Diabetes: ಮಧುಮೇಹ ನಿಯಂತ್ರಣಕ್ಕೆ ಈ ಆಹಾರಗಳನ್ನು ಸೇವಿಸಿರಿ

Best Foods for People with Diabetes: ಪಾಲಕ್ ಸೊಪ್ಪು ಹಲವಾರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಅತ್ಯುತ್ತಮ ಪ್ರಮಾಣದ ನಾರಿನಾಂಶವಿದ್ದು, ಇದು ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

Best Foods for People with Diabetes: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ. ಭಾರತವನ್ನು ಮಧುಮೇಹದ ರಾಜಧಾನಿ ಎಂದು ಹೇಳಲಾಗುತ್ತದೆ. ಸೈಲೆಂಟ್‌ ಕಿಲ್ಲರ್‌ ಎಂದು ಕರೆಯಲಾಗುವ ಮಧುಮೇಹವನ್ನು ನಿರ್ಲಕ್ಷ್ಯಸಿದರೆ ದೇಹದ ಎಲ್ಲ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಪ್ರತಿಯೊಬ್ಬರು ಮಧಮೇಹದ ಬಗ್ಗೆ ಅರಿವು ಹೊಂದುವ ಮೂಲಕ ರೋಗ ಬಾರದಂತೆ ಎಚ್ಚರಿಕೆ ವಹಿಸಬೇಕು. ಇದಕ್ಕೆ ಪೂರಕವಾಗಿ ಉತ್ತಮ ಆರೋಗ್ಯಕರ ದಿನಚರಿಯನ್ನು ರೂಢಿಸಿಕೊಳ್ಳಬೇಕು. ಮಧುಮೇಹವನ್ನು ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಬೇಕು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಬಾಯಿಗೆ ಕಹಿ ಎನಿಸುವ ಹಾಗಲಕಾಯಿ ಉದರಕ್ಕೆ ಸಿಹಿ ಅಂತಲೇ ಹೇಳಬಹುದು. ಮಧುಮೇಹಿಗಳು ನಿತ್ಯ ಇದನ್ನು ಸೇವಿಸುವುದರಿಂದ ಸಕ್ಕರೆ ಕಾಯಿಲೆ ಬಹುತೇಕ ನಿಯಂತ್ರಣಕ್ಕೆ ಬರುತ್ತದೆ. ಇದು ಕೊಬ್ಬು ಕರಗಿಸುತ್ತದೆ ಮತ್ತು ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ. ಹೀಗಾಗಿ ನಿತ್ಯ ಆಹಾರ ಕ್ರಮದಲ್ಲಿ ಹಾಗಲಕಾಯಿ ಸೇವಿಸಿ.

2 /5

ಪಾಲಕ್ ಸೊಪ್ಪು ಹಲವಾರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಅತ್ಯುತ್ತಮ ಪ್ರಮಾಣದ ನಾರಿನಾಂಶವಿದ್ದು, ಇದು ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

3 /5

ಹಸಿ ಎಳ್ಳು ಸೇವನೆಯಿಂದಲೂ ಮಧುಮೇಹ ನಿಯಂತ್ರಿಸಬಹುದು. ಬೆಲ್ಲ ಬೆರೆಸದೆ ಜ್ಯೂಸ್ ತಯಾರಿಸಿ ಕುಡಿಯುವ ಮೂಲಕ ಮತ್ತು ಆಹಾರದೊಂದಿಗೆ ಎಳ್ಳನ್ನು ಬಳಸುವ ಮೂಲಕ ಟೈಪ್ 2 ಮಧುಮೇಹವನ್ನು ಕಡಿಮೆ ಮಾಡಬಹುದು. ಎಳ್ಳಿನಲ್ಲಿರುವ ಪೋಷಕಾಂಶಗಳು ದೇಹದ ಇತರ ಆರೋಗ್ಯ ಸಮಸ್ಯೆಗಳನ್ನೂ ನಿವಾರಿಸುತ್ತದೆ.

4 /5

ಮೆಂತ್ಯೆಕಾಳು ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ರಾತ್ರಿ ನೀರಿನಲ್ಲಿ ಮೆಂತ್ಯೆ ಬೀಜಗಳನ್ನು ನೆನೆಸಿ ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದರಿಂದ ಮಧುಮೇಹ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುತ್ತದೆ. 

5 /5

ಮಧುಮೇಹ ಹೊಂದಿರುವವರು ಹಣ್ಣು ಮತ್ತು ತರಕಾರಿಗಳನ್ನು ಪ್ರತಿದಿನ ಸೇವಿಸಬೇಕು. ಕೆಲವು ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದರಿಂದ ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ವೈದ್ಯರ ಸಲಹೆ ಮೇರೆಗೆ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಉತ್ತಮ.