ಸ್ವರಾಶಿಯಲ್ಲಿ ಅಸ್ತನಾದ ಬುಧ, ವಿಪರೀತ ರಾಜಯೋಗ ನಿರ್ಮಾಣ, ಈ ರಾಶಿಗಳ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭ!

Wed, 04 Oct 2023-5:01 pm,

Budha Asta In Kanya 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಅಕ್ಟೋಬರ್ 1, 2023 ರಂದು ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ತನ್ನ ಸ್ವರಾಶಿಗೆ ಪ್ರವೇಶಿಸಿದ್ದು, ಇಂದು ಅಸ್ತಮಿಸಿದ್ದಾನೆ. ಇದರಿಂದ ಒಟ್ಟು 3 ರಾಶಿಗಳ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭಗೊಳ್ಳಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,   

ಮೇಷ ರಾಶಿ: ಬುಧ ನಿಮ್ಮ ಗೋಚರ ಜಾತಕದ ಶಷ್ಟಮ ಭಾವದಲ್ಲಿ ಅಸ್ತನಾಗಿರುವ ಕಾರಣ ವಿಪರೀತ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಷೇರುಪೇಟೆ, ಲಾಟರಿ ವ್ಯವಹಾರಗಳಲ್ಲಿ ಅಪಾರ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಒಂದು ವೇಳೆ ನೀವು ವ್ಯಾಪಾರ ಮಾಡುತ್ತಿದ್ದರೆ, ಉತ್ತಮ ಆರ್ಡರ್ ಗಳು ನಿಮ್ಮದಾಗಲಿವೆ. ಅವುಗಳಿಂದ ನೀವು ಸಾಕಷ್ಟು ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಆಸ್ತಿಪಾಸ್ತಿ ಖರೀದಿ ಮಾರಾಟದಿಂದ ಕೂಡ ನಿಮಗೆ ಲಾಭ ಸಿಗುವ ಸಾಧ್ಯತೆ ಇದೆ. ನಿಮ್ಮ ಜಾತಕದ ತೃತೀಯ ಭಾವಕ್ಕೆ ಬುಧ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮದಲ್ಲಿ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ.   

ಕರ್ಕ ರಾಶಿ: ವಿಪರೀತ ರಾಜಯೋಗ ನಿಮ್ಮ ಪಾಲಿಗೆ ಅತ್ಯದ್ಭುತ ಸಾಬೀತಾಗಲಿದೆ. ಏಕೆಂದರೆ, ಬುಧ ನಿಮ್ಮ ಗೋಚರ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ನಿಮ್ಮ ಮೇಲೆ ಬುಧನ ದೆಸೆ ನಡೆಯುತ್ತಿರುವ ಕಾರಣ, ಆತ ಅಪಾರ ಧನವನ್ನು ಕರುಣಿಸಲಿದ್ದಾನೆ. ವಿದೇಶಗಳಿಂದ ನಿಮಗೆ ಲಾಭ ಬರುವ ಸಾಧ್ಯತೆ ಇದೆ. ದೀರ್ಘಕಾಲದಿಂದ ಸಿಲುಕಿಬಿದ್ದ ನಿಮ್ಮ ಹಣ ನಿಮ್ಮತ್ತ ಮರಳಲಿದೆ. ವ್ಯಾಪಾರಿಗಳಿಗೂ ಕೂಡ ಉತ್ತಮ ಧನಲಾಭ ಸಿಗುವ ಸಾಧ್ಯತೆ ಇದೆ. ನಿಮಗೆ ನಿಮ್ಮ ಸಹೋದರ-ಸಹೋದರಿಯರ ಬೆಂಬಲ ಕೂಡ ಸಿಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಹಣ ಹೂಡಿಕೆ ಮಾಡುವುದು ನಿಮ್ಮ ಪಾಲಿಗೆ ಲಾಭದಾಯಕ ಡೀಲ್ ಸಾಬೀತಾಗಬಹುದು. ಏಕೆಂದರೆ ಧನಲಾಭದ ಪ್ರಬಲ ಯೋಗಗಳಿವೆ.   

ವೃಶ್ಚಿಕ ರಾಶಿ: ಬುಧ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಅಸ್ತನಾಗುತ್ತಿರುವ ಕಾರಣ ವಿಪರೀತ ರಾಜಯೋಗ ನಿಮಗೂ ಕೂಡ ಲಾಭದಾಯಕ ಸಾಬೀತಾಗುವ ಸಾಧ್ಯತೆ ಇದೆ. ಬುಧ ನಿಮ್ಮ ಗೋಚರ ಜಾತಕದ ಎಂಟನೇ ಭಾವಕ್ಕೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆಕಸ್ಮಿಕ ಧನಲಾಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಇನ್ನೊಂದೆಡೆ ಮುಳುಗಿ ಹೋದ ನಿಮ್ಮ ಹಣ ಕೂಡ ನಿಮ್ಮ ಕೈಸೇರಲಿದೆ. ಈ ಅವಧಿಯಲ್ಲಿ ಆದಾಯದ ಹೊಸ ಮೂಲಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಷೇರುಪೇಟೆ, ಲಾಟರಿ ವ್ಯವಹಾರಗಳಲ್ಲಿ ನಿಮಗೆ ಲಾಭ ಸಿಗಲಿದೆ. ವೃತ್ತಿಜೀವನದಲ್ಲಿ ಉತ್ತಮ ಫಲಿತಾಂಶಗಳು ನಿಮಗೆ ಪ್ರಾಪ್ತಿಯಾಗಲಿವೆ. ಆದರೆ, ಆರೋಗ್ಯದ ಕಾಳಜಿವಹಿಸಿ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link