ನಿರ್ಗಮಿತ ರಾಷ್ಟ್ರಪತಿ​​ಗೆ ಪಿಎಂ ಮೋದಿಯಿಂದ 'Farewell Dinner ಪಾರ್ಟಿ' : ಹೇಗಿತ್ತು ಗೊತ್ತಾ?

ಈ ಬೀಳ್ಕೊಡುಗೆ ಔತಣಕೂಟದಲ್ಲಿ ಎಲ್ಲ ಉನ್ನತ ರಾಜಕಾರಣಿಗಳ ಜೊತೆಗೆ ಪದ್ಮ ಪ್ರಶಸ್ತಿ ಪುರಸ್ಕೃತರೂ ಭಾಗವಹಿಸಿದ್ದರು. ಈ ಶುಭಗಳಿಗೆಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.

ಪ್ರಸ್ತುತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ತಮ್ಮ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿ ಜುಲೈ 24 ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಗೌರವಾರ್ಥ ಬೀಳ್ಕೊಡುಗೆ ಔತಣ ಕೂಟ ಏರ್ಪಡಿಸಿದ್ದರು. ಈ ಬೀಳ್ಕೊಡುಗೆ ಔತಣಕೂಟದಲ್ಲಿ ಎಲ್ಲ ಉನ್ನತ ರಾಜಕಾರಣಿಗಳ ಜೊತೆಗೆ ಪದ್ಮ ಪ್ರಶಸ್ತಿ ಪುರಸ್ಕೃತರೂ ಭಾಗವಹಿಸಿದ್ದರು. ಈ ಶುಭಗಳಿಗೆಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.

 

1 /6

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಆತಿಥ್ಯ ವಹಿಸಿದ್ದರು. ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ಸಮಾರಂಭಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದರು. ಈ ವೇಳೆ ಇಬ್ಬರೂ ಕೈಮುಗಿದು ನಮಸ್ಕರಿಸಿ ಯೋಗಕ್ಷೇಮ ವಿಚಾರಿಸಿಕೊಂಡರು.

2 /6

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗಾಗಿ ಆಯೋಜಿಸಲಾದ ಈ ಬೀಳ್ಕೊಡುಗೆ ಔತಣಕೂಟಕ್ಕೆ ನೂತನವಾಗಿ ಆಯ್ಕೆಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಸಂಪುಟದ ಸದಸ್ಯರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಗಣ್ಯರನ್ನು ಸಹ ಆಹ್ವಾನಿಸಲಾಗಿತ್ತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಔತಣಕೂಟದಲ್ಲಿ ಉಪಸ್ಥಿತರಿದ್ದರು.

3 /6

ಸಮಾರಂಭದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕೂಡ ಆಗಮಿಸಿದ್ದರು. ಮುಂದಿನ ತಿಂಗಳು ಆಗಸ್ಟ್ 10 ರಂದು ಉಪಾಧ್ಯಕ್ಷರಾಗಿ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ನೂತನ ಉಪರಾಷ್ಟ್ರಪತಿ ಆಯ್ಕೆಗೆ ಎನ್‌ಡಿಎಯ ಜಗದೀಪ್ ಧನಕರ್ ಮತ್ತು ವಿರೋಧ ಪಕ್ಷಗಳ ಮಾರ್ಗರೇಟ್ ಆಳ್ವಾ ನಡುವೆ ಚುನಾವಣೆ ನಡೆಯಲಿದೆ.

4 /6

ಸಮಾರಂಭದಲ್ಲಿ ಗಿರಿಜನ ಮುಖಂಡರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ದೇಶದಲ್ಲೇ ಮೊದಲ ಬಾರಿಗೆ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಈ ಬೀಳ್ಕೊಡುಗೆ ಔತಣಕೂಟಕ್ಕೆ ಅನೇಕ ದೊಡ್ಡ ಬುಡಕಟ್ಟು ನಾಯಕರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಬುಡಕಟ್ಟು ಮುಖಂಡರು ಬಹಳ ಸಂತೋಷದಿಂದ ಔತಣಕೂಟದಲ್ಲಿ ಭಾಗವಹಿಸಿದ್ದರು.

5 /6

ತಮ್ಮ ವಿಶಿಷ್ಟ ಕಾರ್ಯಶೈಲಿಗೆ ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಔತಣಕೂಟದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತ ಹಲವು ದೊಡ್ಡ ವ್ಯಕ್ತಿಗಳನ್ನು ಆಹ್ವಾನಿಸಿದ್ದರು. ಈ ಸಮಾರಂಭದಲ್ಲಿ 4 ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಎಂಸಿ ಮೇರಿ ಕೋಮ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಭಾಗವಹಿಸಿದ್ದರು. 

6 /6

ಜುಲೈ 24 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರವರೆಗೆ ಇದೆ. ದ್ರೌಪದಿ ಮುರ್ಮು ಅವರು ಮರುದಿನ ಅಂದರೆ ಜುಲೈ 25 ರಂದು ಬೆಳಿಗ್ಗೆ 10.15 ಕ್ಕೆ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ದೇಶದ ನೂತನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರಿಗೆ ಮೂರು ಸೇನೆಯಿಂದ ಗೌರವ ರಕ್ಷೆ ನೀಡಲಾಗುತ್ತದೆ.