ ಮಾರ್ಗದರ್ಶನದಡಿ ನಾನಾ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

 

ಉಚಿತ ಸಾರಿಗೆ ವ್ಯವಸ್ಥೆ: ಪೂರ್ವ ನಿರ್ಧಾರದಂತೆ ಅಂಜನಾದ್ರಿಗೆ ತೆರಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಹ ಕಲ್ಪಿಸಿದ್ದು ಭಕ್ತರನ್ನು ಕರೆದೊಯ್ಯಲು ಅಲಂಕೃತ ಬಸ್‌ಗಳು ಅಂಜನಾದ್ರಿಯ ವಿವಿಧೆಡೆ ಸಾಲಾಗಿ ನಿಂತಿವೆ.

 

ಸಹಾಯವಾಣಿ ಕಾರ್ಯಾರಂಭ: ಭಕ್ತಾದಿಗಳಿಗೆ ತಂಗಲು, ಊಟದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಸ್ನಾನದ ವ್ಯವಸ್ಥೆ, ಆರೋಗ್ಯ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯದ ಮಾಹಿತಿ ನೀಡಲು ಗಂಗಾವತಿ ರೈಲು ನಿಲ್ದಾಣ, ಗಂಗಾವತಿ ಬಸ್ ನಿಲ್ದಾಣ, ಕೃಷ್ಣದೇವರಾಯ ವೃತ್ತ, ಅಂಜನಾದ್ರಿ ದೇವಸ್ಥಾನದ ಮುಂಭಾಗ ಸೇರಿದಂತೆ ವಿವಿಧೆಡೆ ಡಿಸೆಂಬರ್ 23ರ ಬೆಳಗ್ಗೆಯಿಂದಲೇ ಸಹಾಯವಾಣಿ ಕೇಂದ್ರಗಳು ಕಾರ್ಯಾರಂಭ ಮಾಡಿವೆ.

ತಳಿರು ತೋರಣದಿಂದ ಅಲಂಕಾರ: ಪ್ರಸಿದ್ಧ ಅಂಜನಾದ್ರಿಯ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪಾದಗಟ್ಟೆಯ ಪ್ರದೇಶದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ತಳಿರು ತೋರಣಗಳಿಂದ ಶೃಂಗರಿಸಲಾಗಿದೆ. ಹಚ್ಚ ಹಸುರಿನ ಹೂಬಳ್ಳಿಯಿಂದ ಪಾದಗಟ್ಟೆಯು ಜನಮನ ಸೂರೆಗೊಳ್ಳುತ್ತಿದೆ.

 

ಅಂಜನಾದ್ರಿಯತ್ತ ಹನುಮ ಭಕ್ತರು: ಶ್ರೀ ಆಂಜನೇಯ ಜನ್ಮಸ್ಥಳ ಪ್ರಖ್ಯಾತಿಯ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಅಂಜನಾದ್ರಿಯ ಆಂಜನೇಯ ಸ್ವಾಮಿ ದೇವಸ್ಥಾನದತ್ತ ದೇಶದ ಹಾಗೂ ರಾಜ್ಯದ ನಾನಾ ಭಾಗಗಳಿಂದ ಹನುಮ ಭಕ್ತರು ತಂಡ ತಂಡವಾಗಿ ಆಗಮಿಸುತ್ತಿರುವ ದೃಶ್ಯಗಳು ಎಲ್ಲೆಡೆ ಕಂಡು ಬರುತ್ತಿದೆ.

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link