ಮುಂದಿನ ಐದು ದಿನ ಈ ಜಿಲ್ಲೆಗಳಲ್ಲಿ ಕುಂಭ ದ್ರೋಣ ಮಳೆ!ಗುಡುಗು, ಮಿಂಚು, ಗಾಳಿ ಸಹಿತ ಎಡೆಬಿಡದೆ ಅಬ್ಬರಿಸಲಿದ್ದಾನೆ ವರುಣ!

Mon, 06 May 2024-10:35 am,

ಮುಂದಿನ ಐದು ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದರೆ ಇಂದಿನಿಂದ ಮೇ 10ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಎಲ್ಲಾ ಲಕ್ಷಣಗಳಿವೆ.

ಇಂದಿನಿಂದ ಐದು ದಿನಗಳವರೆಗೆ ಅಂದರೆ ಮೇ ೧೦ರವರೆಗೆ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. 

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗಲಿದೆ. ಮೇ 10 ರವರೆಗೆ ಸತತವಾಗಿ ಮಳೆ ಸುರಿಯಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರಿನಲ್ಲಿ ಇಂದು ಸಂಜೆ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮಿಂಚಿನೊಂದಿಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   

ಉತ್ತರ ಒಳನಾಡಿನಲ್ಲಿ ಕೆಲೆವೆಡೆ ಮಾತ್ರ ಮಳೆಯಾಗಲಿದ್ದು, ಒಣಹವೆ ಮುಂದುವರೆಯಲಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link