ಖ್ಯಾತ ವೈದ್ಯ ಸತ್ಯ ಪ್ರಸಾದ್‌ ಶೆಟ್ಟಿ ಯವರ ಮುಡಿಗೆ ಜೀ ನ್ಯೂಸ್‌ ʼಯುವರತ್ನ ಪ್ರಶಸ್ತಿʼಯ ಗರಿ..!

Fri, 22 Mar 2024-9:00 pm,

ತಳಮಟ್ಟದಿಂದ ಬೆಳೆದು ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಕಾ, ಕೈಗಾರಿಕಾ, ಖಾಸಗೀ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರ್ತಿಸುವ ಕಾರ್ಯಕ್ರಮವೇ ʼಯುವರತ್ನʼ.       

ಈ ಪೈಕಿ ಖ್ಯಾತ ವೈದ್ಯರಾದ ಸತ್ಯ ಪ್ರಸಾದ್‌ ಶೆಟ್ಟಿ ಯವರ ಅದ್ಭುತ ಸಾಧನೆಯನ್ನು ಗುರುತಿಸಿ ಜೀ ಕನ್ನಡ ನ್ಯೂಸ್‌ ಯುವರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ವೃತ್ತಿಯಲ್ಲಿ ಪ್ರಸಿದ್ಧ ವೈದ್ಯರಾಗಿರುವ ಇವರು ಸರ್ವೇ ಜನಾಃ ಸುಖಿನೋ ಭವಂತು ಎಂಬ ತತ್ವ ನಂಬಿಕೊಂಡು ಜನಸಾಮಾನ್ಯರ ಉತ್ತಮ ಆರೋಗ್ಯಕ್ಕೆ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದಾರೆ.   

2012ರಲ್ಲಿ ನಾರಾಯಣ ಹೃದಯಾಲಯದಲ್ಲಿ ರೆಡಿಯಾಲಜಿಸ್ಟ್‌ ಆಗಿ ತಮ್ಮ ವೃತ್ತಿ ಜೀವನ ಆರಂಭ ಮಾಡಿದ ಸತ್ಯ ಪ್ರಸಾದ್‌ ಶೆಟ್ಟಿಯವರು, ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಸರ್ಜಾಪುರದಲ್ಲಿರುವ ಮದರ್‌ ಹುಡ್‌ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  

ಈ ಮಹನೀಯರು ರೋಗಿಗಳಿಗೆ ಚಿಕಿತ್ಸೆ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಆರೋಗ್ಯದ ಅರಿವು ಮೂಡಿಸುವುದು, ರೋಗಿಗಳಿಗೆ ಆತ್ಮವಿಶ್ವಾಸ ತುಂಬುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸತ್ಯ ಪ್ರಸಾದ್‌ ಶೆಟ್ಟಿ ಯವರಿಗೆ ಯುವರತ್ನ ಪ್ರಶಸ್ತಿ ನೀಡಲು ಝೀ ಕನ್ನಡ ನ್ಯೂಸ್‌ ಹೆಮ್ಮೆ ಪಡುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link