ಇನ್ನು ಈ ರಾಶಿಯವರದ್ದು ಯಶಸ್ಸಿನ ಹಾದಿ ! ಕೈಯ್ಯಲ್ಲಿ ನಲಿದಾಡುವಳು ಲಕ್ಷ್ಮೀ

ಮುಂದಿನ 18 ತಿಂಗಳ ಕಾಲ ಕೆಲವು ರಾಶಿಯವರು ತಮ್ಮ ಜೀವನದಲ್ಲಿ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಹಠಾತ್ ಧನ ಲಾಭವಾಗುವುದು. ಪ್ರತಿಯೊಂದು ಹೆಜ್ಜೆಯಲ್ಲಿಯೂ ಪ್ರಗತಿಯಾಗುವುದು. 

ಬೆಂಗಳೂರು : ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಚಲನೆಗಳು,  ರಾಶಿ ಬದಲಾವಣೆ, ಉದಯ, ಅಸ್ತ ಹೀಗೆ ಪ್ರತಿಯೊಂದು ಬದಲಾವಣೆಗಳಿಗೂ ಬಹಳ ಮಹತ್ವವಿದೆ. ಪ್ರತಿ ಗ್ರಹವು ಒಂದು ನಿರ್ದಿಷ್ಟ ಅವಧಿಯೊಳಗೆ ಒಂದು ರಾಶಿಯಿಂದ ಮತ್ತೊಂದು ರಾಶಿಯನ್ನು ಪ್ರವೇಶಿಸುವಾಗ  ಅದು ಎಲ್ಲಾ 12 ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ದೇವಗುರು ಬೃಹಸ್ಪತಿಗೆ ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರ ಸ್ಥಾನವಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಏಪ್ರಿಲ್ 22, ರಂದು,  ಮೇಷ ರಾಶಿಯನ್ನು ಪ್ರವೇಶಿಸಿರುವ ಗುರು ಇನ್ನು ಮುಂದಿನ 18 ತಿಂಗಳ ಕಾಲ ಅಲ್ಲಿಯೇ ಇರಲಿದೆ. ಈ ಸಮಯದಲ್ಲಿ, ಕೆಲವು ರಾಶಿಯವರು ತಮ್ಮ ಜೀವನದಲ್ಲಿ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಈ ರಾಶಿಯವರಿಗೆ ಹಠಾತ್ ಧನ ಲಾಭವಾಗುವುದು. ಪ್ರತಿಯೊಂದು ಹೆಜ್ಜೆಯಲ್ಲಿಯೂ ಪ್ರಗತಿಯಾಗುವುದು. 

2 /4

ಮೇಷ - ಗುರುಗ್ರಹ ರಾಶಿ ಬದಲಾವಣೆಯು ಮೇಷ ರಾಶಿಯವರ ಕಷ್ಟವನ್ನು ಬದಿಗೆ ಸರಿಸಿ ಬಿಡುತ್ತದೆ. ರಾಜಯೋಗದ ಮೂಲಕ  ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಸಿಗಲಿದೆ. ಹೊಸ ಆದಾಯದ ಮೂಲ ಒದಗಿ ಬರುವುದು. ಗೌರವ ಪ್ರಾಪ್ತಿಯಾಗಲಿದೆ. ಅದೃಷ್ಟವಶಾತ್, ಕೆಲವು ಕೆಲಸಗಳನ್ನು ಮಾಡಬೇಕಾಗಿ ಬರಬಹುದು. ಆದರೆ ಯಾವ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಪಡೆಯುವುದು ಖಚಿತ. 

3 /4

ಕಟಕ : ಈ ರಾಶಿಯವರಿಗೆ ಶುಭ ಫಲಗಳು ಸಿಗಲಿವೆ. ಇನ್ನು 18 ತಿಂಗಳಲ್ಲಿ ಈ ರಾಶಿಯವರ ಜೀವನದಲ್ಲಿ ದುಡ್ಡಿನ ಸುರಿ ಮಳೆಯಾಗಲಿದೆ. ಈ ರಾಶಿಯ ಹತ್ತನೇ ಮನೆಯಲ್ಲಿ ಗುರುವಿನ ಸಂಚಾರವಾಗುತ್ತಿದೆ. ವ್ಯವಹಾರದಲ್ಲಿ ಉತ್ತಮ ಲಾಭವಾಗುವುದು. ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ನೀವು ಬಯಸಿದ ಕೆಲಸ ಪಡೆಯುವುದು ಸಾಧ್ಯವಾಗುತ್ತದೆ. ಈ ಸಮಯವು ಉದ್ಯಮಿಗಳಿಗೂ ಉತ್ತಮವಾಗಿರುತ್ತದೆ. ವ್ಯಾಪಾರ ವಿಸ್ತರಣೆ ಸಾಧ್ಯವಾಗುತ್ತದೆ. ಈ ಸಮಯದಲ್ಲಿ ಎರದೂವರೆ ವರ್ಷದ ಶನಿ ದೆಸೆ ನಡೆಯುತ್ತಿದೆ.  ಹಾಗಾಗಿ ಆರೋಗ್ಯದ ಬಗ್ಗೆ ಸ್ವಲ್ಪ ಜಾಗೃತೆ ಅಗತ್ಯ. 

4 /4

ಧನು ರಾಶಿ - ಧನು ರಾಶಿಯವರಿಗೆ ಒಳ್ಳೆಯ ಸುದ್ದಿ ಬರಲಿದೆ. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವೃತ್ತಿ ಪ್ರಗತಿಯು ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಸೂಕ್ತ ಸಮಯ. ವಾಹನ ಅಥವಾ ಆಸ್ತಿ ಖರೀದಿಸಲು ಉತ್ತಮ ಸಮಯ.