Photo Gallery: ಹಾಡು ನಿಲ್ಲಿಸಿದ ಗಾನ ಗಾರುಡಿಗ ಶಿವಮೊಗ್ಗ ಸುಬ್ಬಣ್ಣ

  • Aug 12, 2022, 12:49 PM IST

ಕಾಡು ಕುದುರೆ ಓಡಿ ಬಂದಿತ್ತಾ..' ಹಾಡಿನ ಮೂಲಕ ನಾಡಿನ ಮನೆಮಾತಾದ, ಹೆಸರಾಂತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಗುರುವಾರ ರಾತ್ರಿ 10.30 ರ ಸುಮಾರಿಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ, ಅವರಿಗೆ 83 ವರ್ಷ ವಯಸ್ಸಾಗಿತ್ತು.  

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

1 /5

ಸಿನಿಮಾ ರಂಗಕ್ಕೆ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ.1979 ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ನಡೆದರು.

2 /5

ಇದರಿಂದಾಗಿ ಶಾಲಾ ದಿನಗಳಲ್ಲಿ ಹಲವಾರು ಪ್ರಶಸ್ತಿ ಪಡೆದು, ಹಾಡಿನ ಸುಬ್ಬಣ್ಣ ಎಂದೆನಿಸಿಕೊಂಡರು.ಮುಂದೆ ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ 1963 ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದರು.  

3 /5

ವಕೀಲರಾಗಿ ವ್ರತ್ತಿ ಬದುಕು ಆರಂಭಿಸಿದ ಇವರು ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ಸಂಗೀತದ ಕಡೆ ಮುಖ ಮಾಡದಿದ್ದರೂ, ರಕ್ತಗತವಾಗಿದ್ದ ಸಂಗೀತ ಆಗಾಗ ಇವರನ್ನು ಎಚ್ಚರಿಸಿ ಶಾಲಾ ಸಮಾರಂಭಗಳಲ್ಲಿ ಹಾಡುವಂತೆ ಪ್ರೇರೇಪಿಸುತ್ತಿತ್ತು.

4 /5

ನಂತರ ತಮ್ಮ ವ್ಯಾಸಂಗದ ಕಡೆ ಗಮನ ಹರಿಸಿದ ಸುಬ್ಬಣ್ಣ ಬಿ.ಎ.,ಬಿ.ಕಾಂ.,ಎಲ್.ಎಲ್.ಬಿ.,ಪದವೀದರರು.ವಕೀಲರಾಗಿ ವ್ರತ್ತಿ ಬದುಕು ಆರಂಭಿಸಿದ ಇವರು ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ಸಂಗೀತದ ಕಡೆ ಮುಖ ಮಾಡದಿದ್ದರೂ, ರಕ್ತಗತವಾಗಿದ್ದ ಸಂಗೀತ ಆಗಾಗ ಇವರನ್ನು ಎಚ್ಚರಿಸಿ ಶಾಲಾ ಸಮಾರಂಭಗಳಲ್ಲಿ ಹಾಡುವಂತೆ ಪ್ರೇರೇಪಿಸುತ್ತಿತ್ತು.

5 /5

ಅವರ ಬಳಿಯಲ್ಲಿಯೇ ತಮ್ಮ ಪ್ರಾಥಮಿಕ ಸಂಗೀತಾಭ್ಯಾಸ ಆರಂಭಿಸಿದರು. ಇವರೊಂದಿಗೆ ಹೆಸರಾಂತ ಗಾಯಕಿ ಕರ್ನಾಟಕದ ಕೋಗಿಲೆ ಬಿ.ಕೆ. ಸುಮಿತ್ರಾ ಅವರೂ ಸೇರಿ ಕೆಲವು ವರ್ಷಗಳ ಕಾಲ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡಿದರು.