ಮೂವತ್ತು ವರ್ಷಗಳ ಬಳಿಕ ಮೂಲ ತ್ರಿಕೋನ ರಾಶಿಯಲ್ಲಿ ಶನಿಯ ನೇರನಡೆ ಆರಂಭ, ಮುಂದಿನ ವರ್ಷ ಈ ಜನರಿಗೆ ಅಪಾರ ಸಿರಿ-ಸಂಪತ್ತು ಪ್ರಾಪ್ತಿಯೋಗ!

Sat, 11 Nov 2023-2:08 pm,

Horoscope 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಮೂವತ್ತು ವರ್ಷಗಳ ಬಳಿಕ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ನೇರನಡೆ ಅನುಸರಿಸಿದ್ದಾನೆ. ಇದರಿಂದ ವರ್ಷ 2024 ಕೆಲ ರಾಶಿಗಳ ಜನರ ಪಾಲಿಗೆ ಅಪಾರ ಧನಸಂಪತ್ತನ್ನು ತಂದುಕೊಡಲಿದೆ. (Spiritual News In Kannada)

ಕುಂಭ ರಾಶಿ: ಶನಿ ನಿಮ್ಮ ರಾಶಿಗೆ ಅಧಿಪತಿಯಾದ ಕಾರಣ ವರ್ಷ 2024 ನಿಮ್ಮ ಪಾಲಿಗೆ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಇದರ ಜೊತೆಗೆ ಆತ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಆಕರ್ಷಣೆ ಇರಲಿದೆ. ಪ್ರತಿಯೊಂದು ಕೆಲಸದಲ್ಲಿ ಶುಭ ಫಲಗಳು ಸಿಗಲಿವೆ. ನಿಂತುಹೋದ ನಿಮ್ಮ ಯೋಜನೆಗಳು ಮತ್ತೆ ಆರಂಭಗೊಳ್ಳಲಿವೆ. ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಸುಧಾರಣೆಯಾಗಲಿದೆ. ಇನ್ನೊಂದೆಡೆ ಶನಿ ನಿಮ್ಮ ಗೋಚರ ಜಾತಕದಲ್ಲಿ ಶಶ ರಾಜಯೋಗ ಕೂಡ ನಿರ್ಮಿಸುತ್ತಿದ್ದಾನೆ. ಹೀಗಾಗಿ ವರ್ಷ 2024ರ ಆರಂಭದಲ್ಲಿ ನೀವು ವಾಹನ ಹಾಗೂ ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭ ಸಿಗಲಿದೆ. 

ವೃಷಭ ರಾಶಿ: ವರ್ಷ 2024 ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಶನಿ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ನೆರನಡೆಯನ್ನು ಅನುಸರಿಸಿದ್ದಾನೆ. ಹೀಗಾಗಿ ಕೆಲಸ ಕಾರ್ಯಗಳಲ್ಲಿ ಉತ್ತಮ ಏಳ್ಗೆಯನ್ನು ನೀವು ನೋಡುವಿರಿ. ಇದಲ್ಲದೆ ವ್ಯಾಪಾರದಲ್ಲಿ ಹಣ ಹೂಡಿಕೆಗೆ ನಿಮಗೆ ಅವಕಾಶ ಒದಗಿ ಬರಲಿದೆ ಹಾಗೂ ಅದರಿಂದ ನಿಮಗೆ ಲಾಭ ಕೊಡ ಉಂಟಾಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಸ್ಥಾನ ಹಾಗೂ ಪ್ರಭಾವ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಹೊಸ ಆರ್ಡರ್ ಗಳು ಬರಲಿವೆ. ನಿರುದ್ಯೋಗಿಗಳಿಗೆ ನೌಕರಿ ಸಿಗಲಿದೆ. ಶನಿದೇವ ನಿಮ್ಮ ಗೋಚರ ಜಾತಕದಲ್ಲಿಯೂ ಕೂಡ ಶಶ ರಾಜಯೋಗ ನಿರ್ಮಿಸಿದ್ದಾನೆ. ಇದೃಂದ ವ್ಯಾಪಾರಿಗಳಿಗೆ ಅಧಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. 

ಮಿಥುನ ರಾಶಿ: ವರ್ಷ 2024 ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಶನಿ ದೇವ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ನೆರನಡೆ ಅನುಸರಿಸಿದ್ದಾನೆ. ಅಲ್ಲಿ ಆತ 2025ರವರೆಗೆ ವಿರಾಜಮಾನನಾಗಿರಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಎಲ್ಲಾ ಕಾರ್ಯಗಳಲ್ಲಿ ಅದೃಷ್ಟದ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ಈ ಅವಧಿಯಲ್ಲಿ ನಿಮಗೆ ಹಣಗಳಿಕೆಯ ಉತ್ತಮ ಅವಕಾಶಗಳು ಒದಗಿಬರಲಿವೆ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ನಿಮಗೆ ಧನ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನೀವು ವಾಹನ ಆಸ್ತಿಪಾಸ್ತಿಯನ್ನು ಖರೀದಿಸಲು ಮನಸ್ಸು ಮಾಡಬಹುದು. ಮಾರ್ಚ್ ಬಳಿಕ ನೀವು ಬಯಸಿದ ಕಡೆ ನಿಮಗೆ ವರ್ಗಾವಣೆ ಭಾಗ್ಯ ಪ್ರಾಪ್ತಿಯಾಗಲಿದೆ. ಪ್ರಮೋಷನ್ ಕೂಡ ಸಿಗಲಿದೆ.

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link