ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ 18 ತಿಂಗಳವರೆಗೆ ಈ ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರವನ್ನು ತಡೆಹಿಡಿಯಲಾಗಿತ್ತು. ಇದೀಗ ಬಾಕಿ ಡಿಎ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ.
8ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರು ಹಲವಾರು ಬದಲಾವಣೆಗಳನ್ನು ಕಾಣಲಿದ್ದಾರೆ. ನೌಕರರು ಮತ್ತು ಪಿಂಚಣಿದಾರರ ಬಹುನಿರೀಕ್ಷಿತ ಬೇಡಿಕೆಗಳು ಈ ಬಾರಿ ಈಡೇರುವ ನಿರೀಕ್ಷೆಯಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು (ಸಾರ್ವಜನಿಕ ವಲಯದ ನೌಕರರು ಸೇರಿದಂತೆ) ತುಟ್ಟಿ ಭತ್ಯೆಯನ್ನು ಪಡೆಯುತ್ತಾರೆ. ವರ್ಷಕ್ಕೆ ಎರಡು ಬಾರಿ ಇದನ್ನು ಪರಿಷ್ಕರಿಸಲಾಗುತ್ತದೆ. ಸರ್ಕಾರಿ ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲಾಗುತ್ತದೆ.
ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ 18 ತಿಂಗಳವರೆಗೆ ಡಿಎ ಮತ್ತು ಡಿಆರ್ ಅನ್ನು ತಡೆಹಿಡಿಯಲಾಗಿತ್ತು. ಈ ಬಾಕಿ ಡಿಎಯನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ.
ಇದೀಗ ಈ ಬಾಕಿ ಹಣ ಬಿಡುಗಡೆ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಸ್ಪಷ್ಟ ಉತ್ತರ ನೀಡಿದ್ದಾರೆ.
ಕೇಂದ್ರ ಸರ್ಕಾರಿ ನೌಕರರಿಗೆ ಬಾಕಿ ಇರುವ 18 ತಿಂಗಳ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರವನ್ನು ಬಿಡುಗಡೆ ಮಾಡಲು ಸರ್ಕಾರ ಗಡುವು ನಿಗದಿಪಡಿಸಿದೆಯೇ ಎನ್ನುವ ಪ್ರಶ್ನೆಗೆ ಈ ಬಗ್ಗೆ ಯಾವುದೇ ನಿರ್ದಿಷ್ಟ ಗಡುವನ್ನು ನಿರ್ಧರಿಸಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.
2020 ರಲ್ಲಿ ಸಾಂಕ್ರಾಮಿಕ ರೋಗದ ಪ್ರತಿಕೂಲ ಆರ್ಥಿಕ ಪರಿಣಾಮ ಮತ್ತು ಸರ್ಕಾರ ತೆಗೆದುಕೊಂಡ ಕಲ್ಯಾಣ ಕ್ರಮಗಳಿಗಾಗಿ ಒದಗಿಸಲಾದ ನಿಧಿಗಳು 2020-21ರ ಆರ್ಥಿಕ ವರ್ಷವನ್ನು ಮೀರಿ ಹಣಕಾಸಿನ ಸೋರಿಕೆಗೆ ಕಾರಣವಾಗಿವೆ. ಆದ್ದರಿಂದ, ಬಾಕಿ ಡಿಎ/ಡಿಆರ್ ಬಿಡುಗಡೆ ಕಾರ್ಯಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಏರುತ್ತಿರುವ ಬೆಲೆ ಏರಿಕೆ ಮತ್ತು ಹಣದುಬ್ಬರವನ್ನು ನಿಯಂತ್ರಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ನೀಡಲಾಗುತ್ತದೆ. ಇವುಗಳನ್ನು ಪ್ರತಿ ಆರು ತಿಂಗಳಿಗೊಮ್ಮ ಅಂದರೆ , ಜನವರಿ ಮತ್ತು ಜುಲೈ ತಿಂಗಳುಗಳಲ್ಲಿ ಪರಿಷ್ಕರಿಸಲಾಗುತ್ತದೆ.