ಹೊಸಕೋಟೆಯಲ್ಲಿ ಶರತ್ ಪತ್ನಿಯ ಕಾರು ಧ್ವಂಸ

Wed, 26 Apr 2023-1:49 pm,

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. 

ಇಂದು ಬೆಳಿಗ್ಗೆ ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಪ್ರತಿಭಾ ಶರತ್ ಅವರ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಕಿಡಿಗೇಡಿಗಳು.

ಕಿಡಿಗೇಡಿಗಳಿಂದ ಇನ್ನೂವಾ ಕ್ರಿಸ್ಟಾ ಕಾರಿ‌ನ ಸೈಡ್ ಗ್ಲಾಸ್ಗಳನ್ನ ಹೊಡೆದು ಅಟ್ಟಹಾಸ.

ಹೊಸಕೋಟೆಯಲ್ಲಿ ತನ್ನ ಪತಿ ಶರತ್ ಬಚ್ಚೇಗೌಡರ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಪ್ರತಿಭಾ ಶರತ್. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಈ ಘಟನೆ ನಡೆದಿದ್ದು, ಯುವಕ ಕಾರ್ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗುತ್ತಿರುವ ದೃಶ್ಯ ಸೆರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಇನ್ನು ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚುನಾವಣಾ ಅಧಿಕಾರಿಗಳು ಮತ್ತು ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link