Ganesh Chaturthi 2022: ಸ್ವಾತಂತ್ರ ಚಳುವಳಿಯಲ್ಲಿ ಗಣೇಶ್ ಚತುರ್ಥಿ ಪಾತ್ರದ ಬಗ್ಗೆ ನಿಮಗೆಷ್ಟು ಗೊತ್ತು?

  • Aug 30, 2022, 20:51 PM IST

ಗಣೇಶ ಚತುರ್ಥಿ ಹಬ್ಬವನ್ನು ಪ್ರತಿವರ್ಷ ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸುವುದರಿಂದಾಗಿ ಈ ಹಬ್ಬವು ಈಗ ಸಾಂಸ್ಕೃತಿಕ ವಿದ್ಯಮಾನವಾಗಿ ಪರಿವರ್ತನೆಯಾಗಿದೆ.ಹಾಗಾಗಿ ಈ ಸಂದರ್ಭದಲ್ಲಿ ನಾವು ಗಣೇಶ ಚತುರ್ಥಿ ಹಬ್ಬವನ್ನು ಐತಿಹಾಸಿಕ ದೃಷ್ಟಿಕೋನದಿಂದ ನೋಡುವುದು ಸೂಕ್ತವೆನಿಸುತ್ತದೆ. ನಾವು ಗಣೇಶ್ ಚತುರ್ಥಿಯ ಹಬ್ಬದ ಮೂಲವನ್ನು ಹುಡುಕುತ್ತಾ ಹೋದಾಗ ಇದು ಪ್ರಮುಖವಾಗಿ ಮಹಾರಾಷ್ಟ್ರ ಭಾಗದಲ್ಲಿ ವ್ಯಾಪಕವಾಗಿ ಚಾಲ್ತಿಯಲ್ಲಿರುವುದನ್ನು ಕಾಣುತ್ತೇವೆ.

Photo Courtsey: Wikipedia Commons

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.


 

1 /5

ಜನರು ಮೋದಕವನ್ನು ಗಣೇಶನ ನೆಚ್ಚಿನ ತಿಂಡಿ ಎಂದು ನಂಬಿರುವುದರಿಂದ ಗಣೇಶೋತ್ಸವದ ಸಂದರ್ಭದಲ್ಲಿ ಇಪ್ಪತ್ತೊಂದು ಮೋದಕಗಳನ್ನು ದೇವರಿಗೆ ಮತ್ತು ಪ್ರಸಾದವಾಗಿ ಅರ್ಪಿಸುವುದರೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಗುತ್ತದೆ

2 /5

ಇನ್ನೂ ಗೋವಾದಲ್ಲಿ ಗಣೇಶ ಚತುರ್ಥಿಯು ಸಾರ್ವಜನಿಕ ಹಬ್ಬಕ್ಕಿಂತ ಹೆಚ್ಚಾಗಿ ಕುಟುಂಬದ ಹಬ್ಬವಾಗಿದೆ. 

3 /5

ಲೋಕಮಾನ್ಯ ತಿಲಕರು 1893 ರಲ್ಲಿ ತಮ್ಮ ಪತ್ರಿಕೆ ಕೇಸರಿಯಲ್ಲಿ ಬರೆದ ಲೇಖನದಲ್ಲಿ ಜಾವಲೆಯವರ ಪ್ರಯತ್ನಗಳನ್ನು ಶ್ಲಾಘಿಸಿದರು.ತದನಂತರ ಗಣೇಶ ಚತುರ್ಥಿಯನ್ನು ಸಾರ್ವಜನಿಕವಾಗಿ ಬೃಹತ್ ಪ್ರಮಾಣದಲ್ಲಿ ಆಚರಿಸಲು ಅವರು ಕರೆ ನೀಡಿದರು.

4 /5

ಈ ಹಬ್ಬವು ಆರಂಭದಲ್ಲಿ ಮಹಾರಾಷ್ಟ್ರದಲ್ಲಿ ಖಾಸಗಿ ಕುಟುಂಬದ ಆಚರಣೆಯಾಗಿ ಚಾಲ್ತಿಯಲ್ಲಿತ್ತು, ಆದರೆ ಇದನ್ನು ಜನರ ಹಬ್ಬವಾಗಿ ಪರಿವರ್ತಿಸಿದ ಕೀರ್ತಿ ಬಾಲಗಂಗಾಧರ ತಿಲಕರಿಗೆ ಸಲ್ಲುತ್ತದೆ.ಅದರಲ್ಲೂ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಜನರನ್ನು ಸಂಘಟಿಸುವ ನಿಟ್ಟಿನಲ್ಲಿ ಈ ಹಬ್ಬಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿದರು.  

5 /5

ಗಣೇಶ ಚತುರ್ಥಿಯನ್ನು ಪುಣೆಯಲ್ಲಿ ಸಾಂಪ್ರದಾಯಿಕವಾಗಿ ಮರಾಠಾ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಾಲದಿಂದಲೂ ಆಚರಿಸಲಾಗುತ್ತದೆ, ಗಣೇಶನು ಪೇಶ್ವೆಗಳ ಕುಲದೇವರಾಗಿದ್ದರಿಂದಾಗಿ ಆಗ ವೈಭವದಿಂದ ಆಚರಿಸಲಾಗುತ್ತಿತ್ತು. ಆದರೆ ಕಾಲಾಂತರದಲ್ಲಿ 1818 ರಲ್ಲಿ ಪೇಶ್ವೆಗಳ ಪತನದೊಂದಿಗೆ ಗಣೇಶೋತ್ಸವದ ಆಚರಣೆ ಮಹಾರಾಷ್ಟ್ರದಲ್ಲಿ ಕಳೆಗುಂದುತ್ತಾ ಬಂದಿತು.