ಶೀಘ್ರದಲ್ಲೇ ಮಂಗಳನ ಅಂಗಳದಲ್ಲಿ ಗುರು-ಚಂದ್ರರ ಮೈತ್ರಿ, ಶ್ರೀಹರಿ ಲಕ್ಷ್ಮಿ ಕೃಪೆಯಿಂದ ಈ ಜನ ತಿಜೋರಿ ಹಣದಿಂದ ತುಂಬಿ ತುಳುಕಲಿದೆ!

Tue, 24 Oct 2023-2:40 pm,

Guru - Chandra Yuti In Aries: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 28 ರಂದು ಮಂಗಳನ ಮನೆಯಾಗಿರುವ ಮೇಷ ರಾಶಿಯಲ್ಲಿ ದೇವಗುರು ಬೃಹಸ್ಪತಿ ಹಾಗೂ ಚಂದ್ರರ ಮೈತ್ರಿ ನೆರವೇರಲಿದೆ. ಇದರಿಂದ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳಲಿದ್ದು, ಇದು 3 ರಾಶಿಗಳ ಜನರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಅಪಾರ ಯಶಸ್ಸು ತಂದು ಕೊಡಲಿದೆ. (Spiritual News In Kannada)

ಮೇಷ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಏರ್ಪಡಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳು ಭಾರಿ ಹೊಳಪನ್ನು ಪಡೆದುಕೊಳ್ಳಲಿವೆ. ನಿಮ್ಮ ವೈವಾಹಿಕ ಜೀವನ ಕೂಡ ಉತ್ತಮವಾಗಿರಲಿದೆ. ಧನಲಾಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಮಕ್ಕಳ ಕಡೆಯಿಂದ ಒಳ್ಳೆಯ ಸಮಾಚಾರ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ಹೊಸ ಹೂಡಿಕೆಯಿಂದ ನಿಮಗೆ ಅಪಾರ ಲಾಭ ಹರಿದುಬರಲಿದೆ. ಪಾರ್ಟ್ನರ್ ಶಿಪ್ ಕೆಲಸದಲ್ಲಿ ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ಯಾಸದಲ್ಲಿ ವೃದ್ಧಿಯನ್ನು ನೀವು ಕಾಣುವಿರಿ. 

ಮಿಥುನ ರಾಶಿ: ಗುರು-ಚಂದ್ರರ ಮೈತ್ರಿಯಿಂದ ನಿಮ್ಮ ಗೋಚರ ಜಾತಕದ ಆದಾಯ ಮತ್ತು ಲಾಭದ ಸ್ಥಾನದಲ್ಲಿ ಗಜಕೇಸರಿ ರಾಜಯೋಗ ರಚನೆಯಾಗುತಿದ್ದು, ಇದು ನಿಮ್ಮ ಆದಾಯವನ್ನು ಸಾಕಷ್ಟು ಪಟ್ಟು ಹೆಚ್ಚಿಸಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳವನ್ನು ನೀವು ನೋಡಬಹುದು ಮತ್ತು ನಿಮ್ಮ ಪಾಲಿಗೆ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಉಂಟಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಧನಲಾಭದ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಹೊಸ ನೌಕರಿ ಸಿಗುವ ಸಾಧ್ಯತೆ ಇದೆ. ಮಕ್ಕಳ ಉನ್ನತಿಯ ಎಲ್ಲಾ ಸಂಕೇತಗಳಿವೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ಇಂಪೋರ್ಟ್-ಎಕ್ಸ್ಪೋರ್ಟ್ ವ್ಯವಹಾರದಲ್ಲಿರುವವರಿಗೆ ಉತ್ತಮ ಲಾಭ ಸಿಗಲಿದೆ. 

ಕರ್ಕ ರಾಶಿ: ಗುರು-ಚಂದ್ರರ ಮೈತ್ರಿಯ ಕಾರಣ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ನಿಮ್ಮ ವೃತ್ತಿ-ವ್ಯಾಪಾರದಲ್ಲಿ ಅಪಾರ ಉನ್ನತಿ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ನಿಮ್ಮ ಭಾಗ್ಯದಲ್ಲಿಯೂ ಕೂಡ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಧನ-ಸಂಪತ್ತಿನ ಕೊರತೆ ನಿವಾರಣೆಯಾಗಲಿದೆ. ನೌಕರಿಯಲ್ಲಿ ಹೊಸ ಪ್ರಸ್ತಾಪಗಳು ಸಿಗುವ ಸಾಧ್ಯತೆಗಳಿವೆ. ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗುವುದರ ಜೊತೆಗೆ ಮನಸ್ಸು ಪ್ರಸನ್ನಚಿತ್ತದಿಂದ ಕೂಡಿರಲಿದೆ. ಮನೆಯಲ್ಲಿ ಮಂಗಳ ಅಥವಾ ಧಾರ್ಮಿಕ ಕಾರ್ಯ ನೆರವೇರಲಿದೆ.  

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link