ಮಧುಮೇಹಿಗಳಿಗೆ ದಿವೌಷಧ ಈ ಎಲೆ... ಯಾವ ಔಷಧಿಯೂ ಹೀಗೆ ವರ್ಕ್‌ ಆಗಲ್ಲ!

Fri, 06 Sep 2024-1:06 pm,

ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಇಂದು ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಹೀಗಿರುವಾಗ ವೈದ್ಯರ ಸಲಹೆಯಂತೆ ಆಹಾರದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು..   

ಹೀಗಾಗಿ ನಿಮ್ಮ ಆಹಾರದಲ್ಲಿ ನುಗ್ಗೆ ಕಾಯಿ, ಎಲೆಗಳು ಮತ್ತು ಹೂವುಗಳನ್ನು ಸೇರಿಸುವುದು ಒಳ್ಳೆಯದು.. ಇವು ವಿವಿಧ ಔಷಧೀಯ ಗುಣಗಳನ್ನು ಹೊಂದಿವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಅನೇಕ ಅಧ್ಯಯನಗಳು ತೋರಿಸಿವೆ. ವಿಶೇಷವಾಗಿ ಇದು ಇನ್ಸುಲಿನ್ ತರಹದ ಪ್ರೋಟೀನ್‌ಗಳನ್ನು ಹೊಂದಿರುತ್ತದೆ.  

ಈ ನುಗ್ಗೆಯಲ್ಲಿರುವ ಕೆಲವು ಅಂಶಗಳು ಮಧುಮೇಹದ ಪರಿಣಾಮವನ್ನು ಕಡಿಮೆ ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಆದ್ದರಿಂದ ನೀವು ನಿಮ್ಮ ಆಹಾರದಲ್ಲಿ ಇದನ್ನು ಸೇರಿಸಿದಾಗ, ಅದು ನಮ್ಮ ದೇಹದಲ್ಲಿ ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ದೇಹದಲ್ಲಿ ಇನ್ಸುಲಿನ್ ಸ್ರವಿಸುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  

ನೀವು ಪ್ರತಿದಿನ ವಿವಿಧ ರೀತಿಯಲ್ಲಿ ನೀವು ನುಗ್ಗೆಯನ್ನು ನಿಮ್ಮ ಆಹಾರದಲ್ಲಿ ಸೇರಿಸಬಹುದು.. ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ನೀವು ಇದನ್ನು ನಿಯಮಿತವಾಗಿ ಸೇವಿಸಿದರೆ ಅದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ..  

ಆಹಾರದಲ್ಲಿ ಎಷ್ಟು ಪ್ರಮಾಣದಲ್ಲಿ ನುಗ್ಗೆಯನ್ನು ಸೇವಿಸಬೇಕು? ನಿಮಗೆ ಮಧುಮೇಹ ಇದ್ದರೆ ವೈದ್ಯರ ಸಲಹೆಯಂತೆ ತೆಗೆದುಕೊಳ್ಳಿ. ದಿನಕ್ಕೆ 1 ರಿಂದ 2 ಸಲಕ್ಕಿಂತ ಹೆಚ್ಚು ತಿನ್ನಬೇಡಿ. ಅತಿಯಾಗಿ ತಿನ್ನುವುದು ನಿಮ್ಮ ಆರೋಗ್ಯಕ್ಕೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂಬುದನ್ನು ನೆನಪಿಡಿ.    

ಸೂಚನೆ:  ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.    

ZEENEWS TRENDING STORIES

By continuing to use the site, you agree to the use of cookies. You can find out more by Tapping this link