Karnataka Elections 2023: ಸಿದ್ದು vs ಡಿಕೆಶಿ, ಯಾರಿಗೆ ಒಲಿಯಲಿದೆ ಸಿಎಂ ಪಟ್ಟ?
ಕಾಂಗ್ರೆಸ್ನಲ್ಲಿ ಸಿಎಂ ಪಟಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ನಾನು ಸಿಎಂ ಆಗ್ಬೇಕು ಅಂತಾ ಡಿಕೆಶಿ, ಇಲ್ಲ ನಾನು ಸಿಎಂ ಆಗ್ಬೇಕು ಅಂತಾ ಸಿದ್ದು ಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಲ್ಪಿ ನಾಯಕರ ಆಯ್ಕೆ ಕಗ್ಗಂಟು ಬಗೆಹರಿದಿಲ್ಲ. ಹೀಗಾಗಿ ಸಿಎಂ ಆಯ್ಕೆ ವಿಚಾರ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹೊಸ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ನಿರ್ಣಯ ಮಂಡಿಸಿರುವ ಅವರು ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ನೀಡಿಲ್ಲ. ಸಿದ್ದರಾಮಯ್ಯ ಮತ್ತು ನಿಮಗೂ ಸಮಾನ ಅವಕಾಶ ಎಂದಿದ್ದಕ್ಕೆ ಡಿಕೆಶಿ ಒಪ್ಪಿಲ್ಲ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರ ಇದೀಗ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಐಸಿಸಿ ಅಧ್ಯಕ್ಷರು ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಅನ್ನೋದು ತೀವ್ರ ಕೂತುಹಲ ಮೂಡಿಸಿದೆ.