Guru Budh Yuti: 15 ದಿನಗಳವರೆಗೆ ಈ ಜನರ ಮೇಲೆ ಅಪಾರ ಧನ-ಸಂಪತ್ತು ಕರುಣಿಸಲಿದ್ದಾರೆ ದೇವಗುರು ಬೃಹಸ್ಪತಿ ಮತ್ತು ಬುಧ!

Mon, 25 Mar 2024-8:00 pm,

ಕರ್ಕ ರಾಶಿ: ಗುರು ಶುಕ್ರರ ಈ ಮೈತ್ರಿ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಮೈತ್ರಿ ನಿಮ್ಮ ಜಾತಕದ ಕರ್ಮ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಗೆ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಸಿಗಲಿದೆ.   

ಕರ್ಕ ಜಾತಕದ ಜನರಿಗೆ ಬೃಹಸ್ಪತಿ ಹಾಗೂ ಗ್ರಹಗಳ ರಾಜಕುಮಾರನ ಈ ಮೈತ್ರಿಯ ಕಾರಣ ನಿಮಗೆ ನಿಮ್ಮ ಆಪ್ತರ ಅಪಾರ ಬೆಂಬಲ ಸಿಗಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ಪ್ರಮೋಷನ್, ಬಯಸಿದೆಡೆ ವರ್ಗಾವಣೆ ಭಾಗ್ಯ ಪ್ರಾಪ್ತಿಯಾಗಬಹುದು. ಒಂದು ವೇಳೆ ನೀವು ವ್ಯಾಪಾರ ಮಾಡುತ್ತಿದ್ದರೆ, ಈ ಅವಧಿಯಲ್ಲಿ ನಿಮಗೆ ಉತ್ತಮ ಧನಲಾಭ ಸಿಗುವ ಸಾಧ್ಯತೆ ಇದೆ.   

ಸಿಂಹ ರಾಶಿ: ಸಿಂಹ ರಾಶಿಯ ಜಾತಕದವರಿಗೆ ಈ ಮೈತ್ರಿ ಸಾಕಷ್ಟು ಅನಕೂಲಕರ ಸಾಬೀತಾಗಲಿದೆ. ಏಕೆಂದರೆ ಈ ಸಂಯೋಜನೆ ನಿಮ್ಮ ಜಾತಕದ ಒಂಬತ್ತನೇ ಮನೆಯಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನೀವು ಯಾವುದಾದರೊಂದು ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.  

ಸಿಂಹ ಜಾತಕದವರ ಹಣಕಾಸಿನ ವಿಷಯದ ಬಗ್ಗೆ ಹೇಳುವುದಾದರೆ, ಈ ಅವಧಿಯಲ್ಲಿ ನೀವು ಉತ್ತಮ ಹಣ ಗಳಿಕೆಯ ಸ್ಥಿತಿಯಲ್ಲಿ ಇರುವಿರಿ. ಈ ನಿಟ್ಟಿನಲ್ಲಿ ನಿಮ್ಮ ಕಡೆಯಿಂದ ಮಾಡಲಾಗುವ ಪ್ರಯತ್ನಕ್ಕೆ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನೀವು ದೇಶ ವಿದೇಶಗಳಿಗೆ ಯಾತ್ರೆಯನ್ನು ಕೂಡ ಕೈಗೊಳ್ಳುವಿರಿ. ವಿದ್ಯಾರ್ಥಿಗಳ ಪಾಲಿಗೆ ಈ ಅವಧಿ ಸಾಕಷ್ಟು ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಶ್ರೇಯಾಂಕ ಲಭಿಸಲಿದೆ.  

ಮಕರ ರಾಶಿ: ನಿಮ್ಮ ಪಾಲಿಗೆ ಬುಧ ಮತ್ತು ಗುರುವಿನ ಮೈತ್ರಿ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಮೈತ್ರಿ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ನೆರವೇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅಪಾರ ಸುಖ-ಸೌಕರ್ಯ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ.   

ಈ ಅವಧಿಯಲ್ಲಿ ಮಕರ ರಾಶಿಯವರ ಹಣಕಾಸಿನ ವಿಷಯದ ಕುರಿತು ಹೇಳುವುದಾದರೆ, ನೀವು ಅಪಾರ ಹಣಗಳಿಕೆ ಮಾಡುವಲ್ಲಿ ಮತ್ತು ಕೂಡಿ ಹಾಕುವಲ್ಲಿ ಯಶಸ್ಸನ್ನು ಸಾಧಿಸುವಿರಿ. ಈ ಅವಧಿಯಲ್ಲಿ ನಿಮಗೆ ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಕೆಲಸ ವ್ಯಾಪಾರದಲ್ಲಿ ಅಪಾರ ಯಶಸ್ಸು ಲಭಿಸಲಿದೆ.   

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link