ಹೊಸ ವರ್ಷಾರಂಭದಲ್ಲಿಯೇ ತನ್ನ ಉಚ್ಚ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಗಳ ಜನರಿಗೆ ಭಾರಿ ಧನಸಂಪತ್ತು ಪ್ರಾಪ್ತಿ!

Sun, 26 Nov 2023-2:17 pm,

Mars Entry In Capricorn 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಂಭದಲ್ಲಿಯೇ ಮಂಗಳ ತನ್ನ ಉಚ್ಚ ರಾಶಿಯಾಗಿರುವ ಮಕರ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ಕೆಲ ಜನರಿಗೆ ಅಪಾರ ಧನ ಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಿದೆ. (Spiritual News In Kannada) 

ಮೇಷ ರಾಶಿ: ನಿಮ್ಮ ಗೋಚರ ಜಾತಕದ ವೃತ್ತಿ ಜೀವನ ಮತ್ತು ವ್ಯಾಪಾರ ತಾಣದಲ್ಲಿ ಮಂಗಳನ ಈ ಗೋಚರ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕಾರ್ಯಶೈಲಿಯಲ್ಲಿ ಹೊಸ ಹುರುಪು ನೋಡಲು ನಿಮಗೆ ಸಿಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಕೌಶಲ್ಯ ಹಾಗೂ ಪರಾಕ್ರಮದ ಸಹಾಯದಿಂದ ನಿಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸುವಿರಿ. ರಿಯಲ್ ಎಸ್ಟೇಟ್ ಹಾಗೂ ಭೂಮಿಗೆ ಸಂಬಂಧಿಸಿದ ಕೆಲಸಗಳಲ್ಲಿ ನೀವು ನಿರತರಾಗಿದ್ದಾರೆ ನಿಮಗೆ ಉತ್ತಮ ಲಾಭ ಉಟ್ನಾಗಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಪದೋನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. 

ವೃಷಭ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇದರ ಜೊತೆಗೆ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನೀವು ಅಂದುಕೊಂಡ ಯೋಜನೆಗಳು ಪೂರ್ಣಗೊಳ್ಳಲಿವೆ. ಪ್ರೊಫೆಷನಲ್ ಲೈಫ್ ನಲ್ಲಿ ಉನ್ನತಿಯ ಯೋಗವಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ದೇಶ-ವಿದೇಶಗಳ ಯಾತ್ರೆ ಸಂಭವಿಸಲಿದೆ. ಮಂಗಳ ನಿಮ್ಮ ಗೋಚರ ಜಾತಕದ 12ನೇ ಹಾಗೂ ಆಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಇದರಿಂದ ಈ ಅವಧಿಯಲ್ಲಿ ನೀವು ಅಪಾರ ಧನ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ಸಾಲಬಾಧೆಯಿಂದ ನಿಮಗೆ ಮುಕ್ತಿ ಸಿಗಲಿದೆ. ರಿಸರ್ಚ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ಲಾಭ ಸಿಗುವ ಸಾಧ್ಯತೆ ಇದೆ. 

ಮೀನ ರಾಶಿ: ಮಂಗಳ ನಿಮ್ಮ ರಾಶಿಯ ರಾಶ್ಯಾಧಿಪನಾಗಿರುವ ಗುರುವಿನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾನೆ. ಇದರ ಜೊತೆಗೆ ಮಂಗಳ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ವಿಪರೀತ ಹೆಚ್ಚಳ ಉಂಟಾಗಲಿದೆ. ಇದಲ್ಲದೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಮಂಗಳ ನಿಮ್ಮ ಜಾತಕದ ಲಗ್ನ ಹಾಗೂ ದಶಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಮಂಗಳ ಮಕರ ರಾಶಿಗೆ ಪ್ರವೇಶಿಸುವುದರಿಂದ ನಿಮ್ಮ ಕೆಲಸ-ವ್ಯಾಪಾರ ಹೊಸ ಮೆರಗು ಪಡೆದುಕೊಳ್ಳಲಿದೆ. ಈ ಅವಧಿಯಲ್ಲಿ ಮೀನ ರಾಶಿಯ ಜನರಿಗೆ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆದುಕೊಳ್ಳಲಿದ್ದಾರೆ. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಈ ಅವಧಿಯಲ್ಲಿ ನೀವು ಸಾಕಷ್ಟು ಪರಿಶ್ರಮ ಪಡುವಿರಿ ಮತ್ತು ನಿಮಗೆ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿಯಾಗಲಿದೆ. ಪ್ರಾಪರ್ಟೀ ಖರೀದಿ-ಮಾರಾಟದಿಂದ ನಿಮಗೆ ಉತ್ತಮ ಲಾಭ ಸಿಗಲಿದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link