ಅಜೀರ್ಣ ಸಮಸ್ಯೆಯಿಂದ ಮುಕ್ತಿ ಪಡೆಯಲು ಇವುಗಳನ್ನು ತಪ್ಪದೇ ಸೇವಿಸಿ

Wed, 27 Apr 2022-1:16 pm,

ನೀವು ಜೀರ್ಣಕ್ರಿಯೆಯನ್ನು ಸುಧಾರಿಸಲು ಬಯಸಿದರೆ, ಖಂಡಿತವಾಗಿಯೂ ಬಾಳೆಹಣ್ಣು ತಿನ್ನಿರಿ. ಇದರಲ್ಲಿರುವ ಫೈಬರ್ ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ. 

ಸೌತೆಕಾಯಿಯಲ್ಲಿ ಎರೆಪ್ಸಿನ್ ಎಂಬ ಕಿಣ್ವವಿದೆ, ಇದು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದರಿಂದಾಗಿ ಹೊಟ್ಟೆಯ ಆಮ್ಲೀಯತೆ, ಜಠರದುರಿತ ಮತ್ತು ಜಠರ ಹುಣ್ಣುಗಳಿಂದ ಉಪಶಮನವನ್ನು ನೀಡುತ್ತದೆ.

ಸೇಬು  ಜೀರ್ಣಾಂಗ ವ್ಯವಸ್ಥೆಗೆ ಸಹ ಅತ್ಯಂತ ಪ್ರಯೋಜನಕಾರಿಯಾಗಿದೆ. ಸೇಬಿನ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ ಸಮೃದ್ಧವಾಗಿದೆ ಮತ್ತು ಅನೇಕ ಖನಿಜಗಳು ಮತ್ತು ಪೊಟ್ಯಾಸಿಯಮ್ ಅನ್ನು ಸಹ ಹೊಂದಿದೆ. ಇದರಲ್ಲಿರುವ ನಾರಿನಂಶದಿಂದಾಗಿ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುತ್ತದೆ.

ಪರಂಗಿ ಹಣ್ಣಿನೊಂದಿಗೆ ದಿನವನ್ನು ಆರಂಭಿಸುವುದರಿಂದ ಕರುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಪಪ್ಪಾಯಿ ಪರಿಪೂರ್ಣ ಆಹಾರವಾಗಿದೆ. ಬೆಳಗಿನ ಉಪಾಹಾರದಲ್ಲಿ ಈ ಹಣ್ಣನ್ನು ಸೇವಿಸುವುದರಿಂದ ದಿನವಿಡೀ ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ, ಏಕೆಂದರೆ ಇದು ಪಪೈನ್ ಎಂಬ ಜೀರ್ಣಕಾರಿ ಕಿಣ್ವವನ್ನು ಹೊಂದಿರುತ್ತದೆ.

ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪ ಮತ್ತು ನಿಂಬೆ ಸೇವನೆಯು ಜೀರ್ಣಕ್ರಿಯೆಯನ್ನು ಮತ್ತು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ನಿಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link