ಭೀಕರ ಪ್ರವಾಹಕ್ಕೆ ತತ್ತರಿಸಿದ ಕೇರಳ: Photos

Fri, 10 Aug 2018-8:19 pm,

ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೆ, ನದಿಗಳು ತುಂಬಿ ಹರಿಯುತ್ತಿದ್ದು ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ.  

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕರಾವಳಿ ಭಾಗ ತತ್ತರಿಸಿದ್ದು, ಮುಖ್ಯಮಂತ್ರಿ ಪಿನರಾಯ್‌ ವಿಜಯನ್‌ ಎಲ್ಲ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಭೀಕರ ಪ್ರವಾಹದಿಂದಾಗಿ ಈವರೆಗೆ 26 ಮಂದಿ ಸಾವನ್ನಪ್ಪಿದ್ದಾರೆ. 

ವಯನಾಡ್‌ ಜಿಲ್ಲೆಯ ಪನಮರಮ್‌ನಲ್ಲಿ ಪ್ರವಾಹದ ನಡುವೆ ಸಿಕ್ಕಿಹಾಕಿಕೊಂಡ ಸುಮಾರು 50 ಮಂದಿಯನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಕೇರಳದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನ್ಯವು ಹೆಲಿಕಾಪ್ಟರ್ ಬಳಸಿಕೊಂಡು ಹೆಚ್ಚುವರಿ ಪ್ರವಾಸಿಗರನ್ನು ಸ್ಥಳಾಂತರಿಸಿದೆ.

ಭಾರೀ ಮಳೆಯಿಂದಾಗಿ ನದಿ ನೀರು ಹೆಚ್ಚಾದ ಪರಿಣಾಮ ಇಡುಕ್ಕಿ ಡ್ಯಾಂನ ಎಲ್ಲಾ ಗೇಟುಗಳನ್ನೂ ತೆರೆಯಲಾಗಿದೆ. ಅತಿಯಾದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಮನೆಗಳು, ಗದ್ದೆಗಳು ಮುಳುಗಡೆಯಾಗಿವೆ. 

ಪ್ರವಾಹದಲ್ಲಿ ಸಿಲುಕಿದ್ದ ವೃದ್ಧೆಯೋಬ್ಬರನ್ನು ಸ್ಥಳಿಯರು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತಿರುವುದು.

ಭಾರೀ ಮಳೆಯಿಂದಾಗಿ ನದಿ ನೀರು ಹೆಚ್ಚಾದ ಪರಿಣಾಮ ಇಡುಕ್ಕಿ ಡ್ಯಾಂನ ಎಲ್ಲಾ ಗೇಟುಗಳನ್ನೂ ತೆರೆಯಲಾಗಿದೆ. ಅತಿಯಾದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಮನೆಗಳು, ಗದ್ದೆಗಳು ಮುಳುಗಡೆಯಾಗಿವೆ. 

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮನಪ್ಪುರಂ ಶ್ರೀ ಮಹಾದೇವ ದೇವಸ್ಥಾನ ನೀರಿನಲ್ಲಿ ಮುಳುಗಡೆಯಾಗಿದೆ. 

ರೈಲ್ವೆ ಹಳಿಗಳಲ್ಲಿ ನೀರು ನಿಂತಿರುವ ಪರಿಣಾಮ ರೈಲು ಸಂಚಾರ ಅಸ್ತವ್ಯಸ್ತವಾಗಿದೆ.   

ಪ್ರವಾಹದಿಂದ ರಸ್ತೆಗಳಲ್ಲಿ ಸಂಪೂರ್ಣ ನೀರು ಆವೃತವಾಗಿದೆ. 

ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಎನ್ಡಿಆರ್ಎಫ್ ತಂಡ ಸ್ಥಳಾಂತರಿಸುತ್ತಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link