ಇಂದಿನಿಂದ ಧನಿಕರಾಗುವರು ಮೂರು ರಾಶಿಯವರು ! ಫಲ ನೀಡುವುದು ತ್ರಿಗ್ರಾಹಿ ಯೋಗ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಸಮಯದಲ್ಲಿ ಮೀನ ರಾಶಿಯಲ್ಲಿ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತಿದೆ. ಮೀನ ರಾಶಿಯಲ್ಲಿ ಗುರು, ಸೂರ್ಯ ಮತ್ತು ಬುಧದ ಸಂಯೋಗವು ರೂಪುಗೊಳ್ಳುತ್ತಿದೆ. ಇದು 3 ರಾಶಿಯವರಿಗೆ ಆರ್ಥಿಕ ಲಾಭವನ್ನು ನೀಡಲಿದೆ. 
 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಂಪತ್ತು, ಬುದ್ಧಿವಂತಿಕೆ ಮತ್ತು ವ್ಯವಹಾರವನ್ನು ನೀಡುವ ಬುಧ ಗ್ರಹವು ಇಂದು ಮೀನ ರಾಶಿಯನ್ನು ಪ್ರವೇಶಿಸಿದೆ. ನಿನ್ನೆ, ಸೂರ್ಯನು ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ.  ಗುರು ಕೂಡಾ ಪ್ರಸ್ತುತ ಇದೇ ರಾಶಿಯಲ್ಲಿದ್ದಾನೆ. ಈ ರೀತಿ ಸೂರ್ಯ, ಗುರು ಮತ್ತು ಬುಧರು ಸೇರಿ ಮೀನರಾಶಿಯಲ್ಲಿ ತ್ರಿಗ್ರಾಹಿ ಯೋಗ ರೂಪುಗೊಂಡಿದೆ. ಈ ತ್ರಿಗ್ರಾಹಿ ಯೋಗವು ಎಲ್ಲಾ ರಾಶಿಯವರ ಜೀವನದಲ್ಲಿ ದೊಡ್ಡ ಮಟ್ಟದ ಪ್ರಭಾವ ಬೀರಲಿದ್ದಾನೆ. ಆದರೆ 3 ರಾಶಿಯವರ ಜೀವನದಲ್ಲಿ ಮಾತ್ರ  ವಿಶೇಷ ಮಂಗಳಕರ ಫಲಿತಾಂಶಗಳನ್ನು ನೀಡಲಿದ್ದಾನೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಸಮಯದಲ್ಲಿ ಮೀನ ರಾಶಿಯಲ್ಲಿ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತಿದೆ. ಮೀನ ರಾಶಿಯಲ್ಲಿ ಗುರು, ಸೂರ್ಯ ಮತ್ತು ಬುಧದ ಸಂಯೋಗವು ರೂಪುಗೊಳ್ಳುತ್ತಿದೆ. ಇದು 3 ರಾಶಿಯವರಿಗೆ ಆರ್ಥಿಕ ಲಾಭವನ್ನು ನೀಡಲಿದೆ. 

2 /4

ವೃಶ್ಚಿಕ ರಾಶಿ : ತ್ರಿಗ್ರಾಹಿ ಯೋಗವು ವೃಶ್ಚಿಕ ರಾಶಿಯವರಿಗೆ  ದೊಡ್ಡ ಮಟ್ಟದ ಪ್ರಯೋಜನಗಳನ್ನು ನೀಡಲಿದೆ. ಈ ರಾಶಿಯವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಮಟ್ಟದ ಪ್ರಗತಿಯನ್ನು ಸಾಧಿಸಲಿದ್ದಾರೆ. ಹೊಸ ಉದ್ಯೋಗದ ಆಫರ್ ಬರಲಿದೆ. ಇರುವ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆಗಳಿವೆ. ಜೀವನದಲ್ಲಿ ದೊಡ್ಡ ಮಟ್ಟದ ಯಶಸ್ಸನ್ನು ಸಾಧಿಸಲಿದ್ದೀರಿ. ನಿಮಗೆ ಅರಿವಿಲ್ಲದ ಮೂಲಗಳಿಂದಲೂ ಹಣ ಹರಿದು ಬರುತ್ತದೆ. 

3 /4

ಧನು ರಾಶಿ : ಸೂರ್ಯ, ಗುರು ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ರೂಪುಗೊಂಡ ತ್ರಿಗ್ರಾಹಿ ಯೋಗವು ಧನು ರಾಶಿಯವರಿಗೆ ಹೆಚ್ಚಿನ ಲಾಭವನ್ನು  ನೀಡಲಿದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಹಣಕಾಸಿನ ಪ್ರಯೋಜನವಾಗಲಿದೆ. ಹೊಸ ಮನೆ, ವಾಹನ, ಬಟ್ಟೆ-ಆಭರಣ ಅಥವಾ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಯೋಗವಿದೆ. ನೀವು ಮಾಡುವ ಕೆಲಸಕ್ಕೆ ತಾಯಿ ಬೆನ್ನೆಲುಬಾಗಿ ನಿಲ್ಲಲಿದ್ದಾರೆ. 

4 /4

ಮೀನ ರಾಶಿ : ಮೀನ ರಾಶಿಯಲ್ಲಿಯೇ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತಿದೆ. ಆದುದರಿನದ ಮೀನ ರಾಶಿಯವರ ಮೇಲೆ ಇದರ ಪರಿಣಾಮ ಕೂಡಾ ಹೆಚ್ಚಾಗಿರುತ್ತದೆ.  ನಿಮ್ಮ ವ್ಯಕ್ತಿತ್ವದಲ್ಲಿ ಅದ್ಭುತವಾದ ಸುಧಾರಣೆ ಕಂಡುಬರುತ್ತದೆ. ಅದು ಜನರನ್ನು ನಿಮ್ಮ ಕಡೆಗೆ ಆಕರ್ಷಿಸುತ್ತದೆ. ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಪ್ರಾರಂಭಿಸುವುದಾದರೆ ಇದು ಉತ್ತಮ ಸಮಯ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು.  ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)