ಆಗಸ್ಟ್ 18 ರಿಂದ ಹಠಾತ್ ಬದಲಾಗಲಿದೆ ಈ 3 ರಾಶಿಗಳ ಅದೃಷ್ಟ, ಗ್ರಹಗಳ ಸೇನಾಪತಿಯ ಕೃಪೆಯಿಂದ ಅಪಾರ ಧನಲಾಭ!

Mangal Gochar 2023 In Kanya: ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳ ಶೀಘ್ರದಲ್ಲಿಯೇ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ (Spiritual News In Kannada). ಮಂಗಳನ ಈ ಕನ್ಯಾ ಗೋಚರದಿಂದ ಒಟ್ಟು ಮೂರು ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ವೃತ್ತಿಜೀವನದಲ್ಲಿ ಭಾರಿ ಉನ್ನತಿ ಭಾಗ್ಯ ಪ್ರಾಪ್ತಿಯಾಗಲಿದೆ.
 

Mangal Gochar In Kanya 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಶುಭ ಮತ್ತು ಅಶುಭ ಯೋಗಗಳನ್ನು ರೂಪಿಸುತ್ತವೆ. ಇನ್ನೊಂದೆಡೆ ಜೋತಿಷ್ಯ ಶಾಸ್ತ್ರದಲ್ಲಿ ಮಂಗಳನನ್ನು ಭೂಮಿ ಪುತ್ರ ಹಾಗೂ ಗ್ರಹಗಳ ಸೇನಾಪತಿ ಎಂದು ಕರೆಯಲಾಗಿದೆ. ಮಂಗಳ ಮೇಷ ಹಾಗೂ ವೃಶ್ಚಿಕ ರಾಶಿಗಳಿಗೆ ಅಧಿಪತಿ (Spiritual News In Kannada). ಹೀಗಾಗಿ ಮಂಗಳನ ರಾಶಿ ಪರಿವರ್ತನೆಗೆ ವಿಶೇಷ ಮಹತ್ವವನ್ನು ಕಲ್ಪಿಸಲಾಗಿದೆ. ಬರುವ ಆಗಸ್ಟ್ 18 ರಂದು ಮಂಗಳನ ಕನ್ಯಾ ಗೋಚರ ನೆರವೇರಲಿದ್ದು, ಇದು ಎಲ್ಲಾ ದ್ವಾದಶ ರಾಶಿಗಳ ಜನರ ಜೀವನದ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ 3 ರಾಶಿಗಳ ಜನರಿಗೆ ಇದರಿಂದ ಆಕಸ್ಮಿಕ ಧನಲಾಭ ಹಾಗೂ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. 

 

ಇದನ್ನೂ ಓದಿ-ಒಂದು ವರ್ಷದ ಬಳಿಕ ತನ್ನ ಸ್ವಂತ ರಾಶಿಯಲ್ಲಿ ಸೂರ್ಯನ ಪ್ರವೇಶ, ಈ ರಾಶಿಗಳಿಗೆ ಅಪಾರ ಧನಲಾಭ-ಉನ್ನತಿಯ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳ ಶೀಘ್ರದಲ್ಲಿಯೇ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಮಂಗಳನ ಈ ಕನ್ಯಾ ಗೋಚರದಿಂದ ಒಟ್ಟು ಮೂರು ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ವೃತ್ತಿಜೀವನದಲ್ಲಿ ಭಾರಿ ಉನ್ನತಿ ಭಾಗ್ಯ ಪ್ರಾಪ್ತಿಯಾಗಲಿದೆ.  

2 /5

ಮೇಷ ರಾಶಿ: ಮಂಗಳ ಮೇಷ ರಾಶಿಗೆ ರಾಷ್ಯಾಧಿಪನಾಗಿದ್ದಾನೆ ಹೀಗಾಗಿ ಮಂಗಳನ ಈ ಗೋಚರ ನಿಮ್ಮ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಮಂಗಳನ ಈ ಪ್ರವೇಶ ನಿಮ್ಮ ಗೋಚರ ಜಾತಕದ ಶಷ್ಟಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಧೈರ್ಯ ಮತ್ತು ಸಾಹಸದಲ್ಲಿ ಹೆಚ್ಚಳವನ್ನು ನೀವು ಗಮನಿಸುವಿರಿ. ಶತ್ರು ಹಾಗೂ ಕಾಯಿಲೆಗಳ ಮೇಲೆ ಜಯ ಸಾಧಿಸುವಿರಿ. ಶಿಕ್ಷಣ ಕ್ಷೇತ್ರದಲ್ಲಿ ನಿಮಗೆ ಲಾಭ ಸಿಗುವ ಎಲ್ಲಾ ಸಾಧ್ಯತೆಗಳಿವೆ. ವಿದೇಶ ಯಾತ್ರೆಯ ಯೋಗ ನಿರ್ಮಾಣಗೊಳ್ಳುತ್ತಿದೆ. ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವಾಗಿ, ಕೌಟುಂಬಿಕ ಜೀವನದಲ್ಲಿ ಉನ್ನತಿಯಾಗಲಿದೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಜಯಮಾಲೆ ನಿಮ್ಮ ಕೊರಳಿಗೆ ಇರಲಿದೆ  

3 /5

ಮೀನ ರಾಶಿ: ಭೂಮಿ ಪುತ್ರ ಮಂಗಳನ ಈ ರಾಶಿ ಪರಿವರ್ತನೆ ಮೀನ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಅದ್ಭುತ ಸಾಬೀತಾಗಲಿದೆ. ಏಕೆಂದರೆ  ಮಂಗಳ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದಾನೆ. ನಿಮ್ಮ ಜಾತಕದ ಧನ ಹಾಗೂ ಅದೃಷ್ಟದ ಭಾವಕ್ಕೆ ಆತ ಅಧಿಪತಿ ಕೂಡ ಹೌದು. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ಇದಲ್ಲದೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿಯೂ ಕೂಡ ನಿಮಗೆ ಹೊಸ ಮೆರಗು ಕಾಣಿಸಲಿದೆ. ಈ ಸಮಯದಲ್ಲಿ ನಿಮಗೆ ಹಲವು ಮೂಲಗಳಿಂದ ಧನ ಪ್ರಾಪ್ತಿಯಾಗುವ ಎಲ್ಲಾ ಸಾಧ್ಯತೆಗಳಿವೆ. ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. ಪಾರ್ಟ್ನರ್ ಶಿಪ್ ವ್ಯವಹಾರಗಳಲ್ಲಿಯೂ ಕೂಡ ನಿಮಗೆ ಲಾಭ ಸಿಗಲಿದೆ.   

4 /5

ಕರ್ಕ ರಾಶಿ: ಗ್ರಹಗಳ ಸೇನಾಪತಿಯ ಈ ಗೋಚರ ಕರ್ಕ ರಾಶಿಯ ಜಾತಕದವರಿಗೆ ಅತ್ಯಂತ ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಏಕೆಂದರೆ, ಈ ಗೋಚರ ನಿಮ್ಮ ಜಾತಕದ ತೃತೀಯ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನೀವು ಗುಪ್ತ ಶತ್ರುವಿನ ಮೇಲೆ ಜಯಸಾಧಿಸುವಲ್ಲಿ ಯಶಸ್ಸು ಸಾಧಿಸುವಿರಿ. ಇನ್ನೊಂದೆಡೆ ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ನೀವು ಅಪಾರ ವೃದ್ಧಿಯನ್ನು ಸಾಧಿಸುವಿರಿ. ಆದಾಯ ಹೆಚ್ಚಾಗಲಿದೆ ಮತ್ತು ಕೌಟುಂಬಿಕ ಜೀವನದಲ್ಲಿಯೂ ಕೂಡ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕೆಲವರಿಗೆ ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ಸಿಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)