Soaked Raisins: ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಒಣದ್ರಾಕ್ಷಿ ತಿನ್ನುವುದರಿಂದ ಆರೋಗ್ಯಕ್ಕಿದೆ ಭಾರೀ ಲಾಭ

Mon, 19 Feb 2024-8:47 am,

ನೆನೆಸಿದ ಒಣದ್ರಾಕ್ಷಿ ಅಗತ್ಯ ಪೋಷಕಾಂಶಗಳಿಂದ ಕೂಡಿರುತ್ತದೆ. ರಾತ್ರಿಯಿಡೀ ನೆನೆಸಿಟ್ಟ ಒಣದ್ರಾಕ್ಷಿಯನ್ನು ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಅವುಗಳೆಂದರೆ... 

ರಕ್ತಹೀನತೆ ಸಮಸ್ಯೆ ಇರುವವರು ಪ್ರತಿನಿತ್ಯ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ದೇಹದಲ್ಲಿನ ರಕ್ತಹೀನತೆ ದೂರವಾಗುತ್ತದೆ ಎಂದು ಪೌಷ್ಟಿಕ ತಜ್ಞರು ಸಲಹೆ ನೀಡುತ್ತಾರೆ. 

ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೆನೆಸಿಡುವುದರಿಂದ ಅದರಲ್ಲಿರುವ ಪೋಷಕಾಂಶಗಳು ದ್ವಿಗುಣಗೊಳ್ಳುತ್ತವೆ. ಮಾತ್ರವಲ್ಲದೆ, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಗುಣಲಕ್ಷಣಗಳು ಇದರಲ್ಲಿವೆ. ಹಾಗಾಗಿ, ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಅದರ ನೀರನ್ನು ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ನಮ್ಮನ್ನು ಹಲವು ರೋಗಗಳಿಂದ ರಕ್ಷಿಸುತ್ತದೆ ಎಂದು ಹೇಳಲಾಗುತ್ತದೆ. 

ನಿತ್ಯ ಬೆಳಿಗ್ಗೆ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಕೆಲಸ ಮಾಡುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಕಂಡುಬರುತ್ತದೆ. ಹಾಗಾಗಿ, ಇದು  ಮಲಬದ್ಧತೆಯಂತಹ ಸಮಸ್ಯೆಯಿಂದಲೂ ಪರಿಹಾರ ಪಡೆಯಬಹುದು. 

ನೆನೆಸಿಟ್ಟ ಒಣದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ ಹೇರಳವಾಗಿ ಕಂಡುಬರುತ್ತದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. 

8-10 ಒಣದ್ರಾಕ್ಷಿಗಳನ್ನು ನೆನೆಸಿಟ್ಟು ನಿತ್ಯ ಸೇವಿಸುವುದರಿಂದ ಇದು ಹೈ ಬಿಪಿಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link