ಕೆಲವೇ ಗಂಟೆಗಳಲ್ಲಿ ಸ್ವರಾಶಿಗೆ ಮಂಗಳನ ಪ್ರವೇಶ, ಈ ಜನರ ಜೀವನದಲ್ಲಿ ಭಾರಿ ಧನವೃಷ್ಟಿ!

Mangal Gochar In Vruschik Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ವೃಶ್ಚಿಕ ರಾಶಿಯಲ್ಲಿ ಮಂಗಳ ಗೋಚರಿಸಲಿದ್ದಾನೆ. ಇದರಿಂದ ಒಟ್ಟು 5 ರಾಶಿಗಳ ಜನರ ವೃತ್ತಿ ಜೀವನದಲ್ಲಿ ಭಾರಿ ಧನವೃಷ್ಟಿ ಹಾಗೂ ಉನ್ನತಿಯಾಗಲಿದೆ. (Spiritual News In Kannada)

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ತಮ್ಮ ಸ್ವರಾಶಿಗೆ ಪ್ರವೇಶಿಸುತ್ತವೆ ಮತ್ತು ಗ್ರಹಗಳ ಈ ಸ್ವರಾಶಿ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನು ಬೀರುತ್ತದೆ. ಪ್ರಸ್ತುತ ಸುಮಾರು 46 ದಿನಗಳ ಬಳಿಕ ಗ್ರಹಗಳ ಸೇನಾಪತಿ ಮಂಗಳ ತನ್ನ ಸ್ವಂತ ಮನೆಯಾಗಿರುವ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಹೀಗಿರುವಾಗ ಮಂಗಳನ ಈ ಸ್ವರಾಶಿ ಗೋಚರ ಕೆಲ ರಾಶಿಗಳ ಜನರ ಜೀವನದಲ್ಲಿ ಭಾರಿ ಅದೃಷ್ಟವನ್ನು ತರಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಹತ್ತು ವರ್ಷಗಳ ಬಳಿಕ ಕೇತು-ಶುಕ್ರರ ಶುಭ ಸಂಯೋಜನೆ, ಶುಕ್ರದೆಸೆಯಿಂದ ಈ ಜನರಿಗೆ ಸಿಗಲಿದೆ ಅಪಾರ ಧನ-ಸಂಪತ್ತು!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಮಕರ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ದ್ವಾದಶ ಭಾವದಲ್ಲಿ ಸಂಚರಿಸಲಿದ್ದಾನೆ, ಇದರಿಂದ ನಿಮ್ಮ ಅನಾವಶ್ಯಕ ವೆಚ್ಚದ ಮೇಲೆ ಬ್ರೇಕ್ ಬೀಳಲಿದೆ ಮತ್ತು ಸಾಕಷ್ಟು ಹಣವನ್ನು ಉಳಿತಾಯ ಮಾಡುವಲ್ಲಿ ನೀವು ಯಶಸ್ಸನ್ನು ಕಾಣುವಿರಿ. ರಿಯಲ್ ಎಸ್ಟೇಟ್ ನಲ್ಲಿ ಹಣ ಹೂಡಿಕೆ ಮಾಡಿದವರಿಗೆ ಈ ಅವಧಿಯಲ್ಲಿ ಸಾಕಷ್ಟು ಲಾಭ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಜನರಿಗೆ ಯಶಸ್ಸು ಸಿಗಲಿದೆ. ಮಂಗಳ ನಿಮ್ಮ ಗೋಚರ ಜಾತಕದ ಚತುರ್ಥ ಅಧಿಪತಿಯಾಗಿರುವ ಕಾರಣ ನಿಮ್ಮ ಸಾಹಸ-ಪರಾಕ್ರಮದಲ್ಲಿ ವೃದ್ಧಿಯನ್ನು ನೀವು ಕಾಣುವಿರಿ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕುಟುಂಬ ಸದಸ್ಯರ ಅಪಾರ ಬೆಂಬಲ ಸಿಗಲಿದೆ. 

2 /6

ವೃಶ್ಚಿಕ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಪರೀಕ್ಷೆ ಬರೆಯುತ್ತಿರುವ ಮತ್ತು ಕ್ರೀಡಾ ಕ್ಷೇತ್ರಕ್ಕೆ ಸಂಬಂಧಪಟ್ಟ ಈ ರಾಶಿಗಳ ಜನರಿಗೆ ಈ ಅವಧಿ ತುಂಬಾ ಶುಭವಾಗಿರಲಿದೆ. ಆಸ್ತಿ-ಪಾಸ್ತಿ ಖರೀದಿ-ಮಾರಾಟ ಪ್ರಕ್ರಿಯೆಯಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ಮಂಗಳ ನಿಮ್ಮ ಗೋಚರ ಜಾತಕದ ಶಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವ ನಿರೀಕ್ಷೆ ಇದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ.

3 /6

ಮೀನ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಭಾಗ್ಯ ಸ್ಥಾನದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ದೇಶ ವಿದೇಶಗಳಿಗೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ ಮತ್ತು ಅವು ನಿಮ್ಮ ಪಾಲಿಗೆ ಶುಭ ಫಲಗಳನ್ನು ನೀಡಲಿವೆ. ವೃತ್ತಿ-ವ್ಯಾಪಾರದಲ್ಲಿ ಹೊಸ ಅವಕಾಶಗಳು ಸಿಗಲಿವೆ. ಮಂಗಳ ನಿಮ್ಮ ಗೋಚರ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಸಂಪಾದಿಸುವಲ್ಲಿ ಮತ್ತು ಸಂಗ್ರಹಿಸುವಲ್ಲಿ ಯಶಸ್ಸನ್ನು ಸಾಧಿಸುವಿರಿ. ಆದರೆ, ಇಮ್ಮ ಮೇಲೆ ಶನಿಯ ಸಾಡೇಸಾತಿ ನಡೆಯುತ್ತಿರುವ ಕಾರಣ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

4 /6

ಸಿಂಹ ರಾಶಿ: ಮಂಗಳನ ಈ ಗೋಚರ ನಿಮ್ಮ ಜಾತಕದ ಚತುರ್ಥ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನೀವು ಆಸ್ತಿಪಾಸ್ತಿ ಹಾಗೂ ವಾಹನ ಖರೀದಿಗೆ ಮನಸ್ಸು ಮಾಡುವ ಸಾಧ್ಯತೆ ಇದೆ. ಇದಲ್ಲದೆ ನಿಮಗೆ ಪಿತ್ರಾರ್ಜಿತ ಸಂಪತ್ತು ಸಿಗುವ ಸಂಕೇತಗಳು ಗೋಚರಿಸುತ್ತಿವೆ. ಆರ್ಥಿಕ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಭಾ ಲಾಭಕಾರಿಯಾಗಿದೆ. ಈ ಸಮಯದಲ್ಲಿ ನೀವು ಮಾಡುವ ಆರ್ಥಿಕ ಹೂಡಿಕೆಯಿಂದ ನಿಮಗೆ ಸಾಕಷ್ಟು ಲಾಭ ಹರಿದು ಬರಲಿದೆ. ಮಂಗಳನ ದೃಷ್ಟಿ ನಿಮ್ಮ ಗೋಚರ ಜಾತಕದ ದಶಮ ಭಾವದ ಮೇಲೆ ಇರುವ ಕಾರಣ ಕೆಲಸ-ವ್ಯಾಪಾರದಲ್ಲಿ ನಿಮ್ಮ ಉನ್ನತಿಯಾಗಲಿದೆ. ವೃತ್ತಿ ಜೀವನದಲ್ಲಿ ನಿಮಗೆ ಅಪಾರ ಧನಲಾಭ ಸಿಗಲಿದ್ದು, ವ್ಯಾಪಾರದಲ್ಲಿಯೂ ಕೂಡ ನಿಮಗೆ ಸಾಕಷ್ಟು ಲಾಭ ಸಿಗಲಿದೆ. 

5 /6

ತುಲಾ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಸಾಹಸ ಪರಾಕ್ರಮ ಹೆಚ್ಚಾಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಸಮೃದ್ಧಿ ಇರಲಿದೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧ ಸುಮಧುರವಾಗಿರಲಿದೆ, ಮಂಗಳ ನಿಮ್ಮ ಜಾತಕದ ಏಳನೇ ಭಾವಕ್ಕೆ ಅಧಿಪತಿಯಾಗಿದ್ದು, ಪಾಟ್ನರ್ಶಿಪ್ ವ್ಯವಹಾರಗಳಿಂದ ನಿಮಗೆ ಲಾಭ ಸಿಗಲಿದೆ. 

6 /6

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)