ಐದು ಶತಮಾನಗಳ ಬಳಿಕ ದೀಪಾವಳಿಯಂದು ಅದ್ಭುತ ಯೋಗಗಳ ರಚನೆ, ತಾಯಿ ಲಕ್ಷ್ಮಿ ಕೃಪೆಯಿಂದ ಈ ಜನರಿಗೆ ಅಪಾರ ಧನ-ಸಂಪತ್ತು-ಪದೋನ್ನತಿ ಪ್ರಾಪ್ತಿ!

Diwali 2023 Horoscope: ಈ ಬಾರಿಯ ದೀಪಾವಳಿ ಹಬ್ಬದ ದಿನ ಐನೂರು ವರ್ಷಗಳ ಬಳಿಕ ಹಲವು ಅದ್ಭುತ ಯೋಗಗಳು ರೂಪುಗೊಳ್ಳುತ್ತಿವೆ. ಈ ಯೋಗಗಳ ಕಾರಣ ಮೇಷ, ಧನು ಸೇರಿದಂತೆ ಹಲವು ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. (Spiritual News In Kannada)
 

ಬೆಂಗಳೂರು: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ಮಹತ್ವವ್ವನ್ನು ಕಲ್ಪಿಸಲಾಗಿದೆ. ಈ ದಿನ ತಾಯಿ ಲಕ್ಷ್ಮಿ ಜೊತೆಗೆ ಶ್ರೀಗಣೇಶನಿಗೆ ಸಕಲ ವಿಧಿ ವಿಧಾನಗಳ ಮೂಲಕ ಪೂಜೆಯನ್ನು ಸಲ್ಲಿಸಲಾಗುತ್ತದೆ ಮತ್ತು ಇಡೀ ಮನೆಯನ್ನು ದೀಪಗಳಿಂದ ಅಲಂಕರಿಸಲಾಗುತ್ತದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿಯ ದೀಪಾವಳಿ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ದಿನ ಹಲವು ವಿಶೇಷ  ಮತ್ತು ಶುಭಯೋಗಗಳು ರೂಪುಗೊಳ್ಳುತ್ತಿವೆ. ಪ್ರಸ್ತುತ ಕರ್ಮ ಫಲದಾತ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಹೀಗಿರುವಾಗ ಶಶ ಮಹಾಪುರುಷ ರಾಜಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಇದಲ್ಲದೆ ತುಲಾ ರಾಶಿಯಲ್ಲಿ ಸೂರ್ಯ ಚಂದ್ರರ ಮೈತ್ರಿ ಕೂಡ ನೆರವೇರುತ್ತಿದ್ದು, ಈ ದಿನ ಆಯುಷ್ಮಾನ ಹಾಗೂ ಸೌಭಾಗ್ಯ ಯೋಗಗಳು ಕೂಡ ರೂಪುಗೊಳ್ಳುತ್ತಿವೆ. ಇದರ ಜೊತೆಗೆ ನವೆಂಬರ್ 16 ಹಾಗೂ 17 ರಂದು ರುಚಕ ಹಾಗೂ ಯುಕ್ಟ್ ಯೋಗ ನಿರ್ಮಾಣಗೊಳ್ಳುತ್ತಿವೆ. ಇವು ದೀಪಾವಳಿಯ ದಿನ ಕೂಡ ಹಲವು ರಾಶಿಗಳ ಜಾತಕದವರ ಮೇಲೆ ಪ್ರಭಾವವನ್ನು ಬೀರಲಿವೆ. ಈ ರೀತಿಯ ವಿಶೇಷ ಕಾಕತಾಳೀಯ ಕಳೆದ ಐನೂರು ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಸಂಭವಿಸುತ್ತಿದೆ. ಈ ಶುಭಯೋಗಗಳ ನಿರ್ಮಾಣಗೊಳ್ಳುವುದರಿಂದ ಹಲವು ರಾಶಿಗಳ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ ಎಂದು ಭಾವಿಸಲಾಗುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಸುಮಾರು ಆರು ದಶಕಗಳ ಬಳಿಕ ಧನತ್ರಯೋದಶಿಯಂದು ವಿಶೇಷ ಕಾಕತಾಳೀಯ ನಿರ್ಮಾಣ, ಧನಕುಬೇರ ಕೃಪೆಯಿಂದ ಈ ಜನರಿಗೆ ಭಾರಿ ಧನಲಾಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

Diwali 2023 Horoscope: ಈ ಬಾರಿಯ ದೀಪಾವಳಿ ಹಬ್ಬದ ದಿನ ಐನೂರು ವರ್ಷಗಳ ಬಳಿಕ ಹಲವು ಅದ್ಭುತ ಯೋಗಗಳು ರೂಪುಗೊಳ್ಳುತ್ತಿವೆ. ಈ ಯೋಗಗಳ ಕಾರಣ ಮೇಷ, ಧನು ಸೇರಿದಂತೆ ಹಲವು ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. (Spiritual News In Kannada)

2 /5

ಮೇಷ ರಾಶಿ: ದೀಪಾವಳಿಯ ಸಂದರ್ಭದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಶುಭ ಯೋಗಗಳು ಮೇಷ ರಾಶಿಯ ಜನರ ಪಾಲಿಗೆ ತುಂಬಾ ವಿಶೇಷ ಫಲಗಳನ್ನು ನೀಡಲಿವೆ. ಪ್ರಸ್ತುತ ಗುರು ಬೃಹಸ್ಪತಿ ನಿಮ್ಮ ರಾಶಿಯಲ್ಲಿ ವಿರಾಜಮಾನನಾಗಿರುವ ಕಾರಣ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಪ್ರಬಲವಾಗಿರಲಿದೆ. ಆದಾಯದ ಹೊಸ ಮೂಲಗಳು ನಿರ್ಮಾಣಗೊಳ್ಳಲಿವೆ. ಇದಲ್ಲದೆ ನೀವು ಹಣ ಉಳಿತಾಯ ಮಾಡುವಲ್ಲಿಯೂ ಕೂಡ ಯಶಸ್ಸನ್ನು ಸಾಧಿಸುವಿರಿ. ಭಾಗ್ಯದ ಸಂಪೂರ್ಣ ಬೆಂಬಲ ನಿಮಗೆ ಇರಲಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಹಣ ಹೂಡಿಕೆಗಾಗಿ ಯೋಚಿಸುತ್ತಿದ್ದರೆ, ಈ ಅವಧಿಯಲ್ಲಿ ಹೂಡಿಕೆ ಮಾಡುವುದು ಲಾಭದಾಯಕ ಸಾಬೀತಾಗಲಿದೆ. ನೌಕರ ವರ್ಗದ ಜನರಿಗೆ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ದಾಂಪತ್ಯ ಜೀವನ ಹಾಗೂ ಲವ್ ಲೈಫ್ ಕೂಡ ಬಂಬಾಟಾಗಿರಲಿದೆ. 

3 /5

ಧನು ರಾಶಿ: ಈ ಶುಭ ಯೋಗಗಳ ನಿರ್ಮಾಣದಿಂದ ಧನು ರಾಶಿಯ ಜಾತಕದವರಿಗೆ ಲಾಭವೋ ಲಾಭ ಉಂಟಾಗಲಿದೆ. ನಿಮ್ಮ ಜೀವನದಲ್ಲಿ ಅಪಾರ ಖುಷಿಗಳ ಆಗಮನವಾಗಲಿದೆ. ಆರ್ಥಿಕ ಸ್ಥಿತಿ ವೇಗ ಪಡೆದುಕೊಳ್ಳಲಿದೆ ಮತ್ತು ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಹೊಸ ಬಿಸ್ನೆಸ್ ಆರಂಭಿಸಲು ಯೋಚಿಸುತ್ತಿದ್ದರೆ, ಈ ಅವಧಿ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಕೋರ್ಟ್-ಕಚೇರಿ ವ್ಯವಹಾರಗಳಲ್ಲಿ ನಿಮಗೆ ಯಶಸ್ಸು ಸಿಗಲಿದೆ. ವಾಹನ, ಸಂಪತ್ತು, ಮನೆ ಇತ್ಯಾದಿಗಳನ್ನು ಖರೀದಿಸುವ ನಿಮ್ಮ ಕನಸು ನನಸಾಗುವ ಸಂಕೇತಗಳಿವೆ. ಆರ್ಥಿಕ ಸ್ಥಿತಿ ಕೂಡ ಬಲವಾಗಲಿದೆ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ನೌಕರವರ್ಗದ ಜನರಿಗೆ ಬಡ್ತಿ ಭಾಗ್ಯ, ಬೋನಸ್ ಸಿಗುವ ಸಾಧ್ಯತೆ ಇದೆ. ಇದರ ಜೊತೆಗೆ ಹೊಸ ನೌಕರಿಯ ನಿಮ್ಮ ಹುಡುಕಾಟಕ್ಕೆ ತೆರೆಬೀಳುವ ಸಾಧ್ಯತೆಗಳಿವೆ. 

4 /5

cಮಕರ ರಾಶಿ: ನಿಮ್ಮ ಜಾತಕಕ್ಕೆ ಶನಿ ಅಧಿಪತಿ, ಪ್ರಸ್ತುತ ಆಟ ಕುಂಭ ರಾಶಿಯಲ್ಲಿ ವಿರಾಜಮಾನನಾಗಿರುವ ಕಾರಣ ಹಲವು ಶುಭಯೋಗಗಳು ರೂಪುಗೊಳ್ಳುತ್ತಿವೆ. ಇದರಿಂದ ಮಕರ ರಾಶಿಯ ಜಾತಕದವರಿಗೂ ಕೂಡ ವಿಶೇಷ ಲಾಭಗಳು ಸಿಗಲಿವೆ. ಭವಿಷ್ಯಕ್ಕೆ ಸಂಬಂಧಿಸಿದಂತೆ ನೀವು ಮಹತ್ವದ ನಿರ್ಧಾರ ಕೈಗೊಳ್ಳುವಿರಿ. ಇದರಿಂದ ಮುಂಬರುವ ದಿನಗಳಲ್ಲಿ ನಿಮಗೆ ಲಾಭ ಸಿಗಲಿದೆ. ವೃತ್ತಿಜೀವನದ ದೃಷಿಯ ಕುರಿತು ಹೇಳುವುದಾದರೆ, ಉತ್ತಮವಾಗಿರಲಿದೆ. ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ನಿಮ್ಮ ಪರಿಶ್ರಮದಿಂದ ನೀವು ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಬಹುದು. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)