Sankranti 2023: ಜಲದಿಂದ ಮಾಡಲಾಗುವ ಈ ಉಪಾಯಗಳಿಂದ ಭಾಗ್ಯೋದಯ, ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು

Makar Sankranti 2023: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ಮಕರ ಸಂಕ್ರಾಂತಿ ವಿಶೇಷ ಮಹತ್ವವಿದೆ. ಈ ದಿನ ಸೂರ್ಯದೇವ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಸೂರ್ಯನ ಈ ರಾಶಿ ಪರಿವರ್ತನೆಯನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. 

Makar Sankranti 2023: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ಮಕರ ಸಂಕ್ರಾಂತಿ ವಿಶೇಷ ಮಹತ್ವವಿದೆ. ಈ ದಿನ ಸೂರ್ಯದೇವ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಸೂರ್ಯನ ಈ ರಾಶಿ ಪರಿವರ್ತನೆಯನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿಯ ದಿನ ಸ್ನಾನ ಹಾಗೂ ದಾನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮಾಡಿ, ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುವವರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಹಾಗೂ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ. ಈ ದಿನ ಜಲದಿಂದ ಮಾಡಲಾಗುವ ಕೆಲ ಉಪಾಯಗಳನ್ನು ತಿಳಿದುಕೊಳ್ಳೋಣ ಬನ್ನಿ,

 

ಇದನ್ನೂ ಓದಿ-Shani Dev Upay: ಶನಿ ಮುನಿಸಿಕೊಂಡರೆ ಜೀವನವೇ ನರಕಾಗುತ್ತದೆ, ಈ ಉಪಾಯ ಅನುಸರಿಸಿ

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

1. ಮಕರ ಸಂಕ್ರಾಂತಿಯ ದಿನದಂದು, ಬೆಳಗ್ಗೆ ಸ್ನಾನ ಮಾಡಿದ ನಂತರ, ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ. ಈ ದಿನ ಊಟ ಮಾಡುವಾಗ ಬಲಭಾಗದಲ್ಲಿ ಒಂದು ಲೋಟ ನೀರನ್ನು ಇರಿಸಿ. ಈ ರೀತಿ ಮಾಡುವುದರಿಂದ ಅದೃಷ್ಟ ಒಲಿದು ಬರುತ್ತದೆ ಮತ್ತು ಜೀವನದಲ್ಲಿ ಯಶಸ್ಸಿನ ದಾರಿ ಸುಗಮವಾಗುತ್ತದೆ.  

2 /5

2. ಮಕರ ಸಂಕ್ರಾಂತಿಯ ದಿನದಂದು ಶಿವಲಿಂಗಕ್ಕೆ ನೀರನ್ನು ಅರ್ಪಿಸುವ ಆಚರಣೆಯೂ ಇದೆ. ಈ ದಿನದಂದು ಶಿವಲಿಂಗಕ್ಕೆ ನೀರನ್ನು ಅರ್ಪಿಸುವುದರಿಂದ ಜೀವನದಲ್ಲಿನ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಈ ದಿನ ಮರಗಳು ಮತ್ತು ಗಿಡಗಳಿಗೆ ನೀರನ್ನು ನೀಡಲು ಪ್ರಯತ್ನಿಸಿ, ಇದನ್ನು ಮಾಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹರಿದುಬರುತ್ತದೆ.  

3 /5

3. ಹಿಂದೂ ಧರ್ಮದಲ್ಲಿ, ತುಳಸಿ ಸಸ್ಯವನ್ನು ಮಂಗಳಕರ ಮತ್ತು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ಸಂದರ್ಭದಲ್ಲಿ ಮಕರ ಸಂಕ್ರಾಂತಿಯಂದು ತುಳಸಿಗೆ ನೀರನ್ನು ಅರ್ಪಿಸಿ ಪೂಜೆ ಸಲ್ಲಿಸಿ. ಇದು ಜೀವನದಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ. ಮತ್ತೊಂದೆಡೆ, ಈ ದಿನದಂದು ಅಗತ್ಯವಿರುವವರಿಗೆ ನೀರನ್ನು ದಾನ ಮಾಡುವುದು ಬಹಳ ಪುಣ್ಯವೆಂದು ಪರಿಗಣಿಸಲಾಗಿದೆ.  

4 /5

4. ಮಕರ ಸಂಕ್ರಾಂತಿಯ ದಿನದಂದು ಬೆಳಗ್ಗೆ ಸ್ನಾನದ ನಂತರ ಅಶ್ವತ್ಥ ಮರಕ್ಕೆ ನೀರನ್ನು ಅರ್ಪಿಸಿ. ಇದೇ ವೇಳೆ, ಈ ದಿನ ನೀರನ್ನು ವ್ಯರ್ಥ ಮಾಡಬೇಡಿ. ಹೀಗೆ ಮಾಡುವುದರಿಂದ ಜೀವನದಲ್ಲಿ ನಕಾರಾತ್ಮಕ ಶಕ್ತಿ ದೂರಾಗುತ್ತದೆ ಮತ್ತು ಮನೆಯಲ್ಲಿ ಸಂತೋಷದ ವಾತಾವರಣ ಉಳಿಯುತ್ತದೆ.  

5 /5

5. ಮಕರ ಸಂಕ್ರಾಂತಿಯ ದಿನದಂದು ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ತುಂಬಾ ಮುಖ್ಯ. ಇದನ್ನು ಮಾಡಲು ಸಾಧ್ಯವಾಗದಿದ್ದರೆ, ನೀವು ಮನೆಯಲ್ಲಿ ಸ್ನಾನದ ನೀರಿನಲ್ಲಿ ಸ್ವಲ್ಪ ಗಂಗಾಜಲವನ್ನು ಬೆರೆಸಿ ಸ್ನಾನ ಮಾಡಬಹುದು. ಇದೇ ವೇಳೆ ಬೆಲ್ಲ ಮತ್ತು ಜೇನುತುಪ್ಪವನ್ನು ನೀರಿನಲ್ಲಿ ಬೆರೆಸಿ ಮಗುವಿಗೆ ತಿನ್ನಿಸಿದರೆ ದೃಷ್ಟಿ ದೋಷ ಬರುವುದಿಲ್ಲ ಎಂಬ ನಂಬಿಕೆಯಿದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)