ಜನ್ಮದಿನದಂದು ನಾಮಪತ್ರ ಸಲ್ಲಿಸಲು ಬಂದ ಜಯಪ್ರದ ಬಿಜೆಪಿ ಬಗ್ಗೆ ಹೇಳಿದ್ದೇನು?

ನಾನು ಎಲ್ಲಿ ಕೆಲಸ ಮಾಡಲು ಇಚ್ಚಿಸಿದ್ದೇನೋ ಅಲ್ಲಿಂದಲೇ ನನಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಇದು ನನ್ನ ಹುಟ್ಟು ಹಬ್ಬಕ್ಕೆ ಬಿಜೆಪಿಯಿಂದ ದೊರೆತ ಬಹುದೊಡ್ಡ ಉಡುಗೊರೆಯಾಗಿದೆ ಎಂದು ಜಯಪ್ರದಾ ಹೇಳಿದ್ದಾರೆ.

  • Apr 03, 2019, 12:26 PM IST

ನವದೆಹಲಿ: ರಾಮ್ಪುರ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಭ್ಯರ್ಥಿ ಜಯಪ್ರದಾ ತಮ್ಮ ಜನ್ಮದಿನದಂದೇ(ಎಪ್ರಿಲ್ 03) ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ನಾನು ಎಲ್ಲಿ ಕೆಲಸ ಮಾಡಲು ಇಚ್ಚಿಸಿದ್ದೇನೋ ಅಲ್ಲಿಂದಲೇ ನನಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಇದು ನನ್ನ ಹುಟ್ಟು ಹಬ್ಬಕ್ಕೆ ಬಿಜೆಪಿಯಿಂದ ದೊರೆತ ಬಹುದೊಡ್ಡ ಉಡುಗೊರೆ ಎಂದು ಹೇಳಿದ್ದಾರೆ.

1 /5

ನಾಮಪತ್ರ ಸಲ್ಲಿಕೆಗೂ ಮೊದಲು ಭರ್ಮೌರ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಜಯಪ್ರದಾ, ಶಿವನ ಆಶೀರ್ವಾದ ಪಡೆದರು. 

2 /5

ಬಿಜೆಪಿ ಅಭ್ಯರ್ಥಿ ಜಯಪ್ರದಾ ಬಳಿಕ ಹಜರತ್ ರಹಮಾನ್ ಅಲೌದ್ದೀನ್ ಚಿಸ್ತಿಯನ್ನು ತಲುಪಿ ಪ್ರಾರ್ಥನೆ ಸಲ್ಲಿಸಿದರು. ಅವರ ಜನ್ಮದಿನದ ಅಂಗವಾಗಿ ಅವರು ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಿದರು.

3 /5

ಜೀ ಮೀಡಿಯಾದೊಂದಿಗೆ ವಿಶೇಷ ಸಂಭಾಷಣೆಯಲ್ಲಿ ಮಾತನಾಡಿದ ಜಯಪ್ರದಾ ಅಭಿವೃದ್ಧಿ, ರಕ್ಷಣೆ ಮತ್ತು ಮಹಿಳೆಯರಿಗೆ ಗೌರವವು ನಮಗೆ ಮುಖ್ಯವಾದ ವಿಷಯವಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ಕೆಲಸವನ್ನು ಮುಂದಿಟ್ಟು ನಾವು ಚುನಾವಣೆಗೆ ಹೋಗುತ್ತಿದ್ದೇವೆ ಎಂದರು.

4 /5

ರಾಮ್ಪುರದ ಜನರ ಪ್ರೀತಿ, ಅಭಿಮಾನದಿಂದಲೇ ನಾನು ಸಕ್ರಿಯ ರಾಜಕಾರಣಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವು ಸ್ವಲ್ಪ ಕಷ್ಟ ಎಂದು ಭಾವಿಸಿದ್ದೆ. ಆದರೆ, ಇಲ್ಲಿಯ ಜನ ನನ್ನೊಂದಿಗಿರುವುದಾಗಿ ಧೈರ್ಯ ತುಂಬಿ, ಭರವಸೆ ನೀಡಿದ್ದಾರೆ. ಚುನಾವಣೆಯಲ್ಲಿ ಗೆಲುವು ಖಚಿತ ಎಂದರು.

5 /5

ಎಪ್ರಿಲ್ 03, 1962 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದ ಜಯಪ್ರದಾ ಇಂದು ತಮ್ಮ 57ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ತೆಲುಗು ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ ಜಯಪ್ರದಾ ಈವರೆಗೂ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.