Janmashtami 2023 Rashifal: ಇಂದು ಈ 4 ರಾಶಿಯವರಿಗೆ ಕೃಷ್ಣ ಕೃಪೆ, ಸಿರಿವಂತರಾಗುವ ಯೋಗ

Thu, 07 Sep 2023-9:17 am,

ಇಂದು ಶ್ರೀ ಕೃಷ್ಣಜನ್ಮಾಷ್ಟಮಿಯ ವಿಶೇಷ ದಿನ ಕೆಲವು ರಾಶಿಯವರಿಗೆ ಅದೃಷ್ಟದ ದಿನ ಎಂತಲೇ ಹೇಳಲಾಗುತ್ತಿದೆ. ಈ ದಿನ ಭಗವಾನ್ ಶ್ರೀ ಕೃಷ್ಣನು ಕೆಲವು ರಾಶಿಯವರಿಗೆ ವಿಶೇಷ ಆಶೀರ್ವಾದವನ್ನು ನೀಡಲಿದ್ದು, ಅವರು ಜೀವನದಲ್ಲಿ ಸುಖ-ಸಂತೋಷದ ಜೊತೆಗೆ ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಅವರಿಗೆ ಸಿರಿವಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು. 

ಕರ್ಕಾಟಕ ರಾಶಿಯ ಜನರಿಗೆ ಈ ಬಾರಿಯ ಕೃಷ್ಣ ಜನ್ಮಾಷ್ಟಮಿ ತುಂಬಾ ಮಂಗಳಕರ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ನೀವು ಮಾಡುವ ಪ್ರತಿ ಕೆಲಸದಲ್ಲೂ ಯಶಸ್ಸು ಪ್ರಾಪ್ತಿಯಾಗಲಿದೆ. ವೃತ್ತಿ ಬದುಕಿನಲ್ಲಿ ಉನ್ನತ ಹುದ್ದೆಗೇರುವ ಸಂಭವವಿದೆ. 

ಶ್ರೀ ಕೃಷ್ಣನ ಆಶೀರ್ವಾದದಿಂದ ಕನ್ಯಾ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ವಿಜಯ ದೊರೆಯಲಿದ್ದು, ಕೌಟುಂಬಿಕ ಜೀವನದಲ್ಲಿ ಸುಖ-ಸಂತೋಷವನ್ನು ಕಾಣಬಹುದು.. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣ ಯೋಗವೂ ಇದೆ. 

ಶಿಕ್ಷಣ, ಬರವಣಿಗೆ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದ ವೃಶ್ಚಿಕ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಪ್ರಗತಿಯ ಹೊಸ ಹಾದಿಗಳು ತೆರೆಯಲಿವೆ. ಇದರಿಂದಾಗಿ ಸಮಾಜದಲ್ಲಿ ಕೀರ್ತಿ, ಪ್ರತಿಷ್ಠೆ ಹೆಚ್ಚಳಿದೆ. ನೀವು ಹಿಂದೆ ಮಾಡಿದ ಹೂಡಿಕೆಗಳಿಂದ ಬಂಪರ್ ಲಾಭ ದೊರೆಯಲಿದೆ. ಆದಾಗ್ಯೂ, ಅನಾವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಖಜಾನೆ ತುಂಬಲಿದೆ. ಒಟ್ಟಾರೆಯಾಗಿ ನಿಮ್ಮ ಪ್ರತಿ ಕೆಲಸದಲ್ಲೂ ಶ್ರೀ ಕೃಷ್ಣನ ವಿಶೇಷ ಆಶೀರ್ವಾದವನ್ನು ಪಡೆಯಬಹುದು. 

ಮೀನ ರಾಶಿಯವರಿಗೆ ಕೃಷ್ಣನ ಆಶೀರ್ವಾದದಿಂದ  ಆತ್ಮವಿಶ್ವಾಸ ಹೆಚ್ಚಾಗಲಿದ್ದು, ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಅಷ್ಟೇ ಅಲ್ಲ, ಹೊಸ ವಾಹನ ಖರೀದಿಸುವ ಯೋಗವೂ ಇದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link